ದರೋಡೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿಗಳ ಬಂಧಿಸಿದ ಪೊಲೀಸರು


Team Udayavani, Apr 21, 2017, 11:33 AM IST

arrest.jpg

ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಬೆದರಿಸಿ ಏಳು ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಯಶವಂತಪುರ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಗುಜರಾತ್‌ ಮೂಲದ ಅಹಮದ್‌ ಮೆಮನ್‌, ಆಸೀಂ, ಸುಹೈಲ್‌, ಮಕೀಬ್‌ ಪಠಾಣ್‌ ಬಂಧಿತರು. 

ಯಶವಂತಪುರ ಆರ್‌ಎಂಸಿ ಯಾರ್ಡ್‌ನಲ್ಲಿ ಬೇಳೆ ವ್ಯಾಪಾರಿಯಾಗಿರುವ ಗುಜರಾತ್‌ ಮೂಲದ ಟಾಡಾ ಅಶ್ವಕ್‌ ಸಗಟು ವ್ಯಾಪಾರಿಗಳಿಂದ ಹಣ ಸಂಗ್ರಹಿಸಿಕೊಂಡು ಬುಧವಾರ ರಾತ್ರಿ 1-30ರಲ್ಲಿ ದ್ವಿಚಕ್ರ ವಾಹನದಲ್ಲಿ ಎಚ್‌ಎಂಟಿ ಲೇಔಟ್‌ನಲ್ಲಿರುವ ಮನೆಗೆ ವಾಪಸಾಗುತ್ತಿರುಧಿವಾಗ ಬಿ.ಕೆ ನಗರ ಎರಡನೇ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಅಲ್ಲದೆ, ಹಲ್ಲೆ ನಡೆಸಿ ಅವರ ಬಳಿಯಿದ್ದ 7.11ಲಕ್ಷ  ನಗದು ದೋಚಿ ಪರಾರಿಯಾದರು.

ಅಶ್ವಕ್‌ ಕೂಡಲೇ ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಂಟ್ರೋಲ್‌ ರೂಂ ಸಿಬ್ಬಂದಿ ಪೊಲೀಸ್‌ ಠಾಣೆಗಳ ಸಿಬ್ಬಂದಿಗೆ ವಿಷಯ ತಲುಪಿಸಿದ್ದರು. ಇದರಿಂದ ರಾತ್ರಿ ಪಾಳಿ ಸೇವೆಯಲ್ಲಿದ್ದ ಪೊಲೀಸರು ಜಾಗೃತಗೊಂಡಿದ್ದರು. ಎಂಟನೇ ಮೈಲಿಯಲ್ಲಿ ರಾತ್ರಿ ಪಾಳಿ ಗಸ್ತಿನಲ್ಲಿದ್ದ ಬಾಗಲೂರು ಠಾಣೆ ಪೇದೆ ಅಶೋಕ್‌ ಹಾಗೂ ಗೃಹರಕ್ಷಕ ದಳ ಗಾರ್ಡ್‌ ಗೌತಮ್‌ ಅವರಿಗೂ ದರೋಡೆ ವಿಷಯ ಗೊತ್ತಾಗಿ ಅವರೂ ಎಚ್ಚರವಹಿಸಿದ್ದರು.

ಸ್ವಲ್ಪ ಸಮಯದ ನಂತರ ಆರೋಪಿ ಮಕೀಬ್‌ ಪಠಾಣ್‌ ಇದೇ ಮಾರ್ಗದಲ್ಲಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ. ಆತನನ್ನು ಹಿಡಿದುಕೊಂಡು ವಿಚಾರಣೆಗೊಳಪಡಿಸಿದಾಗ ವ್ಯಾಪಾರಿ ದರೋಡೆ ಪ್ರಕರಣದ ಬಗ್ಗೆ ಆತ ಬಾಯ್ಬಿಟ್ಟ. ಕೂಡಲೇ ಕಾರ್ಯಪ್ರವೃತ್ತರಾದ ಯಶವಂತಪುರ ಠಾಣೆ ಪೊಲೀಸರು ಉಳಿದ ಮೂವರು ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ್ದ ಹಣ ವಶಪಡಿಸಿಕೊಂಡರು.

ನಾಲ್ವರು ಆರೋಪಿಗಳು ಆರ್‌ಎಂಸಿ ಯಾರ್ಡ್‌ನಲ್ಲಿ ಲೆಕ್ಕಬರೆಯುವ ಕೆಲಸ ಮಾಡಿಕೊಂಡಿದ್ದಾರೆ. ದರೋಡೆಗೊಳಧಿಗಾಗಿದ್ದ ಅಶ್ವಕ್‌, ಪ್ರತಿದಿನ ಹಣ ಸಂಗ್ರಹ ಮಾಡಿಕೊಂಡು ಹೋಗುವ ಕುರಿತು ಆರೋಪಿಗಳು ಮಾಹಿತಿ ಪಡೆದುಕೊಂಡಿದ್ದರು. ಅದರಂತೆ ಬುಧವಾರ ರಾತ್ರಿ ದರೋಡೆ ಮಾಡಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.