ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ: ಶೇ.20ರಷ್ಟು ಶಿಕ್ಷಕರ ಗೈರು ಹಾಜರಿ
Team Udayavani, Apr 21, 2017, 12:03 PM IST
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ರಾಜ್ಯಾದ್ಯಂತ ಗುರುವಾರದಿಂದ ಆರಂಭವಾಗಿದೆ. ಸಕಾರಣವಿಲ್ಲದೆ ಮೌಲ್ಯಮಾಪನಕ್ಕೆ ಗೈರುಹಾಜರಾದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಮಂಡಳಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಮೊದಲ ದಿನ ಶೇ.80ರಷ್ಟು ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಿದ್ದಾರೆ.
ಶೇ. 20ರಷ್ಟು ಶಿಕ್ಷಕರು ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೈರು ಹಾಜ ರಾಗಿರುವ ಎಲ್ಲಾ ಶಿಕ್ಷಕರೂ ಶುಕ್ರವಾರ ತಮ್ಮನ್ನು ನಿಯೋಜಿ ಸಿರುವ ಮೌಲ್ಯಮಾಪನ ಕೇಂದ್ರ ಗಳಿಗೆ ಹಾಜರಾಗಿ ವರದಿ ಮಾಡಿಕೊಳ್ಳಬೇಕು. ತಪ್ಪಿದರೆ ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾದ್ಯಂತ 225 ಕೇಂದ್ರಗಳಲ್ಲಿ ಮೌಲ್ಯ ಮಾಪನ ನಡೆಯುತ್ತಿದ್ದು, ಉಪಮುಖ್ಯಮೌಲ್ಯ ಮಾಪಕರು, ಸಹಾಯಕ ಮುಖ್ಯಮೌಲ್ಯಮಾಪಕರು ಮಂಗಳವಾರ ಮತ್ತು ಬುಧವಾರ ಹಾಜರಾಗಿ ಉತ್ತರಪತ್ರಿಕೆಗಳ ಕೋಡಿಂಗ್, ಡೀಕೋಡಿಂಗ್ ಕಾರ್ಯ ಮುಗಿಸಿದ್ದರು. ಗುರುವಾರ ಸುಮಾರು 45 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಿದ್ದಾರೆ.
ಮೇ 10ರಂದು ಫಲಿತಾಂಶ ಕಷ್ಟವಲ್ಲ: ಮೌಲ್ಯಮಾಪನ ಕಾರ್ಯ ಸಮರ್ಪಕವಾಗಿ ನಡೆದರೆ ಮೇ 10ಕ್ಕೆ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ. ಮೌಲ್ಯಮಾಪನಕಾರ್ಯ ಪೂರ್ಣಗೊಳ್ಳಲು ಎಷ್ಟು ದಿನ ಬೇಕು ಎಂದು ಈಗಲೇ ಹೇಳಲು ಸಾಧ್ಯವಿಲ್ಲ.
ಎಲ್ಲವೂ ವ್ಯವಸ್ಥಿತವಾಗಿ ಮತ್ತು ಅಂದುಕೊಂಡಂತೆ ನಡೆದರೆ ಸಚಿವರು ಹೇಳಿದಂತೆ ಮೇ 10ಕ್ಕೆ ಫಲಿತಾಂಶ ನೀಡುವುದು ಕಷ್ಟವಲ್ಲ ಎಂದು ವೇನೂ ಆಗುವುದಿಲ್ಲ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ