ಮಾತೃ ಭಾಷೆಗೆ ಆದ್ಯತೆ ನೀಡಿ: ವಿದ್ಯಾಸಾಗರ್ ರಾವ್
Team Udayavani, Apr 24, 2017, 12:16 PM IST
ಬೆಂಗಳೂರು: ಇಂಗ್ಲಿಷ್ ವ್ಯಾಮೋಹ ಬಿಟ್ಟು ಮಾತೃಭಾಷೆಗೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕು ಎಂದು ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ಅಭಿಪ್ರಾಯಪಟ್ಟರು.
ತೆಲುಗು ವಿಜ್ಞಾನ ಸಮಿತಿ ಹಾಗೂ ಟಿ.ಸುಬ್ಬರಾಮಿರೆಡ್ಡಿ ಲಲಿತಕಲಾ ಪರಿಷತ್ ವತಿಯಿಂದ ನಗರದಲ್ಲಿ ನಡೆದ ಯುಗಾದಿ ಉತ್ಸವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹಾಗೂ ತೆಲುಗು ನಟ ಡಾ.ರಾಜೇಂದ್ರ ಪ್ರಸಾದ್ ಅವರಿಗೆ “ಶ್ರೀಕೃಷ್ಣ ದೇವರಾಯ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.
“ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲೇ ಇರಬೇಕು. ನಾನು ಯಾವುದೇ ರಾಜ್ಯದಲ್ಲಿದ್ದರೂ ಇದನ್ನೇ ಪ್ರತಿಪಾದಿಸುತ್ತೇನೆ’ ಎಂದು ಹೇಳಿದರು. ಮಾತೃಭಾಷೆಯಲೇ ವ್ಯಾಸಂಗ ಮಾಡಿದವರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇದನ್ನು ಅರಿತೆ ಬ್ರಿಟಿಷರು ನಮ್ಮ ಮೇಲೆ ಇಂಗ್ಲಿಷ್ ಹೇರಿದರು. ಅದನ್ನು ನಾವು ವ್ಯಾಮೋಹ ಮಾಡಿಕೊಂಡಿದ್ದೇವೆ.
ಪೋಷಕರು ಪ್ರಮುಖವಾಗಿ ಮಾತೃ ಭಾಷೆಯಲ್ಲೇ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡಲು ಮನಸ್ಸು ಮಾಡಬೇಕು ಎಂದು ಹೇಳಿದರು. ಸಚಿವ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, “ತೆಲುಗು ಮತ್ತು ಕನ್ನಡ ಭಾಷೆಗೆ ಸಾಕಷ್ಟು ಸಾಮ್ಯತೆ ಇದೆ. ಕನ್ನಡ ಮತ್ತು ತೆಲುಗು ಭಾಷಿಕರು ಸೌಮ್ಯ ಸ್ವಭಾವದವರು.
ಇಬ್ಬರ ನಡುವೆ ಸಂಘರ್ಷ ಸಂಭವಿಸಿದ ಉದಾಹರಣೆಯೇ ಇಲ್ಲ’ ಎಂದು ಹೇಳಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, “ಕನ್ನಡ ಮತ್ತು ತೆಲುಗು ಭಾಷೆಗಳನ್ನು 15 ದಿನಗಳಲ್ಲಿ ಕಲಿಯಬಹುದು. ಎರಡೂ ಭಾಷೆಗಳ ಲಿಪಿಯಲ್ಲೂ ಸಾಮ್ಯತೆ ಇದೆ. ಕನ್ನಡ ಮತ್ತು ತೆಲುಗು ಭಾಷಿಕರ ನಡುವೆ ಹಿಂದಿನಿಂದಲೂ ಉತ್ತಮ ಭಾಂದವ್ಯವಿದೆ.
ಕೃಷ್ಣದೇವರಾಯ ಕರ್ನಾಟಕ ಮತ್ತು ಆಂಧ್ರ ಭಾಗದಲ್ಲಿ ಆಳ್ವಿಕೆ ನಡೆಸಿ ಎರಡೂ ಭಾಷೆಗಳ ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀಡಿದ್ದರು ಎಂದು ಸ್ಮರಿಸಿದರು. ಲಲಿತಕಲಾ ಪರಿಷತ್ ವ್ಯವಸ್ಥಾಪಕ ಅಧ್ಯಕ್ಷ ಡಾ.ಟಿ.ಸುಬ್ಬರಾಮಿರೆಡ್ಡಿ, ಪರಿಷತ್ನ ಕರ್ನಾಟಕ ವಿಭಾಗದ ಗೌರವಾಧ್ಯಕ್ಷ ಕೆ.ಶ್ರೀನಿವಾಸಲು ರೆಡ್ಡಿ, ಕಾರ್ಯನಿರ್ವಾಹಕ ಅಧ್ಯಕ್ಷ ಡಾ.ಕೆ.ಜೆ.ಪುರುಷೋತ್ತಮ್, ತೆಲುಗು ವಿಜ್ಞಾನ ಸಮಿತಿ ಅಧ್ಯಕ್ಷ ಡಾ.ಎ.ರಾಧಾಕೃಷ್ಣರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ