ಇನ್ನೂ ಮೂರು ದಿನ ಪೊಲೀಸ್‌ ವಶಕ್ಕೆ ನಾಗರಾಜ್‌


Team Udayavani, May 23, 2017, 12:34 PM IST

bomb-nagaaa.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಾಗರಾಜ್‌ ಮತ್ತು ಆತನ ಇಬ್ಬರು ಮಕ್ಕಳನ್ನು ಹೆಣ್ಣೂರು ಪೊಲೀಸರು ಮತ್ತೆ ಮೂರು ದಿನ ವಶಕ್ಕೆ ಪಡೆದಿದ್ದಾರೆ. ಮೇ 11ರಂದು ತಮಿಳುನಾಡಿನ ವೆಲ್ಲೂರಿನಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, 11 ದಿನಗಳ ಕಾಲ ವಶಕ್ಕೆ ಪಡೆದಿದ್ದರು.

ಇದೀಗ ಪೊಲೀಸ್‌ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಮೇಯೋ ಹಾಲ್‌ನಲ್ಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಮೇ 25ರವರೆಗೆ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಿ ಆದೇಶಿಸಿದೆ.

ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಆರೋಪಿ ಗಳನ್ನು ಬಂಧಿಸಬೇಕಿದೆ. ಜತೆಗೆ ಆರೋಪಿಗಳನ್ನು ತಮಿಳನಾಡಿನ ವೆಲ್ಲೂರು ಸೇರಿ ಹಲವೆಡೆ ಕರೆದೊಯ್ದು ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ನೀಡುವಂತೆ ಮನವಿ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಮೂರು ದರೋಡೆ ಪ್ರಕರಣಗಳ ಸಂಬಂಧ ನಾಗರಾಜನನ್ನು ತಮ್ಮ ವಶಕ್ಕೆ ಪಡೆಯಲು ಕೆಂಗೇರಿ ಠಾಣೆ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಸೋಮವಾರ ವಿಚಾರಣೆಗೆ ಹಾಜರಾದ ನಾಗರಾಜನ ಇಬ್ಬರು ಪತ್ನಿಯರ ಪೈಕಿ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮಿಗೆ ನಾಗರಾಜನ ಅವ್ಯವಹಾರದ ಸಂಪೂರ್ಣ ಮಾಹಿತಿ ಇದೆ. ಲಕ್ಷ್ಮಿಗೆ ಹೊಸ ನೋಟುಗಳನ್ನು ಇಟ್ಟಿರುವ ಜಾಗ ತಿಳಿದಿದೆ ಎಂದು ನಾಗರಾಜ್‌ ವಿಚಾರಣೆ ವೇಳೆ ಹೇಳಿದ್ದ.

ಈ ಹಿನ್ನೆಲೆಯಲ್ಲಿ ಲಕ್ಷ್ಮಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಸಾಲ ಮಾಡಿಯಾದರೂ ಹಣ ಕೊಡುತ್ತೇನೆಂದು ಎರಡು ದಿನಗಳ ಕಾಲಾವಕಾಶ ಕೋರಿದ್ದಾರೆ. ಆದರೆ, ಮಂಗಳವಾರ ಸಂಜೆವರೆಗೂ ಅವರಿಗೆ ಸಮಯಾವಕಾಶ ಕೊಟ್ಟಿದ್ದು, ಸೂಕ್ತ ಮಾಹಿತಿ ನೀಡದಿದ್ದಲ್ಲಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆಯುವುದಾಗಿ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ. 

ಚೆನ್ನೈನಲ್ಲಿ ಬದಲಾವಣೆಗೆ ಸಂಚು: ವಿಚಾರಣೆ ವೇಳೆ ನಾಗರಾಜ್‌, “ನಾನು 20 ಕೋಟಿ ರೂ. ಸಂಗ್ರಹಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ಸ್ನೇಹಿತನೊಬ್ಬನ ಮೂಲಕ ಶೇ.10ರಷ್ಟು ಕಮಿಷನ್‌ ಆಧಾರದಲ್ಲಿ ನೋಟುಗಳ ಬದಲಾವಣೆಗೆ ಯೋಜನೆ ರೂಪಿಸಿದ್ದೆ. ಇದೇ ಹಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸಿದ್ದೆ. ಆದರೆ, ನನ್ನ ಬಳಿಯಿದ್ದದ್ದು ಹಳೇ ನೋಟುಗಳು, ಹೊಸ ನೋಟುಗಳಲ್ಲ,’ ಎಂದು ಆರೋಪಿ ಪುನರುಚ್ಚರಿಸಿದ್ದಾನೆಂದು ಮೂಲಗಳು ತಿಳಿಸಿವೆ.

ಪತಿ- ಪತ್ನಿ ಚರ್ಚೆ
ಸೋಮವಾರ ವಿಚಾರಣೆಗೆ ಹಾಜರಾದ ಪತ್ನಿಯರ ಪೈಕಿ ಲಕ್ಷ್ಮಿ ಜತೆ ಮಾತನಾಡಲು ನಾಗರಾಜ್‌ ಮನವಿ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪತಿ-ಪತ್ನಿಯ ಮಾತುಕತೆಗೆ 10 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಈ ವೇಳೆ ಅವರಿಬ್ಬರೂ ತಮಿಳು ಭಾಷೆಯಲ್ಲಿ ಚರ್ಚಿಸಿದ್ದಾರೆ. ವಂಚಿಸಿದ ಹಣವನ್ನು ಕೊಟ್ಟು ಬಿಡುಗಡೆಗೆ ಸಹಾಯ ಮಾಡುವಂತೆ ಪತ್ನಿ ಬಳಿ ಆರೋಪಿ ಮನವಿ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಿಟ್ಬುಡಿ ಸ್ವಾಮಿ
ಸೋಮವಾರ ಮಧ್ಯಾಹ್ನ ಕೋರ್ಟ್‌ಗೆ ಹಾಜರಾದ ನಾಗರಾಜ್‌ನನ್ನು ನ್ಯಾಯಾಧೀಶರು ಮತ್ತೆ ಪೊಲೀಸ್‌ ವಶಕ್ಕೆ ಆದೇಶಿಸುತ್ತಿದ್ದಂತೆ ಆರೋಪಿ ಕೋರ್ಟ್‌ ಆವರಣದಲ್ಲೇ ಹೈಡ್ರಾಮಾ ಸೃಷ್ಟಿಸಿದ್ದಾನೆ. ಕೋರ್ಟ್‌ ಆವರಣದಲ್ಲೇ ಗಳಗಳನೇ ಕಣ್ಣೀರು ಸುರಿಸಿ, “ದಯಮಾಡಿ ನನ್ನನ್ನು ಬಿಟ್ಟುಬಿಡಿ ಸ್ವಾಮಿ’ ಎಂದು ಪೊಲೀಸರಿಗೆ ಸನ್ನೆ ಮೂಲಕ ಅಂಗಲಾಚಿದ್ದಾನೆ. ಅಲ್ಲದೆ “ಎಲ್ಲ ಹಣೆ ಬರಹ’ ಎಂದು ಹಣೆ ಮೇಲೆ ಕೈ ಇಟ್ಟು ಪೊಲೀಸ್‌ ವಾಹನ ಏರಿದ್ದಾನೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.