ಕೋಡ್‌ ಸ್ಕ್ಯಾನ್‌ ಮಾಡಿದ್ರೆ ಸಿಗುತ್ತೆ ಗಿಡಗಳ ಮಾಹಿತಿ


Team Udayavani, May 23, 2017, 12:34 PM IST

code-scanner.jpg

ಬೆಂಗಳೂರು: “ಹಸಿರು ಬೆಂಗಳೂರು’ ಕಲ್ಪನೆಯೊಂದಿಗೆ ನಗರದಾದ್ಯಂತ  1 ಕೋಟಿ ಗಿಡ ನೆಡುವ ಅಭಿಯಾನ ನಡೆಸುತ್ತಿರುವ ಆದಮ್ಯಚೇತನ ಸಂಸ್ಥೆ ಇದೀಗ ನೆಟ್ಟ ಸಸಿಗಳ ಸಂರಕ್ಷಣೆ ಹಾಗೂ ಪಾಲನೆ ಉಸ್ತುವಾರಿ ನೋಡಿಕೊಳ್ಳಲು “ಟ್ರೀ ಟ್ರ್ಯಾಕಿಂಗ್‌ ಕಾರ್ಡ್‌’ ಅಳವಡಿಸುವ ಕಾರ್ಯಕ್ಕೆ ಮುಂದಾಗಿದೆ.

ಸಂಸ್ಥೆಯ ವತಿಯಿಂದ ಪ್ರತಿ ಭಾನು ವಾರ ಗಿಡಗಳಿಗೆ ಟ್ರೀ ಟ್ರ್ಯಾಕಿಂಗ್‌ ಕಾರ್ಡ್‌ ಅಳವಡಿಸಲಾಗುತ್ತದೆ. ಇದರಲ್ಲಿ ಕೋಡ್‌ ಅಳವಡಿಸಲಾಗುತ್ತಿದ್ದು, ಸಾರ್ವಧಿಜನಿಕರು ಮೊಬೈಲ್‌ನಲ್ಲಿ ಈ ಕೋಡ್‌ ಸ್ಕ್ಯಾನ್‌ ಮಾಡಿದರೆ ಆ ಗಿಡ ನೆಟ್ಟ ದಿನಾಂಕ, ಸ್ಥಳ, ಅದನ್ನು ಉಸ್ತುವಾರಿ ನೋಡಿಕೊಳ್ಳುತ್ತಿರುವವರ ಮಾಹಿತಿ , ದೂರವಾಣಿ ಸಂಖ್ಯೆ, ಗಿಡದ ಸಂಪೂರ್ಣ ಮಾಹಿತಿ, ಅದರ ವಿಶೇಷಣಗಳ ಕುರಿತು ಮಾಹಿತಿ ಲಭ್ಯವಾಗಲಿದೆ.

ಅಲ್ಲದೆ ಗಿಡದ ಬೆಳವಣಿಗೆಗೆ ಅಗತ್ಯವಾದ ಅಂಶಗಳು, ಗಿಡ ಯಾವ ಹಂತದಲ್ಲಿದೆ, ಗಿಡದ ಬೆಳವಣಿಗೆಗೆ ತೊಂದರೆ ಉಂಟಾಗಿಧಿದೆಯೇ ಎಂಬ ಮಾಹಿತಿಯೂ ಸಂಸ್ಥೆಗೆ ಸಿಗಲಿದ್ದೂ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ. ಸೋಮವಾರ ಕೆಂಪೇಗೌಡನಗರದ ಅದಮ್ಯ ಚೇತನಾ ಸಂಸ್ಥೆಯ ಕಚೇರಿಧಿಯಲ್ಲಿ ಈ ಹೊಸ ಪ್ರಯೋಗದ “ಟ್ರೀ ಟ್ರ್ಯಾಕಿಂಗ್‌ ಕಾರ್ಡ್‌’ನ್ನು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಧಿಕುಮಾರ್‌ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, “ದೇಶದಲ್ಲಿ ಮೊದಲ ಬಾರಿಗೆ ಗಿಡಗಳಿಗೂ ಗುರುತಿನ ಚೀಟಿ ಅಳವಡಿಸುತ್ತಿರುವ ಸಂಸ್ಥೆಯ ಯೋಜನೆ ಶ್ಲಾಘನೀಯ. ಇದೇ ಮಾದರಿಯಲ್ಲಿ ನಗರ ಪ್ರದೇಶಗಳಲ್ಲಿ­ ರುವ ಎಲ್ಲ ಮರ-ಗಿಡಗಳ ಸಂಪೂರ್ಣ ಮಾಹಿತಿ ಲಭ್ಯವಿರುವ ಹಾಗೇ ಆಯಾ ನಗರ ಪಾಲಿಕೆಗಳು ಕ್ರಮ ವಹಿಸಿಕೊಳ್ಳಬೇಕು. ಇದರಿಂದ ಪರಿಸರ ಸಂರಕ್ಷಣೆ ಜೊತೆಗೆ ಗಿಡ, ಮರಗಳ ಕಡಿಯುವಿಕೆ ತಡೆಗಟ್ಟಲು ಸಾಧ್ಯವಾಗಲಿದೆ.

ಈ  ವಿನೂತನ ಟ್ರೀ ಟ್ರ್ಯಾಕಿಂಗ್‌ ಮಾದರಿ ಅಳವಡಿಕೆ ಕುರಿತು ಕೇಂದ್ರ ಅರಣ್ಯ ಇಲಾಖೆ ಹಾಗೂ ಇತರೆ ರಾಜ್ಯಸರ್ಕಾರಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಅಲ್ಲದೆ ನಗರ ಪ್ರದೇಶಗಳಲ್ಲಿ ಭೂ ಮಾಫಿಯಾಗಳ ಅಟ್ಟಹಾಸದಿಂದ ಗಿಡ-ಮರಗಳು ಕಣ್ಮರೆಯಾಗುತ್ತಿವೆ. ಪರಿಸರ ಹಾಳು ಮಾಡಿ  ಕಾಂಕ್ರೀಟ್‌ ಅಭಿವೃದ್ಧಿಯಾಗುತ್ತಿರುವುದು ಬೇಸರದ ಸಂಗತಿ. ಹೀಗಾಗಿ ಪ್ರತಿಯೊಬ್ಬ ನಾಗರಿಕರೂ, ಗಿಡಗಳನ್ನು ನೆಡುವ ಮೂಲಕ ಹಸಿರು ಭಾರತ ನಿರ್ಮಾಣ ಮಾಡಲು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಅದಮ್ಯ ಚೇತನಾ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಕಾರ್ಡ್‌ಧಿನಲ್ಲಿರುವ  ಕೋಡ್‌ ನಂಬರ್‌ನ ಮೂಲಕ ಗಿಡಗಳ ಸಂರಕ್ಷಣೆ ಹಾಗೂ ಪಾಲನೆಗೆ ಸಹಕಾರಿಯಾಗಲಿದೆ. ಸಾರ್ವಜನಿಕರೂ ಈ ಗಿಡಗಳ ಸಂಪೂರ್ಣ ಮಾಹಿತಿ ಪಡೆದು, ಅದರ ರಕ್ಷಣೆ ಹಾಗೂ ಪಾಲನೆಧಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ. ಈಗಾಗಲೇ ಹಲವು ಗಿಡಗಳಿಗೆ ಕಾರ್ಡ್‌ ಅಳವಡಿಸಲಾಗಿದೆ ಎಂದರು. 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.