ಜೋರು ಮಳೆಗೂ ನೀರು ಕಾಣದ ಕೆರೆಗಳು


Team Udayavani, May 23, 2017, 12:35 PM IST

lake-vijaykumar-chan.jpg

ಬೆಂಗಳೂರು: ರಾಜಧಾನಿಯಲ್ಲಿ ಕಳೆದೊಂದು ವಾರದಲ್ಲಿ ಸುರಿದ ಮಳೆ ವಾಡಿಕೆಗಿಂತಲೂ ಶೇ.208ರಷ್ಟು ಅಧಿಕ ಎನ್ನುತ್ತದೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ. ಈ ಪ್ರಮಾಣದ ಮಳೆಗೆ ನಗರದಲ್ಲಿ ಅಳಿದುಳಿದಿರುವ ಕೆಲ ಕೆರೆಗಳಾದರೂ ಭಾಗಶಃ ತುಂಬಬೇಕಿತ್ತು. ಆದರೆ, ಬಹುತೇಕ ಕೆರೆಗಳಿಗೆ ಅಲ್ಪ ಸ್ವಲ್ಪ ನೀರು ಬಂದಿದೆಯೇ ಹೊರತು ಕಾಲುಭಾಗದಷ್ಟೂ ತುಂಬಿಲ್ಲ. ಇದರ ಬದಲಿಗೆ ನಗರದ ಹಲವು ಪ್ರದೇಶಗಳು ಮಾತ್ರ ಜಲಾವೃತಗೊಂಡು ಅವಾಂತರ ಸೃಷ್ಟಿಯಾಗಿದೆ. 

ಹೌದು, ಕಳೆದ ವಾರದಲ್ಲಿ ಎರಡು ದಿನ ಕ್ರಮವಾಗಿ 120 ಮಿ.ಮೀ. ಹಾಗೂ 94.5 ಮಿ.ಮೀ. ಮಳೆ ಸುರಿದಿದೆ. ಇದು ಪೂರ್ವ ಮುಂಗಾರಿನಲ್ಲಿ ವಾಡಿಕೆಗೂ ಮೀರಿದ ಮಳೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಈ ಪ್ರಮಾಣದ ಮಳೆಯಾಗಿರಲಿಲ್ಲ. ಅಲ್ಪಾವಧಿಯಲ್ಲಾದ ಭಾರಿ ಮಳೆಗೆ ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳು, ಅಂಡರ್‌ಪಾಸ್‌ಗಳು, ಫ್ಲೈಓವರ್‌ಗಳು, ತಗ್ಗು ಪ್ರದೇಶ ಗಳು ಜಲಾವೃತಗೊಂಡವು. ಆದರೆ, ಆ ನೀರು ಕೆರೆಗಳಿಗೆ ಹರಿಯಲಿಲ್ಲ. ಈ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. 

ಈ ಪರಿಯ ಮಳೆಗೂ ಕೆರೆಗಳು ತುಂಬದೇ ಇರುವುದು ಏಕೆ ಎಂದು ತಜ್ಞರನ್ನು ಪ್ರಶ್ನಿಸಿದರೆ ಅವರು ಮುಂದಿಟ್ಟ ಕಾರಣಗಳಿವು.
* ನಗರದ ಬಹುತೇಕ ಕೆರೆಗಳಲ್ಲಿ ಭಾರಿ ಪ್ರಮಾಣದ ಹೂಳು ತುಂಬಿದಿದೆ. ಹೀಗಾಗಿ ನೀರು ಸಂಗ್ರಹವಾಗುತ್ತಿಲ್ಲ.
* ಕೆರೆಗಳಿಗೆ ನೀರು ತರುವ ಬಹುತೇಕ ರಾಜಕಾಲುವೆಗಳು, ನೀರುಗಾಲುವೆಗಳು ಒತ್ತುವರಿಯಾಗಿವೆ, ನಶಿಸಿವೆ.
* ಮಳೆ ನೀರು ಕೆರೆಗಳನ್ನು ಸೇರುವಂತೆ ವೈಜ್ಞಾನಿಕ ಯೋಜನೆ ಅಥವಾ ಕ್ರಮ ಕೈಗೊಳ್ಳದೇ ಇರುವುದು.

ಹೀಗಾಗಿ, ಭಾರಿ ಪ್ರಮಾಣದ ಮಳೆ ನೀರು ಚರಂಡಿ, ಮೋರಿಗಳ ಮೂಲಕ ವ್ಯರ್ಥವಾಗಿ ಹೊರ ಹೋಗಿದೆ. ಕೆರೆಗಳಿಗೆ ನೀರು ಬರಲು ಮುಖ್ಯವಾಗಿ ಅದಕ್ಕೆ ಹೊಂದಿಕೊಂಡಂತಿರುವ ಕಾಲುವೆಗಳು, ಕೆರೆ ಕುಂಟೆಗಳಲ್ಲಿ ಮೊದಲು ನೀರು ಸಂಗ್ರಹವಾಗಬೇಕು. ಆದರೆ, ಅವುಗಳೆಲ್ಲವೂ ಒತ್ತುವರಿಯಾಗಿರುವುದರಿಂದ ನಗರದಲ್ಲಿ ಎಷ್ಟೇ ಮಳೆ ಬಂದರೂ ಕೆರೆ ಸೇರುತ್ತಿಲ್ಲ ಎನ್ನುತ್ತಾರೆ ತಜ್ಞರು. 

ಕೆರೆ, ರಾಜಕಾಲುವೆ ಒತ್ತುವರಿಯ ಸಂಬಂಧ ರಚನೆಯಾಗಿದ್ದ ಸದನ ಸಮಿತಿ ವರದಿ ಪ್ರಕಾರ ಬೆಂಗಳೂರು ನಗರ ಹಾಗೂ ನಗರ ಜಿಲ್ಲೆಯಲ್ಲಿ 837 ಕೆರೆಗಳಿದ್ದು, ಅವುಗಳಲ್ಲಿ 656 ಕೆರೆಗಳು ಒತ್ತುವರಿಯಾಗಿವೆ. 181 ಕೆರೆಗಳು ಒತ್ತುವರಿಯಾಗಿಲ್ಲ. ಈ ಪೈಕಿ ನಗರದ ಉತ್ತರದಲ್ಲಿ 73 ಕೆರೆಗಳಿವೆ. ಅವು ಸಾವಿರಾರು ಎಕರೆ ವ್ಯಾಪ್ತಿಯನ್ನು ಒಳಗೊಂಡಿದೆ. ಬಿಡಿಎ, ಬಿಬಿಎಂಪಿ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರ ಈ ಕೆರೆಗಳ ಉಸ್ತುವಾರಿ ವಹಿಸಿಕೊಂಡಿವೆ.

ಬಹುತೇಕ ಕೆರೆಗಳ ರಕ್ಷಣೆಗೆ ಕನಿಷ್ಠ ಕ್ರಮಗಳನ್ನೂ ಇದುವರೆಗೆ ಕೈಗೊಂಡಿಲ್ಲ. ಹೀಗಾಗಿ ನೀರು ಕರೆಗಳಿಗೆ ಸೇರುತ್ತಿಲ್ಲ.  ರಾಜಕಾಲುವೆಗಳ ಒತ್ತುವರಿ ತೆರವು ಮಾಡಲು ಬಿಬಿಎಂಪಿ ವರ್ಷದಿಂದ ಕಾರ್ಯಚರಣೆ ನಡೆಸುತ್ತಿದೆ. ಆದರೆ, ಇದುವರೆಗೆ ಯಾವ ಕಾಲುವೆಗಳೂ ಸುಸಜ್ಜಿತಗೊಂಡಿಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಭಾಗದ ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ ಆರೋಪಿಸುತ್ತಾರೆ. 

ಹಾಗಾದರೆ ನೀರು ಎಲ್ಲಿ ಹೋಯಿತು: ಹೌದು ಭಾರಿ ಪ್ರಮಾಣದ ಮಳೆ ಬಂದರೂ, ಕೆರೆಗಳಲ್ಲಿ ನೀರು ಕಾಣಿಸುತ್ತಿಲ್ಲ. ಹಾಗಾದರೆ ನೀರು ಎಲ್ಲಿ ಹೋಯಿತು? ನಗರದಲ್ಲಿ ಬಿದ್ದ ಮಳೆ ನೀರು ಜನಜೀವನ, ಆಸ್ತಿಪಾಸ್ತಿಗೆ ಹಾನಿ ಮಾಡಿ ಚರಂಡಿ, ಮೋರಿಗಳ ಮೂಲಕ ನಗರದ ಹೊರಗೆ ಹರಿದು ಹೋಗಿದೆ.

ಹಾಹಾಕಾರ ನೀಗಿಸಬಹುದು: ನಗರದ ಕೆರೆಗಳಲ್ಲಿ ನೀರು ಸಂಗ್ರಹವಾದರೆ, ಪ್ರತಿ ಬೇಸಿಗೆಯಲ್ಲಿ ಉಂಟಾಗುವ ನೀರಿನ ಹಾಹಾಕಾರ ತಪ್ಪಿಸಲು ಸಾಧ್ಯವಿದೆ. ಕೆರೆಗಳಲ್ಲಿ ನೀರಿದ್ದರೆ ಅಂತರ್ಜಲ ಪ್ರಮಾಣ ಉತ್ತಮವಾಗಿರುತ್ತದೆ. ನಗರದ ಬಹುತೇಕ ಭಾಗ ಬೋರ್‌ವೆಲ್‌ಗ‌ಳನ್ನೇ ನೆಚ್ಚಿಕೊಂಡಿರುವುದರಿಂದ ಅಂತರ್ಜಲ ವೃದ್ಧಿಯಾದರೆ ನೀರಿನ ಕೊರತೆ ನೀಗಲಿದೆ. 

ನಗರದ ಅರ್ಧ ಭಾಗ ನೀರು ಸಂಗ್ರಹಿಸಿದರೆ ಸಾಕು: ತಜ್ಞರ ಪ್ರಕಾರ 800 ಚದರ ಕಿ.ಮೀ. ವ್ಯಾಪ್ತಿ ಹೊಂದಿರುವ ಬೆಂಗಳೂರಿನಲ್ಲಿ ವಾರ್ಷಿಕ ಅಂದಾಜು 830 ಮಿ.ಮೀ. ವಾಡಿಕೆ ಮಳೆ ಆಗುತ್ತದೆ. ಇದರಲ್ಲಿ 600 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟಡ, ರಸ್ತೆ ವ್ಯಾಪಿಸಿದೆ. ಈ ಪ್ರದೇಶದಲ್ಲಿ ವಾರ್ಷಿಕ 398.4 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಹರಿದುಹೋಗುತ್ತಿದೆ.

ಉಳಿದ 200 ಚದರ ಕಿ.ಮೀ. ಬಯಲು ಪ್ರದೇಶವಾಗಿದ್ದು, ಇಲ್ಲಿ 66 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಹರಿಯುತ್ತದೆ. ಈ ಪ್ರದೇಶಗಳಲ್ಲಿ ಹರಿಯುವ ನೀರಿನಲ್ಲಿ ಅರ್ಧದಷ್ಟನ್ನು ಸಂಗ್ರಹಿಸಿದರೂ, ಅದು ನಗರದ ಕಾಲುಭಾಗದ ನೀರಿನ ಬೇಡಿಕೆ ಈಡೇರಿಸಲಿದೆ. ಆದರೆ, ಈ ನಿಟ್ಟಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೆಲಸ ಆಗಬೇಕಾಗುತ್ತದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ. 

ಶೇ. 208ರಷ್ಟು ಹೆಚ್ಚು ಮಳೆ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರ (ಮೇ 15ರಿಂದ 21)ದ ವಾಡಿಕೆ ಮಳೆ 26.5 ಮಿ.ಮೀ. ಬಿದ್ದ ಮಳೆ 81.6 ಮಿ.ಮೀ. ಅಂದರೆ ವಾಡಿಕೆಗಿಂತ ಶೇ. 208ರಷ್ಟು ಹೆಚ್ಚುವರಿ ಮಳೆಯಾ ಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ. 

ಕೆರೆಗಳು ತುಂಬಲು ಇನ್ನೂ ಒಂದೆರಡು ಮಳೆ ಆಗಬೇಕಾಗುತ್ತದೆ. ಆದರೂ ಕಳೆದ ಒಂದು ವಾರದಲ್ಲಿ ಸುರಿದ ಮಳೆಯಿಂದ ಕೆರೆಗಳಿಗೆ ಸ್ವಲ್ಪ ನೀರು ಬಂದಿದೆ. ಕೆರೆಗಳಿಗೆ ನೀರು ಹರಿದುಹೋಗಲು ಹಲವು ಕ್ರಮಗಳನ್ನೂ ಕೈಗೊಳ್ಳಲಾಗಿದೆ. 
-ಎನ್‌. ಮಂಜುನಾಥ ಪ್ರಸಾದ್‌, ಆಯುಕ್ತರು, ಬಿಬಿಎಂಪಿ.

ಐಐಎಸ್ಸಿಯಲ್ಲಿ ಎರಡು ಹೆಕ್ಟೇರ್‌ ವಿಸ್ತೀರ್ಣದ ಕೆರೆ ಇದೆ. ನಾಲ್ಕೈದು ದಿನಗಳಲ್ಲಿ ಬಿದ್ದ ಮಳೆಗೆ ಆ ಕೆರೆ ಭರ್ತಿಯಾಗಿದೆ. ಯಾಕೆಂದರೆ, ಕೆರೆಗಳಿಗೆ ಹರಿದುಬರುವ ನೀರುಗಾಲುವೆಗಳು ವ್ಯವಸ್ಥಿತವಾಗಿವೆ. 
-ಡಾ.ಟಿ.ವಿ. ರಾಮಚಂದ್ರ, ವಿಜ್ಞಾನಿ, ಐಐಎಸ್ಸಿ

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.