ಅನಾಥರಾಗುತ್ತಾರೆಂದು ಮಕ್ಕಳಿಗೆ ವಿಷ ಕೊಟ್ಟಿದ್ದ ಪೇದೆ ಸುಭಾಷ್
Team Udayavani, May 27, 2017, 12:47 PM IST
ಬೆಂಗಳೂರು: ಪತ್ನಿ ಮತ್ತು ತನ್ನಿಬ್ಬರು ಮಕ್ಕಳಿಗೆ ವಿಷಪ್ರಾಶನ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಆರ್ ಪೇದೆ ಸುಭಾಷ್ನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ನಡುವೆ, “ಮಕ್ಕಳನ್ನು ಕೊಲ್ಲುವ ಉದ್ದೇಶ ನಮ್ಮಿಬ್ಬರಿಗೂ(ಸುಭಾಷ್-ಪತ್ನಿ) ಇರಲಿಲ್ಲ.
ಆದರೆ, ಮಕ್ಕಳು ಅನಾಥರಾಗುತ್ತಾರೆಂದು ಅವರಿಗೂ ವಿಷ ನೀಡಲಾಯಿತು ಎಂದು ಸುಭಾಷ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. “ಆರೋಪಿ ಸುಭಾಷ್ ಕ್ರಿಕೆಟ್ ಬೆಟ್ಟಿಂಗ್ಗೆ ಲಕ್ಷಾಂತರ ರುಪಾಯಿ ಹಣ ಹೂಡಿಕೆ ಮಾಡಿ ನಷ್ಟ ಹೊಂದಿದ್ದರು. ಸಾಲ ಮರು ಪಾವತಿ ಮಾಡಲು ಸ್ನೇಹಿತರು, ಸಂಬಂಧಿಕರ ಬಳಿ ಹಣಕ್ಕೆ ಮನವಿ ಮಾಡಿದ್ದರು.
ಆದರೆ, ಯಾರು ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತಿದ್ದ ಸುಭಾಷ್ ಪತ್ನಿ ವೀಣಾ ಜತೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ, ಸಾಲಗಾರರ ಒತ್ತಡ ಹೆಚ್ಚಾಗುತ್ತಿದ್ದಂತೆ ದಂಪತಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಕೆಲ ದಿನಗಳ ಹಿಂದೆಯೇ ನಿರ್ಧರಿಸಿದ್ದರು. ಆದರೆ, ಮಕ್ಕಳನ್ನು ಕೊಲ್ಲಲು ತೀರ್ಮಾನಿಸಿರಲಿಲ್ಲ’ ಎಂದು ಆರೋಪಿ ಸುಭಾಷ್ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಕ್ಕಳು ಅನಾಥರಾಗ್ತಾರೆ: ಸುಭಾಷ್ ಮತ್ತು ಪತ್ನಿ ವೀಣಾಗೆ ಮಕ್ಕಳನ್ನು ಕೊಲೆ ಮಾಡುವ ಉದ್ದೇಶವಿರಲಿಲ್ಲ. ಆದರೆ, ನಾವು ಸಾವನ್ನಪ್ಪಿದ ಬಳಿಕ ಮಕ್ಕಳು ಅನಾಥರಾಗುತ್ತಾರೆ, ಪಾಲನೆ ಮಾಡುವವರಿಲ್ಲದೇ ಕಷ್ಟ ಅನುಭವಿಸ್ತುತಾರೆ ಎಂದು ದಂಪತಿ ಭಾವಿಸಿದ್ದರು. ಹೀಗಾಗಿ ಇಬ್ಬರೂ ಮಕ್ಕಳಿಗೆ ವಿಷ ನೀಡಲಾಗಿದೆ ಎಂದು ಪೊಲೀಸರು ತಿಳಸಿದ್ದಾರೆ.
ಪತ್ನಿ ಮತ್ತು ಮಕ್ಕಳನ್ನು ಹತ್ಯೆಗೈದಿದ್ದ ಸಿಎಆರ್ ಪೇದೆ ಸುಭಾಷ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷಾಂತರ ರುಪಾಯಿ ಸಾಲ ತೀರಿಸಲಾಗದೆ ಪತ್ನಿ ಮತ್ತು ಮಕ್ಕಳಿಗೆ ವಿಷಪ್ರಾಶನ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಸುಭಾಷ್ ಒಪ್ಪಿಕೊಂಡಿದ್ದಾನೆ. ಆದರೆ, ಇಂಜಕ್ಷನ್ ಮೂಲಕ ಹತ್ಯೆಗೈದಿದ್ದಾನೆ ಎಂಬುದರ ಕುರಿತು ವಿಧಿ ವಿಜ್ಞಾನ ಪರೀûಾ ಕೇಂದ್ರ ವರದಿ ಬಂದ ಬಳಿಕವೇ ತಿಳಿಯಲಿದೆ.
-ಡಾ ಪಿ.ಎಸ್.ಹರ್ಷಾ, ಈಶಾನ್ಯ ವಿಭಾಗದ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ