ಸಾಹಿತಿಗಳಿಗೆ ಬೇಡ ಪ್ರಶಸ್ತಿ-ಬಿರುದಿನ ಬಯಕೆ


Team Udayavani, May 28, 2017, 12:05 PM IST

sahiti-no-prashasti.jpg

ಬೆಂಗಳೂರು: ಸಾಹಿತಿಗಳು, ಕವಿಗಳು, ಬರಹಗಾರರು ಯಾವತ್ತೂ ಪ್ರಶಸ್ತಿಗಳ ಹಿಂದೆ ಹೋಗದೆ ಸಾಹಿತ್ಯ ಕೃಷಿಯತ್ತ ಗಮನ ನೆಟ್ಟಿರಬೇಕು ಎಂದು ನಿತ್ಯೋತ್ಸವ ಕವಿ ನಾಡೋಜ ಕೆ.ಎಸ್‌. ನಿಸಾರ್‌ ಅಹ್ಮದ್‌ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಸಾಧಕರೊಡನೆ ಸಂವಾದ’ ಕಾರ್ಯಕ್ರಮದಲ್ಲಿ ಸಾಧಕರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ನಾನು ಮಾಡಿದ ಸಾಹಿತ್ಯ ಸೇವೆಗೆ ಇಂದು ಅನೇಕ ಪ್ರಶಸ್ತಿಗಳು ನನ್ನನ್ನು ಹುಡುಕಿಕೊಂಡು ಬಂದಿವೆ. ಒಬ್ಬ ಸಾಹಿತಿಗೆ ಪ್ರಶಸ್ತಿಗಳು ಅಥವಾ ಬಿರುದುಗಳು ಬರವಣಿಗೆಗೆ ಸಾಣೆ ಇದ್ದಂತೆ. ಅದರಿಂದ ಬರಹಗಾರನಲ್ಲಿ ಧೈರ್ಯ, ಆತ್ಮಸ್ಥೈರ್ಯ ಬರುತ್ತದೆ. ಆದರೆ, ಪ್ರಶಸ್ತಿ-ಬಿರುದುಗಳೇ ಮುಖ್ಯವಲ್ಲ. ನನ್ನನ್ನು ಒಳಗೊಂಡಂತೆ ಯಾವೊಬ್ಬ ಸಾಹಿತಿ, ಬರಹಗಾರ, ಕವಿ ಯಾವತ್ತೂ ಪ್ರಶಸ್ತಿಗಳ ಬೆನ್ನುಹತ್ತಿ ಹೋಗಬಾರದು ಎಂದು ನಿಸಾರ್‌ ಅಹ್ಮದ್‌ ಕಿವಿಮಾತು ಹೇಳಿದರು. 

ಎಪ್ಪತ್ತರ ದಶಕದಲ್ಲಿ ನಡೆಯುತ್ತಿದ್ದ ಕವಿಗೋಷ್ಠಿಗಳು ಇಂದು ನಡೆಯುತ್ತಿಲ್ಲ. ಅಲ್ಲಲ್ಲಿ ಗೋಷ್ಠಿಗಳು ನಡೆದರೂ ಅದಕ್ಕೆ ಮನ್ನಣೆ ಸಿಗುತ್ತಿಲ್ಲ. ಇದಕ್ಕೆ ಬಹುಮಟ್ಟಿಗೆ ಟಿವಿ ಮಾಧ್ಯಮ ಕಾರಣ ಆಗಿರಬೇಕು ಅನ್ನೋದು ನನ್ನ ಭಾವನೆ. ಆದ್ದರಿಂದ ಕವಿಗೋಷ್ಠಿಗಳನ್ನು ಹೆಚ್ಚೆಚ್ಚು ಆಯೋಜಿಸುವ ಮೂಲಕ ಯುವ ಹಾಗೂ ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಅವಶ್ಯಕತೆ ಇದೆ ಎಂದು ಹೇಳಿದರು. 

“ಜಲಪಾತ’ ಮೊದಲ ಪದ್ಯ: “ನಾನು ಹೈಸ್ಕೂಲ್‌ನಲ್ಲಿದ್ದಾಗ ನಾಲ್ಕೈದು ಮಂದಿ ಸಾಹಿತ್ಯಾಸಕ್ತ ಗೆಳೆಯರು ಸೇರಿ “ವನಸುಮ’ ಹೆಸರಲ್ಲಿ ಹಸ್ತ ಪತ್ರಿಕೆ ಹೊರತರಲು ತೀರ್ಮಾನಿಸಿದೆವು. ಆಗ ಜಲಪಾತ ನೋಡದೇ ಅದರ ಕುರಿತು “ಜಲಪಾತ’ ಎಂಬ ಪದ್ಯ ಬರೆದೆ. ಅದೇ ನನ್ನ ಮೊದಲ ಪದ್ಯ ಆಗಿತ್ತು.

ಕವಿ ಮೈಸೂರು ಅನಂತಸ್ವಾಮಿ ಅವರು ಆಕಾಶವಾಣಿಗೆ ಒಂದು ಹಾಡು ಹಾಡಬೇಕಿತ್ತು. ಅದಕ್ಕೆ ಒಂದು ಕವಿತೆ ಬರೆದುಕೊಡುವಂತೆ ನನ್ನಲ್ಲಿ ಕೇಳಿದರು. ಆಗ, ಅವರಿಗಾಗಿ ಬರೆದದ್ದೇ ನಿತ್ಯೋತ್ಸವ,’ ಎಂದು ನಿಸಾರ್‌ ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.