ಪಾಕ್‌ ನಂಟಿನ ವಿಚಾರಣೆ ವೇಳೆ ಬೆಳಕಿಗೆ ಬಂತು ಮದುವೆ ಪ್ರಸಂಗ


Team Udayavani, May 28, 2017, 12:05 PM IST

pak-investigation.jpg

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಶಿಹಾಬ್‌ ಮತ್ತು ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತೂಂದು “ಮದುವೆ ಪ್ರಸಂಗ’ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಕೇರಳದ ಮೊಹಮದ್‌ ಶಿಹಾಬ್‌ಗ ಈ ಮೊದಲು ಕೇರಳದಲ್ಲಿ ಯುವತಿಯೊಬ್ಬಳನ್ನು ವಿವಾಹವಾಗಿದ್ದ ಎಂಬುದು ಗೊತ್ತಾಗಿದೆ. 

ಕೇಂದ್ರ ತನಿಖಾ ಸಂಸ್ಥೆಗಳ ಜತೆಗೆ ಕೇರಳ ಪೊಲೀಸರು ಕೂಡ ಬೆಂಗಳೂರಿಗೆ ಧಾವಿಸಿ ವಿಚಾರಣೆ ನಡೆಸುತ್ತಿದ್ದು, ಇವರೊಂದಿಗೆ ಶಿಹಾಬ್‌ ಸಹೋದರ ಶಿಬ್ಲಿನ್‌ ಕೂಡ ಕೇರಳ ಪೊಲೀಸರ ಜತೆಗೆ ಬೆಂಗಳೂರಿಗೆ ಬಂದಿದ್ದಾನೆ. ಅಲ್ಲದೇ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತಿರುವ ಆತ, ಸಹೋದರನ ಮತ್ತೂಂದು ಮದುವೆ ಸುದ್ದಿಯನ್ನೂ ಹೊರಹಾಕಿದ್ದಾನೆ.

ಕೇರಳದಿಂದ ಖತಾರ್‌ಗೆ ತೆರಳಿದ್ದ ಮೊಹಮದ್‌ ಶಿಹಾಬ್‌ ಪಾಕಿಸ್ತಾನದ ನಜ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ. ಇದಕ್ಕೂ ಮೊದಲು ಶಿಹಾಬ್‌ಗ 2013ರಲ್ಲೇ ಕೇರಳ ಮೂಲದ ಯುವತಿಯ ಜತೆ ಮದುವೆ ಆಗಿತ್ತು. ಮೊದಲ ಪತ್ನಿಗೆ ಹೆಣ್ಣು ಮಗು ಕೂಡ ಇದೆ. ಆದರೆ, ಖತಾರ್‌ನಲ್ಲಿ ಕೆಲಸಕ್ಕೆಂದು ತಂದೆಯ ಜತೆ ಹೋಗಿದ್ದ ಶಿಹಾಬ್‌, ತಂದೆ ಭಾರತಕ್ಕೆ ವಾಪಾಸಾದರೂ ಆತ ಮಾತ್ರ ಹಿಂದಿರುಗಲಿಲ್ಲ.

ಆಗ ಶಿಹಾಬ್‌ ಹಾಗೂ ಪಾಕಿಸ್ತಾನದ ಯುವತಿ ನಡುವೆ ಪ್ರೇಮಾಂಕುರವಾಗಿದ್ದು. ಮದುವೆ ಕೂಡ ಆಗಿದ್ದ. ಈ ವಿಚಾರ ಮನೆಯವರಿಗೆ ತಿಳಿದಿತ್ತು. ಬಳಿಕ ಕೇರಳಕ್ಕೆ ಬಂದು ಮೊದಲ ಪತ್ನಿಯಿಂದ ವಿಚ್ಛೇದ‌ನ ಪಡೆದುಕೊಂಡಿದ್ದ. ಆದರೆ, ಖತಾರ್‌ನಿಂದ ಬೆಂಗಳೂರಿಗೆ ಬಂದು ನೆಲೆಸಿರುವುದು ತಿಳಿದಿರಲಿಲ್ಲ. ಮಾಧ್ಯಮಗಳ ಮೂಲಕ ತಿಳಿಯಿತು ಎಂದು ಸಹೋದರ ಶಿಬ್ಲಿನ್‌ ಹೇಳಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿ ಇಲ್ಲಿನ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದರು ಎನ್ನುವ ಆರೋಪದ ಮೇಲೆ ಸಿಸಿಬಿ ಪೊಲೀಸರು, ಕೇರಳದ ಮಹಮದ್‌ ಶಿಹಾಬ್‌ ಈತನ ಪತ್ನಿ ಪಾಕಿಸ್ತಾನದ ನಜ್ಮಾ, ಮಹಮದ್‌ ಖಾಸಿಫ್‌ ಮತ್ತು ಈತನ ಪತ್ನಿ ಝೈನಬ್‌ ಕಿರಣ್‌ ಅವರನ್ನು ಬಂಧಿಸಿದ್ದರು.

500 ರೂ.ಗೆ ಆಧಾರ್‌ ಕಾರ್ಡ್‌
ಆರೋಪಿಗಳು ನಕಲಿ ದಾಖಲೆಗಳನ್ನು ಕೊಟ್ಟು 500 ರೂಪಾಯಿಗೆ ಆಧಾರ ಕಾರ್ಡ್‌ ಪಡೆದುಕೊಂಡಿದ್ದಾರೆ. ಆಧಾರ್‌ ಪಡೆಯುವ ವೇಳೆ ಯಾವ ದಾಖಲೆಗಳನ್ನು ಕೊಟ್ಟಿದ್ದರು ಎಂಬ ಬಗ್ಗೆ ಆರೋಪಿಗಳು ಸರಿಯಾಗಿ ಉತ್ತರಿಸುತ್ತಿಲ್ಲ. ದಕ್ಷಿಣ ವಿಭಾಗದಲ್ಲೇ ಆಧಾರ್‌ ಮಾಡಿಸಿರುವುದು ಖಚಿತವಾಗಿದೆ. ಆದರೆ,ಯಾವ ಸೆಂಟರ್‌ನಲ್ಲಿ ಮಾಡಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.