ಸಿನಿಮಾ ಸೋಲು: ಜಾಹಿರಾತು ಸಂಸ್ಥೆ ಮಾಲೀಕನ ಅಪಹರಿಸಿದ ಚಿತ್ರ ತಂಡ ಸೆರೆ!


Team Udayavani, May 28, 2017, 12:05 PM IST

eradu-kanasu-kidnapers.jpg

ಬೆಂಗಳೂರು: ಸಿನಿಮಾಕ್ಕೆ ಸೂಕ್ತ ರೀತಿಯಲ್ಲಿ ಪ್ರಚಾರ ಮಾಡದ ಜಾಹಿರಾತು ಸಂಸ್ಥೆಯ ಮಾಲೀಕನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಸಿನಿಮಾ ನಿರ್ದೇಶಕ ಸೇರಿದಂತೆ ಒಟ್ಟು ಐವರನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಂಧಿಸಿದ್ದಾರೆ. ಇತ್ತೀಚೆಗೆ ತೆರೆ ಕಂಡಿದ್ದ ನಟ ವಿಜಯರಾಘವೇಂದ್ರ ಅವರ “ಎರಡು ಕನಸು’ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ಮದನ್‌, ಸಹ ನಿರ್ದೇಶಕ ಚಲಪತಿ, ಕಿರಣ್‌, ಮೂರ್ತಿ ಹಾಗೂ ಮೋಹನ್‌ ಬಂಧಿತ ಆರೋಪಿಗಳು.  

“ಎರಡು ಕನಸು’ ಚಿತ್ರವನ್ನು ಮದನ್‌ ನಿರ್ದೇಶಿಸಿ, ನಿರ್ಮಿಸಿದ್ದರು. ಸಿನಿಮಾದ ಪ್ರಚಾರದ ಹೊಣೆಯನ್ನು 16 ಲಕ್ಷ ರೂ.ಗಳಿಗೆ “ರವಿ ಅಕ್ಷಯ್‌ ಅಡ್ವಟೈಸಿಂಗ್‌’ ಸಂಸ್ಥೆಯ ಮಾಲೀಕ ಪರಮೇಶ್‌ಗೆ ವಹಿಸಲಾಗಿತ್ತು. ಆದರೆ, ಬಿಡುಗಡೆಯಾದ ಒಂದೆರಡು ದಿನಗಳಲ್ಲೇ ಸಿನಿಮಾ ಸೋತಿತ್ತು. ಇದರಿಂದ ಅಸಮಾಧಾನಗೊಂಡ ಮದನ್‌, ಸೂಕ್ತ ರೀತಿಯಲ್ಲಿ ಚಿತ್ರಕ್ಕೆ ಪ್ರಚಾರ ಸಿಗದಿದ್ದರಿಂದಲೇ ಸೋಲಾಗಿದೆ ಎಂದು ಭಾವಿಸಿ, ಪರಮೇಶ್‌ಜೊತೆ ಜಗಳವಾಡಿದ್ದ.

ಪ್ರಚಾರಕ್ಕೆ ನೀಡಿದ್ದ 16 ಲಕ್ಷದ ಪೈಕಿ 8 ಲಕ್ಷವನ್ನು ವಾಪಸ್‌ ಕೊಡುವಂತೆ ತಿಳಿಸಿದ್ದ. ಆದರೆ, ಮೂರು ಲಕ್ಷ ರೂ.ಗಳನ್ನು ಕೊಡುವುದಾಗಿ ಆರಂಭದಲ್ಲಿ ಒಪ್ಪಿದ್ದ ಪರಮೇಶ್‌, ನಂತರ ಫೋನ್‌ ಕರೆಗಳಿಗೂ ಸಿಕ್ಕಿರಲಿಲ್ಲ. ಇದರಿಂದ ಆಕ್ರೋಶಗೊಂಡಿದ್ದ ಮದನ್‌, ಸಹ ನಿರ್ದೇಶಕ  ಚಲಪತಿ ಜತೆ ಈ ವಿಚಾರ ಚರ್ಚೆ ನಡೆಸಿ ಅಪಹರಿಸಿಯಾದರೂ ಹಣ  ವಸೂಲಿ ಮಾಡಬೇಕೆಂದು ನಿರ್ಧರಿಸಿದ್ದ. 

ಚಲಪತಿ ಅದಾಗಲೇ “ವೇಗ’ ಎಂಬ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದ. ಈ ಚಿತ್ರಕ್ಕೆ ಪ್ರಚಾರ ಮಾಡುವ ನೆಪ ಮುಂದಿಟ್ಟುಕೊಂಡು ಆರೋಪಿಗಳು ಚಲಪತಿ ಮೂಲಕ ಪರಮೇಶ್‌ಗೆ ಕರೆ ಮಾಡಿದ್ದರು. ಇದರ ಬಗ್ಗೆ ಚರ್ಚಿಸಲು ಬಸವೇಶ್ವರನಗರದ ಪುಷ್ಪಾಂಜಲಿ ಟಾಕೀಸ್‌ ಬಳಿ ಬರುವಂತೆಯೂ ಪರಮೇಶ್‌ಗೆ ತಿಳಿಸಿದ್ದರು.

ಸ್ಥಳಕ್ಕೆ ಬಂದ ಪರಮೇಶ್‌ನನ್ನು ಚಲಪತಿ ಹಾಗೂ ಇತರೆ ಆರೋಪಿಗಳು ಕಾರಿನಲ್ಲಿ ಅಪಹರಿಸಿ ದೇವನಹಳ್ಳಿಯ ಕಾಡಯರಪ್ಪನಹಳ್ಳಿಯ ತೋಟದ ಮನೆಗೆ ಕರೆದೊಯ್ದು ಮೂರು ದಿನಗಳ ಕಾಲ ಗೃಹ ಬಂಧನದಲ್ಲಿರಿಸಿ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದರು. ಬಳಿಕ ಪರಮೇಶ್‌ ತಂದೆ ಗುರುಸಿದ್ದಯ್ಯ ಅವರಿಗೆ ಕರೆ ಮಾಡಿ 8 ಲಕ್ಷ ರೂ. ತರುವಂತೆ ಬೇಡಿಕೆ ಇಟ್ಟಿದ್ದರು.

ಇದರಿಂದ ಆತಂಕಕ್ಕೊಳಗಾದ ಗುರುಸಿದ್ದಪ್ಪ ಮಾಗಡಿ ರಸ್ತೆ ಠಾಣೆಗೆ ಮೇ.26ರಂದು ಅಪಹರಣದ ಬಗ್ಗೆ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಗಳ ಮೊಬೈಲ್‌ ನೆಟ್‌ವರ್ಕ್‌ನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. 

ದಾರಿ ತಪ್ಪಿಸಿದ ಅಪಹರಣಕಾರರು
ಮಾಗಡಿ ರಸ್ತೆ ಠಾಣೆ ಮತ್ತು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಗುರುಸಿದ್ದಪ್ಪ ಅವರಿಗೆ ಕರೆ ಮಾಡಿದ ಲೋಕೇಷನ್‌ ಮೊದಲು ಪತ್ತೆ ಹಚ್ಚಿದ್ದಾರೆ. ಬಳಿಕ ಹಣ ತರುತ್ತಿರುವುದಾಗಿ ಗುರುಸಿದ್ದಪ್ಪ ಅವರ ಮೂಲಕ ಅಪಹರಣಕಾರರಿಗೆ ವಿಷಯ ಮುಟ್ಟಿಸಿದ್ದಾರೆ. ಆದರೆ, ಗುರುಸಿದ್ದಪ್ಪ ಅವರ ತೊದಲು ಮಾತಿನಿಂದ ಅನುಮಾನಗೊಂಡ ಆರೋಪಿಗಳು, ಮೊದಲಿಗೆ ಹೆಬ್ಟಾಳದ ಫ್ಲೈಓವರ್‌ ಬಳಿ ಬರುವಂತೆ ಸೂಚಿಸಿದ್ದರು.

ಕೆಲ ಸಮಯದ ಬಳಿಕ ನೆಲಮಂಗಲ ಬಳಿಯ ಕನ್ನಮಂಗಲ ಗೇಟ್‌ ಬಳಿ ಬರುವಂತೆ ಹೇಳಿದ್ದಾರೆ. ತಕ್ಷಣ ಸುಮಾರು 10ಕ್ಕೂ ಅಧಿಕ ಮಂದಿಯ ಪೊಲೀಸರ ತಂಡ ಗುರುಸಿದ್ದಪ್ಪ ಅವರು ಹೋಗುವ ಮೊದಲೇ ಸ್ಥಳದಲ್ಲಿ ಬಿಡುಬಿಟ್ಟಿತ್ತು. ಹಣದ ನಿರೀಕ್ಷೆಯಲ್ಲಿ ಬಂದಿದ್ದ ಐವರು ಆರೋಪಿಗಳನ್ನು ಕೂಡಲೇ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.