ಪಾಲಿಕೆ ಮೈಮರೆತಿದ್ದರಿಂದಲೇ ಮಳೆ ಅವಾಂತರ


Team Udayavani, May 28, 2017, 12:05 PM IST

bbmp.jpg

ಬೆಂಗಳೂರು: ಮಳೆಗಾಲದ ಅವಾಂತರಗಳನ್ನು ತಡೆಗಟ್ಟಲು ಬಿಬಿಎಂಪಿ ಯಾವುದೇ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂಬುದು ಮುಂಗಾರು ಆರಂಭಕ್ಕೂ ಮೊದಲೇ ಜಗಜ್ಜಾಹಿರಾಗಿದೆ. ನಗರದ ಚರಂಡಿ, ಕಾಲುವೆಗಳ ಹೂಳು ತೆರವು ಮಾಡದ್ದರಿಂದ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿದೆ. ಉರುಳುವ ಸ್ಥಿತಿಯಲ್ಲಿದ್ದ ಮರಗಳನ್ನು ತೆರವು ಮಾಡಲು ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬುದಕ್ಕೆ ನಗರದಲ್ಲಿ ಈ ವರೆಗೆ ಧರೆಗೆ ಒರಗಿರುವ ನೂರಾರು ಮರಗಳೇ ಸಾಕ್ಷಿಯಾಗಿದೆ. 

ನಗರದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೇಂದ್ರ ಭಾಗ ಹಾಗೂ ವಾಣಿಜ್ಯ ಪ್ರದೇಶದ ರಸ್ತೆಗಳೇ ಹೆಚ್ಚಾಗಿ ಜಲಾವೃತಗೊಂಡಿವೆ. ಸರ್ಕಾರಿ ಕಚೇರಿಗಳು, ವಾಣಿಜ್ಯ ಕಟ್ಟಡಗಳು ಹೆಚ್ಚಿರುವ ಪ್ರದೇಶಗಳಲ್ಲೇ ನೀರು ಹರಿಯದೆ ಅವಾಂತರವಾಗಿದೆ. ಇನ್ನು ಕೆಲವು ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ ಜನ ಜೀವನವೇ ಅಸ್ತವ್ಯವಸ್ಥೆಗೊಂಡಿದೆ ಇದಕ್ಕೆಲ್ಲ ಕಾರಣ ಹುಡುಕಿ ಹೊರಟರೆ ಕಾಣುವುದು ಬಿಬಿಎಂಪಿಯ ವೈಫ‌ಲ್ಯಗಳ ಸರಮಾಲೆ. 

ಹೂಳು ತೆಗೆಯದೆ ನಿರ್ಲಕ್ಷ್ಯ: ರಾಜಧಾನಿಯಲ್ಲಿ 2000 ಕಿ.ಮೀ. ಉದ್ದದ ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳಿವೆ. ರಸ್ತೆಗಳ ಇಕ್ಕೆಲಗಳಲ್ಲಿರುವ ಚರಂಡಿಗಳಲ್ಲಿನ ಹೂಳನ್ನು ಮಳೆಗಾಲದ ಆರಂಭಕ್ಕೂ ಮುನ್ನ ತೆರವುಗೊಳಿಸುವ ಕಾರ್ಯವೇ ನಡೆಯದಿರುವುದು ಅವಾಂತರಕ್ಕೆ ಮೂಲ ಕಾರಣ. ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು ನಿತ್ಯವೂ ತಮ್ಮ ವ್ಯಾಪ್ತಿಯಲ್ಲಿ ಚರಂಡಿ ಹೂಳು ತೆಗೆಸಬೇಕು ಹಾಗೂ ಚರಂಡಿ ಕಿಂಡಿಗಳನ್ನು ಸ್ವತ್ಛಗೊಳಿಸಬೇಕು.

ಆದರೆ ಬಹುತೇಕ ಕಡೆ ಎಂಜಿನಿಯರ್‌ಗಳು ಈ ರೀತಿ ತಪಾಸಣೆ ನಡೆಸುವ ಅಭ್ಯಾಸವನ್ನೇ ರೂಢಿಸಿಕೊಂಡಿಲ್ಲ. ಇದರಿಂದಾಗಿ ಚರಂಡಿಗಳಲ್ಲಿ ಹೂಳು ತುಂಬಿ ನೀರು ಸರಾಗವಾಗಿ ಹರಿಯದೆ ಸಮಸ್ಯೆಯಾಗುತ್ತಿದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು. ಚರಂಡಿಗಳಲ್ಲಿ ನೀರು ಹರಿದು ಹೋಗಲು ಆಗದ ಸ್ಥಿತಿ ಇರುವುದರಿಂದ ಮಳೆ ನೀರು ರಸ್ತೆಯಲ್ಲಿ ಆವರಿಸುತ್ತಿದೆ. ಹೀಗಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇನ್ನೊಂದೆಡೆ ಡಾಂಬರು ಕೂಡ ಕಿತ್ತು ಹೋಗುತ್ತಿದೆ. ಇದು ಎಂಜಿನಿಯರ್‌ಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ. 

ಹೂಳು ಸಂಗ್ರಹ ಹೇಗೆ: ರಸ್ತೆ ಗುಡಿಸುವ ಪೌರಕಾರ್ಮಿಕರು ಬಹುತೇಕ ಕಡೆ ಕಸವನ್ನು ಚರಂಡಿ ಕಿಂಡಿಗಳಿಗೆ ತಳ್ಳುತ್ತಿದ್ದಾರೆ. ಹೀಗಾಗಿ ಚರಂಡಿ ಕಾಲುವೆಗಳಲ್ಲಿ ಭಾರಿ ಪ್ರಮಾಣದ ಹೂಳು ಸಂಗ್ರಹವಾಗುತ್ತಿದೆ. ಇದು ಪೌರಕಾರ್ಮಿಕರ ನಿರ್ಲಕ್ಷ್ಯ. ಆದರೆ, ಪೌರ ಕಾರ್ಮಿಕರಿಗೆ ಅಗತ್ಯ ಸಲಕರಣೆಗಳನ್ನು ಪಾಲಿಕೆ ನೀಡಿಲ್ಲ. ಹೀಗಾಗಿ ಇದು ಪಾಲಿಕೆ ಹಾಗೂ ಗುತ್ತಿಗೆದಾರರ ಲೋಪವೆನಿಸುತ್ತದೆ.

ಮಳೆಗಾಲದಲ್ಲಿ ಹೂಳೆತ್ತಲು ಆಗಲ್ಲ: ಇತ್ತೀಚೆಗಷ್ಟೇ ನಗರದ ಹಲವೆಡೆ ರಸ್ತೆ ಇಕ್ಕೆಲಗಳ ಚರಂಡಿ ಹೂಳು ತೆರವು ಕಾರ್ಯ ಆರಂಭವಾಗಿತ್ತು. ಆದು ಇನ್ನೂ ಪ್ರಗತಿಯಲ್ಲಿದೆ. ಆದರೆ, ಹೂಳು ತೆಗೆಯುವ ಕಾರ್ಯ ಹಗಲೂ ರಾತ್ರಿ ನಡೆದರೂ 2000 ಕಿ.ಮೀ. ಉದ್ದದ ರಸ್ತೆಗಳ ಚರಂಡಿಗಳ ಹೂಳು ತೆಗೆಯಲು ಇನ್ನೂ 20 ದಿನ ಬೇಕು. ಅಷ್ಟರೊಳಗೆ ಮಳೆ ಇನ್ನೂ ಹೆಚ್ಚಾದರೆ, ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಒಟ್ಟಾರೆ ಎಂಜಿನಿಯರ್‌ಗಳ ನಿರ್ಲಕ್ಷ್ಯಕ್ಕೆ ಇಡೀ ನಗರದ ಜನ ಬೆಲೆ ತೆರುವಂತಾಗಿದೆ.

ಕಾಲುವೆಗಳಲ್ಲಿ ಮ್ಯಾನ್‌ಹೋಲ್‌: ನಗರದ ಹಳೆಯ ಪ್ರದೇಶದಲ್ಲಿ ಬಹುತೇಕ ಕಡೆ ಮಳೆ ನೀರು ಕಾಲುವೆಗಳಲ್ಲಿ ಜಲಮಂಡಳಿ ಅಕ್ರಮವಾಗಿ ಮ್ಯಾನ್‌ಹೋಲ್‌ಗ‌ಳನ್ನು ನಿರ್ಮಿಸಿದೆ. ನಗರದಲ್ಲಿ ಧಾರಾಕಾರ ಮಳೆ ಸುರಿದಾಗ ಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಮ್ಯಾನ್‌ಹೋಲ್‌ಗ‌ಳು ಮುಳುಗಡೆಯಾಗುತ್ತವೆ. ಇದರಿಂದ ತಕ್ಷಣವೇ ಮನೆಗಳಿಗೆ ಒಳಚರಂಡಿ ನೀರು ಹಿಮ್ಮುಖವಾಗಿ ಹರಿದು ಕೊಳಚೆ ನೀರು ನುಗ್ಗುತ್ತಿದೆ. ಹಾಗೆಯೇ ರಸ್ತೆಬದಿಯ ಮ್ಯಾನ್‌ಹೋಲ್‌ಗ‌ಳಿಂದಲೂ ನೀರು ಹೊರಬರುತ್ತಿದೆ. 

ಟೆಂಡರ್‌ಶ್ಯೂರ್‌ ರಸ್ತೆಗಳೂ ಜಲಾವೃತ: ರಾಜಧಾನಿಯಲ್ಲಿ ದುಬಾರಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಟೆಂಡರ್‌ಶ್ಯೂರ್‌ ವಿಧಾನದ ರಸ್ತೆಗಳು ಜಲಾವೃತವಾಗುತ್ತಿವೆ. ಈ ವಿಧಾನದಡಿ ಅಭಿವೃದ್ಧಿಯಾಗಿರುವ ರಸ್ತೆಗಳಲ್ಲಿ ಬಹುತೇಕ ಕಡೆ ಚರಂಡಿ ಕಿಂಡಿಗಳನ್ನೇ ಬಿಟ್ಟಿಲ್ಲ. ಬದಲಿಗೆ ರಸ್ತೆಯಲ್ಲೇ ಕೆಲವೆಡೆ ಕಿಂಡಿ ಬಿಡಲಾಗಿದೆ. ಇದರಿಂದ ನೀರು ಸರಾಗವಾಗಿ ಹರಿಯದೆ, ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಟೆಂಡರ್‌ಶ್ಯೂರ್‌ ವಿಧಾನದ ವಿನ್ಯಾಸವೇ ಆ ರೀತಿಯಾಗಿದ್ದು, ಅದನ್ನು ಜಾರಿಗೊಳಿಸುವುದಷ್ಟೇ ತಮ್ಮ ಜವಾಬ್ದಾರಿ ಎನ್ನುತ್ತಾರೆ.

ಗುತ್ತಿಗೆದಾರರ ಕಾರ್ಯವೈಖರಿಯೂ ಕಾರಣ: ನಿಯಮಾನುಸಾರ ರಸ್ತೆ ಅಭಿವೃದ್ಧಿ ಎಂದರೆ ಮೊದಲಿಗೆ ಚರಂಡಿ ಹೂಳು ತೆರವುಗೊಳಿಸಿ, ಪಾದಚಾರಿ ಮಾರ್ಗವನ್ನು ಸುಸ್ಥಿತಿಗೆ ತಂದು ಕೊನೆಯದಾಗಿ ಡಾಂಬರು ಹಾಕಬೇಕು. ಆದರೆ ಎಲ್ಲೆಡೆ ಮೊದಲಿಗೆ ಡಾಂಬರು ಹಾಕಲಾಗುತ್ತದೆ. ಆನಂತರ ಪಾದಚಾರಿ ಮಾರ್ಗದ ದುರಸ್ತಿ, ಚರಂಡಿಯ ಹೂಳು ತೆಗೆಯಲಾಗುತ್ತದೆ. ಕೆಲವೆಡೆ ಇದನ್ನೂ ಸಮರ್ಪಕವಾಗಿ ನಿರ್ವಹಿಸದ ಕಾರಣ ಹೂಳು ಹೆಚ್ಚಾಗಿ ರಸ್ತೆಯಲ್ಲಿ ಮಳೆ ನೀರು ನಿಲ್ಲುವಂತಾಗುತ್ತದೆ ಎಂದು ಎಂಜಿನಿಯರ್‌ಗಳು ದೂರುತ್ತಾರೆ.

ನಗರದ ಕೇಂದ್ರ ವಾಣಿಜ್ಯ ಜಿಲ್ಲಾ (ಸಿಬಿಡಿ) ಪ್ರದೇಶದ ರಸ್ತೆ, ಚರಂಡಿಗಳು ಕಿರಿದಾಗಿರುವುದರಿಂದ ಮಳೆ ಸುರಿದಾಗ ನೀರು ರಸ್ತೆಗೆ ಹರಿಯುತ್ತದೆ. ಆದರೆ ಸ್ಥಳಾವಕಾಶದ ಕೊರತೆಯಿಂದ ಈ ಚರಂಡಿಗಳ ವಿಸ್ತರಣೆ ಸವಾಲಿನ ಕಾರ್ಯ. ಹಾಗಾಗಿ ನಿರಂತರವಾಗಿ ಹೂಳು ತೆಗೆದು ನೀರು ಹರಿದು ಹೋಗುವ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ.
-ಎಂ.ಆರ್‌.ವೆಂಕಟೇಶ್‌, ಪ್ರಧಾನ ಎಂಜಿನಿಯರ್‌

* ಕೀರ್ತಿಪ್ರಸಾದ್‌.ಎಂ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.