ಸಂಗೀತ ಲೋಕಕ್ಕೆ ಕರ್ನಾಟಕ ಸಂಗೀತವೇ ತಾಯಿ ಇದ್ದಂತೆ 


Team Udayavani, May 28, 2017, 12:05 PM IST

hamsalekha.jpg

ಬೆಂಗಳೂರು: ಇಡೀ ಸಂಗೀತ ಲೋಕಕ್ಕೆ ಕರ್ನಾಟಕ ಸಂಗೀತ ತಾಯಿ ಇದ್ದಂತೆ ಎಂದು ಖ್ಯಾತ ಹಿನ್ನೆಲೆ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಹೇಳಿದ್ದಾರೆ. ಶನಿವಾರ ಹಂಸಲೇಖ ಮ್ಯೂಸಿಕ್‌ ಟ್ರಸ್ಟ್‌ “ಐದನಿ’ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಸಂಗೀತಕ್ಕೆ ಕರ್ನಾಟಕ ಸಂಗೀತ ಮಾತೃಭೂಮಿ ಇದ್ದಂತೆ. ಅದನ್ನು ಇನ್ನಷ್ಟು ಮೇಲೆ ಕೊಂಡೊಯ್ಯುವ ಕೆಲಸ ಆಗಬೇಕಿದ್ದು, ಆ ನಿಟ್ಟಿನಲ್ಲಿ ಹಂಸಲೇಖ ಶ್ರಮಿಸುತ್ತಿದ್ದಾರೆ ಎಂದರು.

“ಹಂಸಲೇಖ ಅವರು ಒಳ್ಳೆಯ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದ್ದಾರೆ. ನಮಿºಬ್ಬರ ಸಮ್ಮಿಲನದಲ್ಲಿ ಇದುವರೆಗೆ ಒಳ್ಳೆಯ ಹಾಡುಗಳೇ ಮೂಡಿ ಬಂದಿವೆ. ಸಂಗೀತ ಕ್ಷೇತ್ರದಲ್ಲಿ ಹಂಸಲೇಖ ಅವರಿಗೇ ಆದ ಒಂದು ಸ್ಥಾನಮಾನವಿದೆ. ದೇಸಿ ಸೊಗಡಿನ ಜಾನಪದ ಕಾರ್ಯಕ್ರಮ ಕೊಡುವ ಮೂಲಕ ನಮ್ಮ ಸಂಗೀತ ಮತ್ತು ಸಂಸ್ಕೃತಿಯ ಉಳಿವಿಗೆ ಹೋರಾಡಿದ್ದಾರೆ ಎಂಬುದು ಹೆಮ್ಮೆಯ ವಿಷಯ ಎಂದರು.

ದೇಸೀ ಸಂಗೀತಕ್ಕೆ ಅಡಿಪಾಯ ಹಾಕಿಕೊಟ್ಟಿರುವುದು ಹಂಸಲೇಖ ಅವರ ಮತ್ತೂಂದು ವಿಶೇಷ. ಎಲ್ಲಾ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು ಈಗ “ಐದನಿ’ ಮೂಲಕ ಹೊಸತನ್ನು ಹೇಳಲು ಹೊರಟಿದ್ದಾರೆ. ಐದು ಸ್ವರಗಳ ರಾಗವೇ “ಐದನಿ’. ಇದರ ವೈವಿದ್ಯವನ್ನು ತಿಳಿಸುವ ಪ್ರಯತ್ನಕ್ಕೆ ಹಂಸಲೇಖ ಮುಂದಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

“ಐದನಿ’ ಎಂಬುದು ಜನಪದ ಸಂಗೀತದ ಶಾಸ್ತ್ರೋಕ್ತ ಶಿರೋನಾಮೆ ಇದ್ದಂತೆ. ಮುಂದಿನ ದಿನಗಳಲ್ಲಿ ದೇಸೀ ಶಾಸ್ತ್ರೀಯ ಸಂಗೀತಕ್ಕೆ ಐದನಿಯೇ ಅಡಿಪಾಯ ಆಗಲಿದೆ.  ಇನ್ನು ಹಂಸಲೇಖ ಸಂಗೀತದಲ್ಲಿ ನಾನು ಹಾಡಿರುವ ಅನೇಕ ಹಾಡುಗಳು ಯಶಸ್ವಿಯಾಗಿವೆ ಎಂದು ಹೇಳಿದ ಅವರು, ಹಂಸಲೇಖ ಅವರ ಈ ವಿನೂತನದ “ಐದನಿ’ ಕಾರ್ಯಕ್ರಮ ಯಶಸ್ವಿಯಾಗಲಿ’ ಎಂದು ಹಾರೈಸಿದರು.

“ಐದನಿ’ ಕಾರ್ಯಕ್ರಮ ಕುರಿತು ಮಾತನಾಡಿದ ಹಂಸಲೇಖ, “ಆಗಸ್ಟ್‌ 21ರ ಜಾನಪದ ದಿನದಂದು “ಐದನಿ’ಗೆ ಚಾಲನೆ ಸಿಗಲಿದೆ. ಅಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಐದನಿ 2017′ ಉದ್ಘಾಟಿಸಲಿದ್ದಾರೆ. ಕಲೆಯ ಮೂಲಕ ಅಣ್ವಸ್ತ್ರದ ಬೆದರಿಕೆಯನ್ನು ಹೋಗಲಾಡಿಸುವ ಸಣ್ಣ ಪ್ರಯತ್ನವನ್ನು ಐದನಿ ಮೂಲಕ ಮಾಡುವುದು ಡಲಾಗುವುದು. ನಮ್ಮ ಮ್ಯೂಸಿಕ್‌ ಟ್ರಸ್ಟ್‌ನಿಂದ ಐದನಿ ಮೂಲ ಕಂಡು ಹಿಡಿಯಲು ಕಳೆದ 12 ವರ್ಷಗಳಿಂದಲೂ ಸಂಶೋಧನೆ ನಡೆಸಲಾಗಿದೆ ಎಂದು ವಿವರಿಸಿದರು.

2018, ಆಗಸ್ಟ್‌ 21 ರಿಂದ ಒಂದು ವಾರ “ಜಗತ್‌ ಜನಪದ ಜಾತ್ರೆ’ ನಡೆಸಲು ಉದ್ದೇಶಿಸಲಾಗಿದೆ. ಇದೊಂದು ಅಂತಾರಾಷ್ಟ್ರೀಯ ಮಟ್ಟದ ದೇಸಿ ಹಬ್ಬವಾಗಿ ಆಚರಣೆಯಾಗಲಿದೆ. ಈ ಜಾತ್ರೆಯಲ್ಲಿ ಐದನಿಯ ವಿಶೇಷ ಹಾಗೂ ಟ್ರಸ್ಟ್‌ನ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ವಿವರಿಸಲಾಗುವುದು. ಭಾರತದ 30 ರಾಜ್ಯಗಳ, ವಿಶ್ವದ 15 ರಾಷ್ಟ್ರಗಳ ಜನಪದ ಕಲಾವಿದರು, ತಜ್ಞರು, ಪ್ರತಿನಿಧಿಗಳು ಈ ಜಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. 

ಐದನಿ ಕಾರ್ಯಕ್ರಮ ಮೂಲಕ ಹನ್ನೊಂದು ತಿಂಗಳ 45 ಪರಿಷ್ಕೃತ ಪ್ರಯೋಗ ಪ್ರದರ್ಶನಗಳನ್ನು ನಡೆಸಲಾಗುವುದು. ಹಂಸಲೇಖ ಮ್ಯೂಸಿಕ್‌ ಟ್ರಸ್ಟ್‌ ಮಾಡಿರುವ ಇದುವರೆಗಿನ ಸಾಧನೆ ಕುರಿತು ಆ ಜಗತ್‌ ಜನಪದ ಜಾತ್ರೆಯಲ್ಲಿ ತಿಳಿಸಿಕೊಡಲಾಗುವುದು. ಇದರೊಂದಿಗೆ ಟ್ರಸ್ಟ್‌ ವತಿಯಿಂದ 11 ತಿಂಗಳ ಕಾಲ ನಡೆದ ಪ್ರಯೋಗಗಳನ್ನೂ ಪ್ರದರ್ಶನ ಮಾಡಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕರ್ನಾಟಕದ ಜಾನಪದ ಕೋಗಿಲೆ ಪದ್ಮಶ್ರೀ ಸುಕ್ರಿ ಬೊಮ್ಮನಗೌಡ ಅವರನ್ನು ಹಂಸಲೇಖ ಮ್ಯೂಸಿಕ್‌ ಟ್ರಸ್ಟ್‌ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಸುಕ್ರಿ ಬೊಮ್ಮನಗೌಡ ಅವರು, ಹಂಸಲೇಖ ಅವರ ಈ “ಐದನಿ’ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.