ಉಚಿತ ವಿದ್ಯುತ್ನ ಮಿತಿ ಮೀರಿದರೆ ಫುಲ್ ಬಿಲ್
Team Udayavani, Jun 23, 2017, 12:17 PM IST
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಬಳಕೆದಾರರ ಉಚಿತ ವಿದ್ಯುತ್ ಬಳಕೆ ಮಿತಿಯನ್ನು 18 ಯೂನಿಟ್ನಿಂದ 40 ಯೂನಿಟ್ಗೆ ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಆದರೆ ಈ ಮಿತಿ ಮೀರಿದರೆ ಬಳಸಿದ ಅಷ್ಟೂ ಯೂನಿಟ್ಗೂ ಶುಲ್ಕ ಪಾವತಿಸಬೇಕಿದೆ.
ಕಳೆದ 2017ರ ಏಪ್ರಿಲ್ 1ರಿಂದಲೇ ಜಾರಿಗೊಳಿಸಿ ಆದೇಶ ಹೊರಡಿಸಿದೆ. 40 ಯೂನಿಟ್ಗಿಂತ ಹೆಚ್ಚು ಬಳಸಿದರೆ ಸಂಪೂರ್ಣ ಬಿಲ್ ಮೊತ್ತ (ಮೊದಲ ಯೂನಿಟ್ನಿಂದ ಬಳಸಿದ ಅಷ್ಟೂ ವಿದ್ಯುತ್ಗೆ) ಬಳಕೆದಾರರು ಪಾವತಿಸಬೇಕು ಎಂದು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ (ಕಂದಾಯ) ದೊರೆಸ್ವಾಮಿ ತಿಳಿಸಿದ್ದಾರೆ.
ಒಂದೊಮ್ಮೆ ಮಿತಿಗಿಂತ ಹೆಚ್ಚು ವಿದ್ಯುತ್ ಬಳಸಿ ನಂತರ ಶುಲ್ಕ ಪಾವತಿಸದಿದ್ದರೆ ಆ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಲಾಗುತ್ತದೆ. ಗ್ರಾಹಕರು ವಿದ್ಯುತ್ ಬಿಲ್ ಮೊತ್ತವನ್ನು ಬೆಸ್ಕಾಂ ವ್ಯಾಪ್ತಿಯ ಗ್ರಾಮ ವಿದ್ಯುತ್ ಪ್ರತಿನಿಧಿಗಳು, ನಗದು ಕೌಂಟರ್, ಎಟಿಪಿ, ಅಂಚೆ ಕಚೇರಿ, ಬೆಂಗಳೂರು ಒನ್, ತುಮಕೂರು ಒನ್ ಹಾಗೂ ದಾವಣಗೆರೆ ಒನ್ ಕೇಂದ್ರಗಳಲ್ಲಿ ಪಾವತಿಸಬಹುದು ಎಂದು ಹೇಳಿದ್ದಾರೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕ ಸುಮಾರು ಏಳು ಲಕ್ಷವಿದ್ದು, ಈ ಕುಟುಂಬಗಳು ಬಳಸುವ ವಿದ್ಯುತ್ಗೆ ತಗಲುವ ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು