ಅಕ್ರಮ ಗಣಿಗಾರಿಕೆ ಪ್ರಕರಣಗಳ ಮಧ್ಯಂತರ ತನಿಖಾ ವರದಿ ಸಲ್ಲಿಕೆ
Team Udayavani, Jun 23, 2017, 12:17 PM IST
ಬೆಂಗಳೂರು: ರಾಜ್ಯದ ಅಕ್ರಮ ಗಣಿಗಾರಿಕೆ ಪ್ರಕರಣಗಳ ಸಂಬಂಧ ಇದುವರೆಗೂ ನಡೆಸಿರುವ ತನಿಖೆಯ ಸಂಬಂಧ ಲೋಕಾಯುಕ್ತ ವಿಶೇಷ ತನಿಖಾ ತಂಡ ಸುಪ್ರೀಂಕೋರ್ಟ್ಗೆ ಮಧ್ಯಂತರ ತನಿಖಾ ವರದಿಯನ್ನು ಸಲ್ಲಿಸಿದೆ.
ಸುಪ್ರೀಂಕೋರ್ಟ್ ನೀಡಿದ್ದ ಮೂರು ತಿಂಗಳ ಕಾಲವಕಾಶ ಹಿನ್ನೆಲೆಯಲ್ಲಿ, ಜಂತಕಲ್ ಅಕ್ರಮ ಗಣಿ ಪ್ರಕರಣ ಸೇರಿದಂತೆ ಮತ್ತಿತರ ಪ್ರಕರಣಗಳಲ್ಲಿ ಇದುವರೆಗೂ ನಡೆಸಿದ ವರದಿಯನ್ನು ಸಲ್ಲಿಸಲಾಗಿದೆ. ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ವಿಚಾರಣೆ ಅಗತ್ಯತೆ, ಇದುವರೆಗೂ ವಿಚಾರಣೆಗೆ ಒಳಪಟ್ಟ ಅಧಿಕಾರಿಗಳ ಹೇಳಿಕೆಗಳು, ಸಾಕ್ಷ್ಯಾ ಸಂಗ್ರಹ, ಇತರೆ ಪ್ರಕರಣಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಜೊತೆಗೆ ಗಣಿ ಹಗರಣ ಪ್ರಕರಣಗಳಲ್ಲಿ ಮುಂದಿನ ದಿನಗಳಲ್ಲಿ ವಿಚಾರಣೆಗೊಳಪಡಿಸುವ ಹಿರಿಯ ಐಎಎಸ್ ಅಧಿಕಾರಿಗಳ ಹೆಸರನ್ನೂ ಸೇರಿಸಲಾಗಿದೆ. ಎಲ್ಲಾ ಪ್ರಕರಣಗಳ ಸಂಪೂರ್ಣ ತನಿಖೆಗೆ ಮೂರ್ನಾಲ್ಕು ತಿಂಗಳ ಕಾಲವಕಾಶ ವಿಸ್ತರಿಸುವಂತೆ ಮನವಿ ಮಾಡಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಮತ್ತೂಂದೆಡೆ ಗಣಿ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಐಎಎಸ್ ಅಧಿಕಾರಿಗಳಾದ ಶಂಕರ ಲಿಂಗಯ್ಯ, ಅಯ್ಯರ್ ಪೆರುಮಾಳ್, ಜೀಜಾ ಹರಿಸಿಂಗ್ ಸೇರಿದಂತೆ ಹಲವು ಅಧಿಕಾರಿಗಳಿಗೂ ನೋಟೀಸ್ ನೀಡುವ ಸಾಧ್ಯತೆಯಿದ್ದು, ಅಗತ್ಯಬಿದ್ದರೆ ವಿಚಾರಣೆಗೊಳಪಡಿಸಲು ತೀರ್ಮಾನಿಸಲಾಗಿದೆ ಎಂದು ಎಸ್ಐಟಿ ಮೂಲಗಳು ಅಧಿಕಾರಿಗಳು.
ಮತ್ತೂಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ 150 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿದ್ದ ಗಾಲಿ ಜನಾರ್ಧನ ರೆಡ್ಡಿ, ಈ ಹಿಂದೆ ಪತ್ರಿಕಾಗೋಷ್ಟಿಯಲ್ಲಿ ಬಿಡುಗಡೆ ಮಾಡಿದ್ದ ಬ್ಲಿರ್ ವಿಡಿಯೋವನ್ನೇ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?