ಬೆಂಗಳೂರು ವಿವಿ ಕ್ಯಾಂಪಸ್ನಲ್ಲಿ ಇಲ್ಲ ಒಂದೂ ಬಸ್ ತಂಗುದಾಣ
Team Udayavani, Jun 23, 2017, 12:17 PM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣಕ್ಕೆ ಬಸ್ ಸೌಲಭ್ಯವಿದೆಯಾದರೂ, ಒಂದೇ ಒಂದು ತಂಗುದಾಣವೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು, ಉಪನ್ಯಾಸಕರು, ನಾಗರಿಕರಿಗೆ ಬಿಸಿಲು, ಮಳೆಯಲ್ಲೇ ಬಸ್ ಕಾಯಬೇಕಾದ ಸ್ಥಿತಿ ಇದೆ.
ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿ ಅನುಕೂಲಕ್ಕಾಗಿ ಈ ಹಿಂದೆ ತನ್ನದೇ ಬಸ್ ಸೇವೆ ಒದಗಿಸಿತ್ತು. ಆರ್ಥಿಕ ಹೊರೆ ಹೆಚ್ಚಾದ್ದರಿಂದ ವರ್ಷಗಳ ಹಿಂದೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಸದ್ಯ ಬಿಎಂಟಿಸಿ ಬಸ್ ಹೊರತುಪಡಿಸಿ ಬೇರ್ಯಾವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಇಲ್ಲಿಲ್ಲ.
ಜ್ಞಾನಭಾರತಿ ಆವರಣದಲ್ಲಿ ಎಲ್ಲ ವಿಭಾಗಗಳಿಂದ ಎರಡು ಸಾವಿರಕ್ಕೂ ಮಿಗಿಲಾದ ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ಹೊರತುಪಡಿಸಿ, ನಿತ್ಯ ಮನೆಯಿಂದಲೇ ಬರುವ ವಿದ್ಯಾರ್ಥಿಗಳ ಸಂಖ್ಯೆ ಸಾವಿರ ಇರಬಹುದು. ಹಾಗೆಯೇ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಸಂಖ್ಯೆಯೂ ಹೆಚ್ಚಿದೆ. ದ್ವಿಚಕ್ರ ಹಾಗೂ ಕಾರುಗಳಲ್ಲಿ ಬರುವ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಸಂಖ್ಯೆ ಬಹಳ ಕಡಿಮೆ.
ಜ್ಞಾನಭಾರತಿ ಆವರಣದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ರಸ್ತೆ ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಬಸ್ ನಿಲ್ದಾಣ ಮಾಡಿಲ್ಲ. ಹೀಗಾಗಿ ಎಲ್ಲರೂ ರಸ್ತೆ ಬದಿಯ ಬಯಲಲ್ಲೇ ನಿಂತು ಬಸ್ಗೆ ಕಾಯಬೇಕು. ಮಳೆ ಬಂದರೆ ಅಲ್ಲಿಯೇ ನೆನೆಯ ಬೇಕು. ಬಿಸಿಲಿಗೆ ಮರದ ನೆರಳೇ ಗತಿ.
ಎಲ್ಲೇಲ್ಲಿ ಬೇಕು ತಂಗುದಾಣ: ಜ್ಞಾನಭಾರತಿ ಆವರಣದ ವಿದ್ಯಾರ್ಥಿನಿಯರ ಹಾಸ್ಟೆಲ್, ಮುನೇಶ್ವರ ದೇವಸ್ಥಾನ, ಕೇಂದ್ರ ಕಚೇರಿ ಹಾಗೂ ಗಣಪತಿ ದೇವಸ್ಥಾನದಲ್ಲಿ ಬಸ್ ನಿಲ್ದಾಣ ಅಗತ್ಯವಾಗಿದೆ.
ಹಣವಿಲ್ಲದಿದ್ದರೆ ಸರ್ಕಾಕ್ಕೆ ಮನವಿ ಮಾಡಲಿ: ಬಸ್ ನಿಲ್ದಾಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಈಗಾಗಲೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ವಿವಿ ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸ್ಥಳೀಯ ಶಾಸಕರೊಂದಿಗಾದರೂ ಚರ್ಚಿಸಬೇಕಿತ್ತು. ಅದನ್ನೂ ಮಾಡಿಲ್ಲ. ಬಸ್ ನಿಲ್ದಾಣ ನಿರ್ಮಿಸಲು ವಿಶ್ವವಿದ್ಯಾಲಯದಲ್ಲಿ ಅನುದಾನವಿಲ್ಲದಿದ್ದರೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು. ಬಸ್ ನಿಲ್ದಾಣ ಇಲ್ಲದೇ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬೋಧಕೇತರ ಸಿಬ್ಬಂದಿ ಸಂಘದ ಸದಸ್ಯರೊಬ್ಬರು ಹೇಳಿದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ಮಾಡಲಾಗುತ್ತದೆ. ಈ ಸಂಬಂಧ ಹಲವು ಮನವಿಗಳು ಬಂದಿದೆ. ಜ್ಞಾನಭಾರತಿಯಿಂದ ವಿವಿಧ ಭಾಗಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬೆಂವಿವಿ ಸಾರಿಗೆ ವಿಭಾಗದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ.
-ಡಾ.ಎಂ.ಮುನಿರಾಜು, ಬೆಂವಿವಿ ಕುಲಪತಿ(ಹಂಗಾಮಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ