ಜಾಲಿರೈಡ್ನಲ್ಲಿ ಸಹೋದ್ಯೋಗಿ ಮಿತ್ರರ ದುರ್ಮರಣ
Team Udayavani, Jun 24, 2017, 11:10 AM IST
ಬೆಂಗಳೂರು: ಹೊಸ ಬೈಕ್ ಖರೀದಿಸಿದ ಸಂತಸದಲ್ಲಿ ಸಹೋದ್ಯೋಗಿಗಳಿಬ್ಬರು ಜಾಲಿ ರೈಡ್ ಮಾಡುವಾಗ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದು ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂನ ಮಹಾಕವಿ ಕುವೆಂಪು ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡಿದಿದೆ.
ಲಗ್ಗೆರೆ ನಿವಾಸಿ ಚಂದನ್ (22) ಮತ್ತು ರಾಜಾಜಿನಗರ 1ನೇ ಹಂತದ ನಿವಾಸಿ ವೆಂಕಟಾಚಲ (21) ಮೃತರು. ಚಂದನ್ ಮತ್ತು ವೆಂಕಟಾಚಲ ಪ್ಯಾಲೇಸ್ ರಸ್ತೆಯ ಯಮಹಾ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ವೆಂಕಟಾಚಲ ಸಾಲ ಪಡೆದು ಹೊಸ ಯಮಹಾ ಬೈಕ್ ಖರೀದಿ ಮಾಡಿದ್ದರು.
ವಾಹನ ಇನ್ನು ನೊಂದಾಣಿಯಾಗಿರಲಿಲ್ಲ. ಗುರುವಾರ ರಾತ್ರಿ ಸುಮಾರು 12.45ರ ಸುಮಾರಿಗೆ ಎಂ.ಡಿ.ಬ್ಲ್ಯಾಕ್ನಿಂದ ನವರಂಗ್ ಕಡೆ ವೇಗವಾಗಿ ಹೋಗುವಾಗ ರಸ್ತೆ ವಿಭಜಕಕ್ಕೆ ಡಿಕ್ಕಿಯೊಡೆದಿದ್ದಾರೆ. ಪರಿಣಾಮ ಇಬ್ಬರ ತಲೆಗೆ ಗಂಭೀರವಾಗಿ ಪೆಟ್ಟು ಬಿದಿದೆ. ಸ್ಥಳದಲ್ಲಿದ್ದ ಸಂಚಾರ ಠಾಣೆ ಪೊಲೀಸರು ಕೂಡಲೇ ಆ್ಯಂಬುಲೆನ್ಸ್ ಮೂಲಕ ಇಬ್ಬರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.
ಹೆಲ್ಮೆಟ್ ಧರಿಸಿರಲಿಲ್ಲ: ಬೈಕ್ ಚಾಲನೆ ಮಾಡುತ್ತಿದ್ದ ವೆಂಕಟಾಚಲ ಮತ್ತು ಹಿಂಬದಿ ಸವಾರ ಚಂದನ್ ಇಬ್ಬರು ಹೆಲ್ಮೆಟ್ ಧರಿಸಿರಿಲಿಲ್ಲ. ಹೀಗಾಗಿ ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮಲ್ಲೇಶರಂ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ