“ನಮ್ಮ ಮೆಟ್ರೋ’ದಲ್ಲಿ ಹಿಂದಿ: ಎಚ್‌ಡಿಕೆ, ಕರವೇ ವಿರೋಧ


Team Udayavani, Jun 24, 2017, 11:11 AM IST

karave-hdk.jpg

ಬೆಂಗಳೂರು: ನಮ್ಮ ಮೆಟ್ರೋ  ನಿಲ್ದಾಣ ಹಾಗೂ ರೈಲುಗಳಲ್ಲಿ ಹಿಂದಿ ಬಳಕೆ ವಿರುದ್ಧ ರಾಜ್ಯದ ಎಲ್ಲರೂ ಧ್ವನಿ ಎತ್ತಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮೆಟ್ರೋದಲ್ಲಿ ಹಿಂದಿಯ ಬಳಕೆ ಅಗತ್ಯವೇ ಇಲ್ಲ. ಹಿಂದಿ ಬಳಸುವ ಮೂಲಕ ಹಂತ ಹಂತವಾಗಿ ಪ್ರಾದೇಶಿಕ ಭಾಷೆಯನ್ನು ನಾಶ ಮಾಡುವ ಪ್ರಯತ್ನ ನಡೆದಿದೆ.

ಇದನ್ನು ತಕ್ಷಣ ನಿಲ್ಲಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು. ಹಿಂದಿ ಬಳಸಿದರೆ ತಪ್ಪೇನು ಎಂದು ಬಿಜೆಪಿಯ ಸಿ.ಟಿ.ರವಿ ಪ್ರಶ್ನಿಸುತ್ತಾರೆ. ರಾಷ್ಟ್ರೀಯ ಪಕ್ಷದವರು ಹೇಗೆ ರಾಜ್ಯದ ಹಿತಾಸಕ್ತಿ ಬಲಿ ಕೊಡುತ್ತಾರೆ ಎಂಬುದಕ್ಕೆ ಅವರ ಮಾತೇ ಸಾಕ್ಷಿ ಎಂದು ತಿಳಿಸಿದರು.

ಕರವೇಯಿಂದ ಹೋರಾಟ: ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಹಿಂದಿ ಬಳಕೆ ಖಂಡಿಸಿ ಶುಕ್ರವಾರ ಶಾಂತಿನಗರದ ಬಿಎಂಆರ್‌ಸಿ ಕಚೇರಿ ಎದುರು ಪ್ರಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಿಂದಿ ನಾಮಫ‌ಲಕಗಳ ತೆರವಿಗೆ ವಾರದ ಗಡುವು ನೀಡಿದರು. 

ಗ್ರಾಹಕರಿಗೆ ಮಾಹಿತಿ ನೀಡುವ ನೆಪದಲ್ಲಿ ಅನವಶ್ಯಕವಾಗಿ ಹಿಂದಿ ಬಳಕೆ ಮಾಡಲಾಗುತ್ತಿದೆ. ಹಿಂದಿ ಒಂದು ರಾಜ್ಯ ಭಾಷೆ ಹೊರತು, ರಾಷ್ಟ್ರಭಾಷೆ ಅಲ್ಲ. ಹೀಗಿರುವಾಗ, ಅನ್ಯರಾಜ್ಯದ ಭಾಷೆಯನ್ನು “ನಮ್ಮ ಮೆಟ್ರೋ’ದಲ್ಲಿ ಬಳಸುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ||

ಯಾವುದೇ ಕಾರಣಕ್ಕೂ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ನಾಮಫ‌ಲಕಗಳಾಗಲಿ ಮತ್ತು ಧ್ವನಿ ಮುದ್ರಿತ ಪ್ರಕಟಣೆಗಳಾಗಲಿ ಇರಕೂಡದು. ವಾರದಲ್ಲಿ ತೆರವುಗೊಳಿಸಬೇಕು. ಇಲ್ಲದಿದ್ದರೆ ನಿಲ್ದಾಣಗಳಿಗೆ ಮುತ್ತಿಗೆ ಹಾಕಿ ಹಿಂದಿ ಫ‌ಲಕಗಳನ್ನು ಕಿತ್ತುಹಾಕಲಾಗುವುದು ಎಂದು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ ಟಿ.ಎ. ನಾರಾಯಣಗೌಡ ಮಾತನಾಡಿ, “ನಮ್ಮ ಮೆಟ್ರೋ’ದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನು ಮಾತ್ರ ಬಳಸುವಂತೆ ಆಗ್ರಹಿಸಿದರು. ಅಷ್ಟಕ್ಕೂ ಈ ಹಿಂದೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮಾರ್ಗ ಮತ್ತು ನಾಗಸಂದ್ರದಿಂದ ಸಂಪಿಗೆ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲಿ ನಾಮಫ‌ಲಕಗಳು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿವೆ. ಹೊಸ ಮಾರ್ಗದಲ್ಲಿ ಯಾಕೆ ಹಿಂದಿ ಹೇರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ವಾರದೊಳಗೆ ಹಿಂದಿ ನಾಮಫ‌ಲಕಗಳನ್ನು ತೆರವು ಮಾಡುವಂತೆ ಒತ್ತಾಯಿಸಿದರು. ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ಸಿಂಗ್‌ ಖರೋಲಾ ಅವರಿಗೆ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.