ತಪ್ಪಿಸಿಕೊಳ್ಳಲು ಯತ್ನಿಸಿದವನಿಗೆ ಗುಂಡು


Team Udayavani, Jun 25, 2017, 11:15 AM IST

gun-shoot-pics.jpg

ಬೆಂಗಳೂರು: ಎಚ್‌ಎಎಲ್‌ ಠಾಣೆ ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿಯೊಬ್ಬ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾನೆ. ಜಾನ್ಸನ್‌(21) ಗುಂಡೇಟು ತಿಂದವ. ಜೂ.10 ರಂದು ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿದ ಜಾನ್ಸನ್‌ನನ್ನು ತಡೆಯಲು ಮುಂದಾದ ಫ್ರಾಂಕ್‌ಫಿನ್‌ ಏರ್‌ಹೋಸ್ಟಸ್‌ ಕಂಪೆನಿ ಉದ್ಯೋಗಿ ಸಾಯಿಚರಣ್‌ನನ್ನು ಆರೋಪಿ ಕೊಲೆಗೈದಿದ್ದ. ಹೀಗಾಗಿ ಜಾನ್ಸನ್‌ನನ್ನು ಬಂಧಿಸಲಾಗಿತ್ತು. 

ಪ್ರಕರಣದಲ್ಲಿ ಸಿಕ್ಕಿ ಬಿದ್ದ ಆರೋಪಿಯನ್ನು ಘಟನೆ ನಡೆದ ಅನ್ನಸಂದ್ರಪಾಳ್ಯಕ್ಕೆ ಕರೆದೊಯ್ದು ಮಹಜರ್‌ ಮುಗಿಸಿ ಪುನಃ ಠಾಣೆಗೆ ಕರೆತರಲಾಗುತ್ತಿತ್ತು. ಈ ವೇಳೆ ಆರೋಪಿ ಜಾನ್ಸನ್‌ ಮೂತ್ರ ವಿಸರ್ಜಿಸಬೇಕೆಂದು ಕೇಳಿಕೊಂಡಿದ್ದ. ಹೀಗಾಗಿ ಆತನನ್ನು ಜೀಪಿನಿಂದ ಇಳಿಸಲಾಗಿತ್ತು.

ಈ ವೇಳೆ ಪೇದೆಗಳಾದ ಕಾಂತರಾಜು ಮತ್ತು ಮಂಜೇಶ್‌ ಆರೋಪಿಯ ಜತೆಯೇ ಇದ್ದರು. ಆದರೆ, ಏಕಾಏಕಿ ಪೇದೆಗಳ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಜಾನ್ಸನ್‌ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಠಾಣೆ ಇನ್‌ಸ್ಪೆಕ್ಟರ್‌ ಸಾದಿಕ್‌ ಪಾಷಾ ತಪ್ಪಿಸಿಕೊಳ್ಳದಂತೆ ಆರೋಪಿಗೆ ಮೂರು ಬಾರಿ ಎಚ್ಚರಿಕೆ ಕೊಟ್ಟಿದ್ದಾರೆ.

ಇದ್ಯಾವುದಕ್ಕೂ ಜಾನ್ಸನ್‌ ಬಗ್ಗಿಲ್ಲ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪ್ರಯೋಜನ ಆಗಲಿಲ್ಲ. ನಂತರ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಯಿತು. ಈ ಸಂದರ್ಭದಲ್ಲಿ ಗುಂಡು ಆತನ ಎಡಗಾಲಿಗೆ ತಗುಲಿದೆ. ಕುಸಿದು ಬಿದ್ದ ಆತನನ್ನು ತಕ್ಷಣ ಜೀಪ್‌ನಲ್ಲೇ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ಜಾನ್ಸನ್‌ ಸಿಕ್ಕಿದ್ದು ಹೀಗೆ: ಸಾಯಿಚರಣ್‌ ಕೊಲೆ ಬಳಿಕ ಪ್ರಾಥಮಿಕ ತನಿಖೆಯಲ್ಲಿ ಆತನ ಸ್ನೇಹಿತರೇ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಚಾಯಿಚರಣ್‌ನ ಎಲ್ಲ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿತ್ತು. ಆದರೆ, ಆರೋಪಿ ಪತ್ತೆಯಾಗಲಿಲ್ಲ. ನಂತರ ಘಟನಾ ಸ್ಥಳದ ಸುತ್ತ ಮುತ್ತಲ ಪ್ರದೇಶದಲ್ಲಿದ್ದ 25 ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಲಾಗಿತ್ತು.

ಆದರೆ, ಯಾವುದರಲ್ಲೂ ಆರೋಪಿಯ ಮುಖ ಕಾಣುತ್ತಿರಲಿಲ್ಲ. ಒಂದು ಕ್ಯಾಮೆರಾದಲ್ಲಿ ಮಾತ್ರ ಅನುಮಾನಾಸ್ಪದವಾಗಿ ಹೋಗುತ್ತಿದ್ದವನ ಚಿತ್ರ ಚಿಕ್ಕಿತ್ತು. ಈ ದೃಶ್ಯವನ್ನೇ ತಾಂತ್ರಿಕ ಪರಿಣಿತರ ಮೂಲಕ ಇನ್ನಷ್ಟು ಸ್ಪಷ್ಟವಾಗಿ ಕಾಣುವಂತೆ ಮಾಡಿಕೊಂಡು ವೈಜ್ಞಾನಿಕ ವಿಧಾನಗಳ ಮೂಲಕ ತನಿಖೆ ನಡೆಸಿದಾಗ ಆರೋಪಿ ಸಿಕ್ಕಿ ಬಿದಿದ್ದಾನೆ ಎಂದು ಹೇಮಂತ್‌ ನಿಂಬಾಳ್ಕರ್‌ ತಿಳಿಸಿದರು.

ಸುಳಿವು ಕೊಟ್ಟ ನಡೆಯುವ ಶೈಲಿ: ಸಾಯಿಚರಣ್‌ ಕೊಲೆ ಪ್ರಕರಣದಲ್ಲಿ ನಡುಗೆ ಶೈಲಿಯೇ ಆರೋಪಿ ಬಂಧನಕ್ಕೆ ನೆರವಾಗಿದೆ. ಸಿಸಿಟಿವಿಯಲ್ಲಿ ಕಂಡಿದ್ದ ಅನುಮಾನಸ್ಪದ ವ್ಯಕ್ತಿಯ ನಡುಗೆಯನ್ನು ಅಕ್ಕ-ಪಕ್ಕದ ನಾಲ್ಕು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣದಲ್ಲಿ ತೊಡಗಿರುವವರೊಂದಿಗೆ ಹೋಲಿಕೆ ಮಾಡಿ ನೋಡಲಾಗಿತ್ತು. ಈ ವೇಳೆ ಜಾನ್ಸನ್‌ ಕೂಡ ಬಂದಿದ್ದ.

ಪರೇಡ್‌ನ‌ ದೃಶ್ಯವನ್ನು ಕ್ಯಾಮರಾದಲ್ಲಿ ದಾಖಲಿಸಿಕೊಳ್ಳಲಾಯಿತು. ನಂತರ ಪರಿಶೀಲಿಸಿದಾಗ ಜಾನ್ಸನ್‌ ನಡೆಯುವ ಶೈಲಿ ಸಿಸಿಟಿವಿಯಲ್ಲಿ ಸೆರೆ ಸಿಕ್ಕ ದೃಶ್ಯಕ್ಕೆ ಹೊಂದಾಣಿಕೆ ಆಗಿತ್ತು. ಈ ಆಧಾರದಲ್ಲಿ ಈತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಸಾಯಿಚರಣ್‌ನನ್ನು ಕೊಂದಿರುವುದು ತಾನೇ ಎಂದು ಜಾನ್ಸನ್‌ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.