ಉದ್ಯೋಗ ಹುಡುಕದೇ ಉದ್ಯೋಗ ಕಲ್ಪಿಸಿ 


Team Udayavani, Jun 25, 2017, 11:15 AM IST

job-mela.jpg

ಬೆಂಗಳೂರು: ಯುವಕರು ಉದ್ಯೋಗಕ್ಕಾಗಿ ಅಲೆದಾಡದೆ, ಸ್ವತಃ ಉದ್ಯೋಗ ಸೃಷ್ಟಿಕರ್ತರಾಗಿ ಹೊರಹೊಮ್ಮಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (ಎಫ್ಕೆಸಿಸಿಐ) ವಿನೂತನ ಪ್ರಾಜೆಕ್ಟ್ಗಳನ್ನು ಸಿದ್ಧಪಡಿಸುವ ವಿದ್ಯಾರ್ಥಿಗಳಿಗೆ ನೀಡುವ “ಮಂಥನ-2017′ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಉದ್ಯೋಗಕ್ಕಾಗಿ ನಿತ್ಯ ಲಕ್ಷಾಂತರ ಯುವಕರು ಅಲೆದಾಡುತ್ತಿದ್ದಾರೆ. ಆದರೆ, ಸ್ವತಃ ಉದ್ಯೋಗದಾತರಾಗಬಹುದಾದ ಸಾಮರ್ಥ್ಯ ಯುವಕರಲ್ಲಿದೆ. ಇದಕ್ಕಾಗಿ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜತೆಗೆ ಈ ನಿಟ್ಟಿನಲ್ಲಿ ಉದ್ಯಮಿಗಳು ಯುವ ಪ್ರತಿಭೆಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಹೇಳಿದರು. 

ಬೇಡಿಕೆ-ಪೂರೈಕೆಯಲ್ಲಿ ಅಂತರ: ಒಂದೆಡೆ ನಿರುದ್ಯೋಗಿಗಳ ಸಂಖ್ಯೆ ಸಾಕಷ್ಟಿದೆ. ಮತ್ತೂಂದೆಡೆ ಕೈಗಾರಿಕಾ ಕ್ಷೇತ್ರ ಮಾನವ ಸಂಪನ್ಮೂಲ ಕೊರತೆ ಎದುರಿಸುತ್ತಿದೆ. ಈ ಬೇಡಿಕೆ ಮತ್ತು ಪೂರೈಕೆಯಲ್ಲಿರುವ ಅಂತರವನ್ನು ಕಡಿಮೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕೌಶಲ್ಯ ತರಬೇತಿ ನೀಡುವ ಅವಶ್ಯಕತೆ ಇದೆ. ನಮ್ಮಲ್ಲಿರುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ.

ಉದಾಹರಣೆಗೆ ಈಗಲೂ ಶೀಘ್ರಲಿಪಿ ತರಬೇತಿ ನೀಡಲಾಗುತ್ತಿದೆ. ಆದರೆ, ವಾಸ್ತವವಾಗಿ ಕಂಪ್ಯೂಟರ್‌ ಯುಗದಲ್ಲಿ ಶೀಘ್ರಲಿಪಿ ಯಾರಿಗೆ ಉಪಯೋಗ ಎಂದು ಕೇಳಿದರು. ಆದ್ದರಿಂದ ಕೈಗಾರಿಕೆಗಳಲ್ಲಿನ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಇದಕ್ಕಾಗಿ ಉದ್ಯಮ ಕ್ಷೇತ್ರವು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು. 

ಜರ್ಮನಿಯಲ್ಲಿ ಎರಡು ರೀತಿಯ ಶಿಕ್ಷಣ ವ್ಯವಸ್ಥೆ ಇದೆ. ಒಂದು ಥಿಯಾರಿಟಿಕಲ್‌ ಶಿಕ್ಷಣ ಮತ್ತೂಂದು ಪ್ರಾಯೋಗಿಕ ಶಿಕ್ಷಣ. ಕೈಗಾರಿಕೆಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುತ್ತವೆ. ಹಾಗಾಗಿ, ಒಂದಿಲ್ಲೊಂದು ಕಡೆ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ. ನಮ್ಮಲ್ಲಿನ ಶಿಕ್ಷಣ ವ್ಯವಸ್ಥೆ ಈ ರೀತಿಯ ಕ್ರಿಯಾತ್ಮಕ ಚಿಂತನೆಗೆ ಹೊಂದಿಕೊಳ್ಳಲು ಇನ್ನಷ್ಟು ಸಮಯ ಬೇಕಾಗುತ್ತದೆ ಎಂದರು. 

“ಮಂಥನ-2017′ ಸಮಿತಿ ಅಧ್ಯಕ್ಷ ಡಿ. ಸುರೇಶ್‌ಕುಮಾರ್‌ ಪ್ರಾಸ್ತಾವಿಕ ಮಾತನಾಡಿದರು. ಎಫ್ಕೆಸಿಸಿಐ ಅಧ್ಯಕ್ಷ ಎಂ.ಸಿ. ದಿನೇಶ್‌, ತೀರ್ಪುಗಾರರ ಸಮಿತಿ ಅಧ್ಯಕ್ಷ ಅಂಕುರ್‌ ಭಾಸಿನ್‌ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ರಾಯಚೂರಿನ ಅಗ್ರಿಕಲ್ಚರಲ್‌ ಎಂಜಿನಿಯರಿಂಗ್‌ ಕಾಲೇಜಿನ ಎಸ್‌.ಎ. ವೇಣು (ಪ್ರಥಮ), ಬೆಂಗಳೂರಿನ ಎಂ.ಎಸ್‌. ರಾಮಯ್ಯ ತಾಂತ್ರಿಕ ಸಂಸ್ಥೆಯ ಅಶ್ವಿ‌ನಕುಮಾರ್‌ (ದ್ವಿತೀಯ),

-ರಾಯಚೂರು ಅಗ್ರಿಕಲ್ಚರಲ್‌ ಎಂಜಿನಿಯರಿಂಗ್‌ ಕಾಲೇಜಿನ ಶಿವಯೋಗೇಶ್‌ ಕುಡಚೆ, ವಿವೇಕ್‌ ಆರ್‌. ಕಾಮತ್‌, ಶ್ರೀಕಾಂತ್‌ (ತೃತೀಯ) ಹಾಗೂ ಡಿ. ಯಲ್ಲಪ್ಪ (ಸಮಾಧಾನಕರ) ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಚಿಕ್ಕಬಳ್ಳಾಪುರದ ಎಂ. ಸಿಂಧುಶ್ರೀ ಹಾಗೂ ಎಂ. ನವ್ಯಾರಾಣಿ (ಸಮಾಧಾನಕರ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.