ಭಿನ್ನ ಶಾಸಕರ ಕ್ಷೇತ್ರದಲ್ಲೇ ಜೆಡಿಎಸ್‌ ಗೆಲ್ಲಿಸಿ ತೋರಿಸುವೆ


Team Udayavani, Jul 22, 2017, 11:23 AM IST

devegowda2.jpg

ಬೆಂಗಳೂರು: ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಶುಕ್ರವಾರ ಜೆಡಿಎಸ್‌ ಸಮಾವೇಶ ನಡೆಸಿ ತಮ್ಮದೇ ಪಕ್ಷದ ಭಿನ್ನಮತೀಯ ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ತೀವ್ರ ವಾಗ್ಧಾಳಿ ನಡೆಸಿದರು.

ಜೆಡಿಎಸ್‌ನಿಂದ ಆಯ್ಕೆಯಾಗಿದ್ದರೂ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಜಮೀರ್‌ ಅಹಮದ್‌ ಖಾನ್‌ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಆಜಾದ್‌ನಗರದಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ಭಿನ್ನ ಶಾಸಕರ ವಿರುದ್ಧ ಗುಡುಗಿದ ದೇವೇಗೌಡರು, ಭಿನ್ನಮತೀಯ ಶಾಸಕರ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.

ಸಮಾವೇಶದಲ್ಲಿ ಮಾತನಾಡಿದ ದೇವೇಗೌಡರು, “ಚಾಮರಾಜಪೇಟೆಯಲ್ಲಿ ಜೆಡಿಎಸ್‌ ಸಮಾವೇಶ ನಡೆಸಲು ಸಾಧ್ಯವೇ ಎಂಬ ಪರೀಕ್ಷೆ ಇತ್ತು. ಎಷ್ಟು ಜನ ಸೇರುತ್ತಾರೆ ಎಂಬ ಪ್ರಶ್ನೆ ಇಲ್ಲ. ನಿಮ್ಮನ್ನೆಲ್ಲಾ ನೋಡಬೇಕು ಎಂಬ ಉದ್ದೇಶದೀಂದ ಸಭೆ ಮಾಡಲಾಗಿದೆ,’ ಎನ್ನುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದರು.

“ಚಾಮರಾಜಪೇಟೆ ಕ್ಷೇತ್ರದಲ್ಲಿ ಸಭೆ ಮಾಡಿದರೆ ಜನ ಮನೆ ಬಿಟ್ಟು ಬರುವುದಿಲ್ಲ ಎಂದು ಕೆಲವರು ಹೇಳಿದರು. ಇನ್ನೂ ಕೆಲವರು ಸಭೆ ಮಾಡಿದರೆ ಕೇಸು ಹಾಕುತ್ತಾರೆ ಎಂದರು. ಚಾಮರಾಜಪೇಟೆಯಲ್ಲಿ ಜೆಡಿಎಸ್‌ ಸಮಾವೇಶ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದರು. ಇದೇನು ಪಾಕಿಸ್ತಾನ ಅಲ್ಲ. ನಾನು ಧೈರ್ಯ ಹೇಳಿದಮೇಲೆ ಸಭೆ ಮಾಡಿದ್ದಾರೆ.

ಇಲ್ಲಿಂದಲೇ ನಾನು ಹೋರಾಟ ಆರಂಭಿಸುತ್ತೇನೆ. ಯಾರು ಏನು ಮಾಡುತ್ತಾರೋ ನೋಡೋಣ. ಚಾಮರಾಜಪೇಟೆಯಲ್ಲಿ ಪಕ್ಷವನ್ನು ಗೆಲ್ಲಿಸುವುದೇ ನನ್ನ ಗುರಿ. ಇದನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಗುಡುಗಿದರು.

“ಎಲ್ಲರೂ ನಮ್ಮ ಪಕ್ಷ ಬಿಟ್ಟು ಹೋಗಿದ್ದಾರೆ. ಆದರೂ ಪಕ್ಷ ಉಳಿಸುವುದಕ್ಕಾಗಿ ಈ ದೇವೇಗೌಡ ಏನು ಬೇಕಾದರೂ ಮಾಡಲು ಸಿದ್ಧ. ಮನೆ ಮನೆಗೆ ಹೋಗಿ ಮತ ಕೇಳುತ್ತೇನೆ. ಮನೆಯಲ್ಲಿ ಮಲಗಲ್ಲ. ಎಲ್ಲ ಭಿನ್ನಮತೀಯರ ಕ್ಷೇತ್ರದಲ್ಲೂ ಪಕ್ಷವನ್ನು ಗೆಲ್ಲಿಸಿ ತೋರಿಸುತ್ತೇನೆ,’ ಎಂದು ಸವಾಲು ಹಾಕಿದರು.

“ಅಪ್ಪನನ್ನು ಬಿಟ್ಟು ಬಂದರೆ ಕುಮಾರಣ್ಣನನ್ನು ಮುಖ್ಯಮಂತ್ರಿ ಮಾಡುತ್ತಾರಂತೆ. ಚಾಮರಾಜಪೇಟೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಧರಣಿ ಮಾಡುತ್ತೇನೆ. ನಾನು ಉಪವಾಸ ಧರಣಿ ಮಾಡಿದ್ದಕ್ಕೆ ಗುಂಡೂರಾವ್‌ ಸರ್ಕಾರ ಹೋಯಿತು ಎಂಬುದು ನೆನಪಿರಲಿ,’ ಎನ್ನುವ ಮೂಲಕ ಭಿನ್ನರಿಗೆ ಎಚ್ಚರಿಕೆ ನೀಡಿದರು.

ಕುಮಾರ್‌ ಈಗಲೂ ಮರುಗುತ್ತಾರೆ!: “ಯಾರನ್ನೋ ಟೀಕಿಸುವುದರಿಂದ ದೊಡ್ಡ ಮನುಷ್ಯರಾಗುವುದಿಲ್ಲ. ನಾನಿನ್ನೂ ಸಣ್ಣ ಮನುಷ್ಯ. ಜಮೀರ್‌ ಗೆಲುವಿಗಾಗಿ ಚಾಮರಾಜೇಪಟೆಯ ಗಲ್ಲಿಗಳು, ಕೊಳೆಗೇರಿಗಳಲ್ಲಿ ಓಡಾಡಿದ್ದೇನೆ. ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿಯಾಗಿ ಇಲ್ಲಿಗೇಕೆ ಬಂದಿರಿ ಎಂಬ ಮಾತುಗಳನ್ನೂ ಲೆಕ್ಕಿಸದೆ “ದರಿದ್ರ ನಾರಾಯಣ’ ರ್ಯಾಲಿ ಮಾಡಿ ಜಮೀರ್‌ನನ್ನು ಗೆಲ್ಲಿಸಿದ್ದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡ ಭಿನ್ನಮತೀಯ ಶಾಸಕರು ಕುಮಾರಸ್ವಾಮಿಗೆ ವಿಷ ಹಾಕುವುದು ಒಂದನ್ನು ಬಿಟ್ಟು ಉಳಿದೆಲ್ಲಾ ರೀತಿಯ ದ್ರೋಹ ಎಸಗಿದ್ದರ ಬಗ್ಗೆ ಕುಮಾರಸ್ವಾಮಿ ಇಂದಿಗೂ ಮರುಗುತ್ತಿದ್ದಾರೆ,’ ಎಂದರು.

ಚಾಮರಾಜಪೇಟೆಯಲ್ಲಿ ಜೆಡಿಎಸ್‌ ಸಮಾವೇಶ ನಡೆಸಲು ಸಾಧ್ಯವಿಲ್ಲ ಎಂದು ಕೆಲವರು ಹೇಳಿದ್ದರು. ಯಾರು ಏನು ಮಾಡುತ್ತಾರೋ ನೋಡೇಬಿಡತ್ತೇನೆ. ಚಾಮರಾಜಪೇಟೆಯಲ್ಲಿ ಪಕ್ಷವನ್ನು ಗೆಲ್ಲಿಸುವುದೇ ನನ್ನ ಗುರಿ. ಇದನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ.
-ಎಚ್‌.ಡಿ. ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.