“ಸೂದ್‌ ಹಠಾವೋ’ ನಡೆದೀತು ಎಚ್ಚರ…


Team Udayavani, Jul 24, 2017, 11:43 AM IST

sood-hatvo.jpg

ಬೆಂಗಳೂರು: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿನ ಹಿಂದಿ ನಾಮಫ‌ಲಕಗಳಿಗೆ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಕ್ರಮವನ್ನು ಸಾಹಿತಿಗಳು, ರಂಗಕರ್ಮಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಸಮರ್ಥಿಸಿಕೊಂಡಿವೆ. ಅಲ್ಲದೆ, ಕಾರ್ಯಕರ್ತರ ವಿರುದ್ಧ ದಾಖಲಿಸಿರುವ “ಕೋಮುಗಲಭೆ ಪ್ರಕರಣ’ ಹಿಂಪಡೆಯದಿದ್ದರೆ “ಹಿಂದಿ ಹಠಾವೋ’ ಜತೆಗೆ ನಗರ ಪೊಲೀಸ್‌ ಆಯುಕ್ತ “ಪ್ರವೀಣ್‌ ಸೂದ್‌ ಹಠಾವೋ’ ಚಳವಳಿಯನ್ನೂ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳು, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುವುದು ಹಕ್ಕು ಮತ್ತು ಹೊಣೆಗಾರಿಕೆ. ಆದರೆ, ದುರುದ್ದೇಶದಿಂದ ಹೋರಾಟಗಾರರ ಮೇಲೆ ಕೋಮುಗಲಭೆಯಂತಹ ಗಂಭೀರ ಪ್ರಕರಣ ದಾಖಲಿಸಿ, ಹೋರಾಟ ಹತ್ತಿಕ್ಕುವುದು ಖಂಡನೀಯ. ಕೂಡಲೇ ಕೋಮುಗಲಭೆ ಅಡಿ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, “ಪ್ರವೀಣ್‌ ಸೂದ್‌ ಹಠಾವೋ’ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುವುದು ಪ್ರಜೆಗಳ ಹಕ್ಕು ಮತ್ತು ಅದು ಸಮಗ್ರತೆಯ ಒಂದು ಭಾಗ. ಅದಕ್ಕೆ ತಕ್ಕಂತೆ ಕಾನೂನು ರೀತಿ ಕ್ರಮ ಕೈಗೊಳ್ಳಲಿ. ಅದುಬಿಟ್ಟು, ಹೋರಾಟ ಹತ್ತಿಕ್ಕುವ ದುರುದ್ದೇಶದಿಂದ ಇಲ್ಲ-ಸಲ್ಲದ ಕೇಸುಗಳನ್ನು ಹಾಕಿ, ಹಿಂಸೆ ನೀಡುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹಿಂದಿ ಹೇರಿಕೆ ವಿರುದ್ಧದ ಹೋರಾಟ ಯಾವ್ಯಾವುದೋ ತಿರುವು ಪಡೆದು, ಒಬ್ಬ ಅಧಿಕಾರಿ ವಿರುದ್ಧ ಹೋಗಬಾರದು ಎಂಬುದು ನಮ್ಮ ಉದ್ದೇಶ. ಅದರಂತೆ ಅಧಿಕಾರಿ ಕೂಡ ಈ ಕೇಸುಗಳನ್ನು ವಾಪಸ್‌ ಪಡೆಯುತ್ತಾರೆ ಎಂಬ ವಿಶ್ವಾಸ ಇದೆ. ಹಾಗೊಂದು ವೇಳೆ ಹಿಂಪಡೆಯದಿದ್ದರೆ, ಹಿಂದಿ ಹಠಾವೋ ಜತೆಗೆ ಪೊಲೀಸ್‌ ಅಧಿಕಾರಿ ಪ್ರವೀಣ್‌ ಸೂದ್‌ ಹಠಾವೋ ಹೋರಾಟ ಕೂಡ ಆರಂಭಿಸಬೇಕಾಗುತ್ತದೆ ಎಂದು ತಿಳಿಸಿದರು. 

ನಿರ್ಧಾರ ಪ್ರಕಟಿಸಲಿ ಸಿಎಂ: ರಂಗಕರ್ಮಿ ಪ್ರಕಾಶ್‌ ಬೆಳವಾಡಿ ಮಾತನಾಡಿ, ಕನ್ನಡಪರ ಹಲವು ತೀರ್ಮಾನಗಳನ್ನು ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ “ಹಿಂದಿ ಹೇರಿಕೆ’ ವಿಚಾರದಲ್ಲಿ ಕೂಡ ಈ ಹಂತದಲ್ಲೇ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ಮುಂದೆ ನಡೆಯುವ ಹಿಂದಿ ಹೇರಿಕೆ ವಿರೋಧಿಯ ದೊಡ್ಡ ಆಂದೋಲನಕ್ಕೆ ಅವರೇ ಕಾರಣ ಆಗಲಿದ್ದಾರೆ ಎಂದು ಎಚ್ಚರಿಸಿದರು. 

ಹಿಂದಿ ನಾಮಫ‌ಲಕಗಳಿಗೆ ಮಸಿಬಳಿಯುವುದರಿಂದ ಕೋಮುಗಲಭೆ ಹೇಗೆ ಸೃಷ್ಟಿಯಾಗುತ್ತದೆ ಎಂದು ಕೇಳಿದ ಪ್ರಕಾಶ್‌ ಬೆಳವಾಡಿ, ಈ “ಕೋಮುಗಲಭೆ’ ಪ್ರಕರಣ ದಾಖಲಿಸುವ ಮೂಲಕ ಕನ್ನಡವನ್ನು ಪ್ರತಿನಿಧಿಸುವವರದ್ದು ಒಂದು ಕೋಮು ಹಾಗೂ ಇತರೆ ಭಾಷಿಕರದ್ದು ಮತ್ತೂಂದು ಕೋಮು ಎಂದು ಸ್ವತಃ ಪೊಲೀಸರು ಪ್ರತಿಪಾದಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. 

ಮತ್ತ್ಯಾವ ರೀತಿ ಹೇಳ್ಬೇಕು?: ಬನವಾಸಿ ಬಳಗದ ಅಧ್ಯಕ್ಷ ಜಿ. ಆನಂದ್‌ ಮಾತನಾಡಿ, ಹಿಂದಿ ಹೇರಿಕೆ ವಿರುದ್ಧ ಟ್ವಿಟರ್‌ ಅಭಿಯಾನ ನಡೆಸಲಾಯಿತು. ಹಿಂದಿ ಬೇಡ ಎಂದು ಪತ್ರದ ಮೂಲಕ ತಿಳಿಸಲಾಯಿತು. ಹಿರಿಯ ಸಾಹಿತಿಗಳು, ಲೇಖಕರ ಸಹಿ ಸಂಗ್ರಹಿಸಲಾಯಿತು. ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಲಾಯಿತು. ಪ್ರತಿಭಟನೆ ಮಾಡಿ, ಗಡುವು ಕೂಡ ನೀಡಲಾಯಿತು. ಇದಾವುದನ್ನೂ ಕೇಳಲಿಲ್ಲ. ಅನಿವಾರ್ಯವಾಗಿ ಮಸಿ ಬಳಿಯಬೇಕಾಯಿತು.

ಇದೂ ಬೇಡ ಎಂದಾದರೆ, ಜನರ ಅಭಿಪ್ರಾಯಗಳನ್ನು ಇನ್ನಾವ ರೀತಿ ವ್ಯಕ್ತಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರವು ರಾಜ್ಯಕ್ಕೆ ಹಲವು ಯೋಜನೆಗಳಿಗೆ ಅನುದಾನ ನೀಡುತ್ತದೆ. ಅದರ ಎರಡು-ಮೂರುಪಟ್ಟು ರಾಜ್ಯದಿಂದ ತೆರಿಗೆ ಹೋಗಿರುತ್ತದೆ. ಹೀಗೆ ಅನುದಾನ ಕೊಟ್ಟಿರುವ ಯೋಜನೆಗಳಿಗೆಲ್ಲಾ ಹಿಂದಿ ಹೇರುವ ಪ್ರಯತ್ನ ನಡೆದಿದೆ. ಇದಕ್ಕೆ “ನಮ್ಮ ಮೆಟ್ರೋ’ ಮುನ್ನುಡಿ. ತಕ್ಷಣ ಸರ್ಕಾರ ಈ ನಿಟ್ಟಿನಲ್ಲಿ ಸ್ಪಷ್ಟ ನಿಲುವು ತಳೆಯಬೇಕು ಎಂದು ಆಗ್ರಹಿಸಿದರು. 

ಸಾಹಿತಿ ಪಿ.ವಿ. ನಾರಾಯಣ್‌ ಮಾತನಾಡಿ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಏಕಪಕ್ಷೀಯ ತೀರ್ಮಾನವನ್ನು ಸಂವಿಧಾನಬದ್ಧವಾಗಿ ನಡೆಸಲಾಗುತ್ತಿದೆ. ಯಾವ ಆಸ್ತಿಪಾಸ್ತಿ ಹಾಳುಮಾಡಿಲ್ಲ. ಅಹಿಂಸಾತ್ಮಕವಾಗಿ, ಸೌಮ್ಯರೀತಿಯಲ್ಲಿ ಹೋರಾಟ ನಡೆಸಲಾಗಿದೆ. ಅದಕ್ಕೆ ಕೋಮುಗಲಭೆ ಆರೋಪ ಹೊರಿಸಿ, ಹೋರಾಟ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದರು. 

ಸೂದ್‌ ವರ್ಗಾವಣೆಗೆ ಆಗ್ರಹ: ಸಮತಾ ಸೈನಿಕ ದಳದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಮಾತನಾಡಿ, ಅನೇಕ ಸಂದರ್ಭದಲ್ಲಿ ಎಷ್ಟೋ ಜನರಿಗೆ ಮಸಿ ಬಳಿಯಲಾಗಿರುತ್ತದೆ. ಆದರೆ, ಇಲ್ಲಿ ಮೆಟ್ರೋ ನಿಲ್ದಾಣದ ಪ್ರವೇಶದ್ವಾರದಲ್ಲಿರುವ ಹಿಂದಿ ನಾಮಫ‌ಲಕಗಳಿಗೆ ಮಸಿ ಬಳಿದಿರುವುದಕ್ಕೆ ಕೋಮುಗಲಭೆ ಕೇಸು ಹಾಕುವುದು ಯಾವ ನ್ಯಾಯ? ಇದಕ್ಕೆ ಕಾರಣರಾದ ಪೊಲೀಸ್‌ ಆಯುಕ್ತ ಪ್ರವೀಣ್‌ಸೂದ್‌ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಹಮದಿಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾ, ಅಖೀಲ ಕರ್ನಾಟಕ ಕೆಥೋಲಿಕ್‌ ಕ್ರೈಸ್ತರ ಕನ್ನಡ  ಸಂಘದ ಪ್ರಧಾನ ಕಾರ್ಯದರ್ಶಿ ರಫಾಯಲ್‌ ರಾಜು, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಆರ್‌. ಭಾಸ್ಕರ್‌ ಪ್ರಸಾದ್‌, ಕರ್ನಾಟಕ ಜನಶಕ್ತಿ ಪದಾಧಿಕಾರಿ ವಾಸು ಮಾತನಾಡಿದರು. 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.