ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಜಿಎಸ್‌ಟಿ ಬೇಡ


Team Udayavani, Jul 25, 2017, 11:18 AM IST

tara-napkin.jpg

ಬೆಂಗಳೂರು: ಕೇಂದ್ರ ಸರ್ಕಾರ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿಧಿಸಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ರದ್ದುಗೊಳಿಸಬೇಕು ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯೆ ತಾರಾ ಅನುರಾಧಾ ಒತ್ತಾಯಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅಯೋಧ್‌ ಸೇವಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಬಡತನ ರೇಖೆಗಿಂತ ಕೆಳಗಿನ ಮಹಿಳೆಯರಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಋತುಮತಿ ಮಹಿಳೆಯರ ಅತ್ಯಗತ್ಯ ವಸ್ತುಗಳಲ್ಲಿ ಒಂದಾಗಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳಿಗೆ ಜಿಎಸ್‌ಟಿ ವಿಧಿಸಿರುವುದು ಸರಿಯಲ್ಲ. ಅದನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡುವಂತೆ ಜಿಎಸ್‌ಟಿ ಕೌನ್ಸಿಲ್‌ಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗಿದೆ. ಈ ತಿಂಗಳಲ್ಲಿ ನಡೆಯುವ ಜಿಎಸ್‌ಟಿ ಕೌನ್ಸಿಲ್‌ನ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ತೆರಿಗೆ ವಿನಾಯಿತಿ ನಿರ್ಧಾರ ತೆಗೆದುಕೊಳ್ಳವ ವಿಶ್ವಾಸವಿದೆ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಗೊಳಿಸುವ ಮುನ್ನ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿವಿಧ ಹಂತಗಳಲ್ಲಿ ಶೇ.18ರಷ್ಟು ತೆರಿಗೆ ವಿಧಿಸಲಾಗಿತ್ತು. ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಈಗ ಏಕರೂಪ ತೆರಿಗೆ (ಜಿಎಸ್‌ಟಿ) ಬಂದ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಿರುವುದು ಜನರ ಗಮನಕ್ಕೆ ಬಂದಿದೆ. ಹೀಗಾಗಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಲಾಗಿದೆ ಎಂದರು.

ಸುರಕ್ಷತೆ ಅಗತ್ಯ: ದೇಶದಲ್ಲಿ ಕೇವಲ ಶೇ.12ರಷ್ಟು ಮಹಿಳೆಯರು ಮಾತ್ರ ಋತುಮತಿಯರಾದಾಗ ಸ್ಯಾನಿಟರಿ ಪ್ಯಾಡ್‌ಗಳನ್ನು ಖರೀದಿಸಿ ಬಳಸುತ್ತಿದ್ದಾರೆ. ಉಳಿದಂತೆ ಅನೇಕರು ಇಂದಿಗೂ ಸಾಂಪ್ರದಾಯಿಕ ಅವೈಜ್ಞಾನಿಕ ಪದ್ಧತಿಗಳನ್ನೇ ಅನುಸರಿಸುತ್ತಿರುವುದು ಬೇಸರದ ಸಂಗತಿ. ಆರೋಗ್ಯ ದೃಷ್ಟಿಯಿಂದ ಋತುಸ್ರಾವದ ಆ ಮೂರು ದಿನ ಸುರಕ್ಷತೆ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಉಚಿತ ವಿತರಣೆ: ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಪ್ರವೀಣ್‌ ನಾಯಕ್‌ ಮಾತನಾಡಿ, ನಗರದ ಶಾಂತಿನಗರ ಮತ್ತು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಡಿ 2020ರ ವೇಳೆಗೆ ಐದು ದಶಲಕ್ಷ ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಗುರಿಯಿದೆ ಇದೆ.

ಇದರೊಂದಿಗೆ ಮುಟ್ಟಿನ ಸಮಯದಲ್ಲಿ ಶಾಲೆಗಳಲ್ಲಿ ಯುವತಿಯರ ಹಾಜರಾತಿ ಹೆಚ್ಚಿಸುವ ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದು ಯೋಜನೆಯ ಮುಖ್ಯ ಗುರಿ. ಯೋಜನೆಗೆ ತಗುಲುವ ವೆಚ್ಚವನ್ನು ಸರಿದೂಗಿಸಲು ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಮತ್ತು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದರು.

ಕಾರ್ಯಾಚಾರಣೆಯ ಮುಖ್ಯಸ್ಥೆ ಪೂನಂ ಮಾತನಾಡಿ,ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ನ್ಯಾಪ್‌ಕಿನ್‌ಗಳನ್ನು ವಿತರಿಸಲು ಆನ್‌ಲೈನ್‌ ವ್ಯವಸ್ಥೆಯನ್ನು ಶೀಘ್ರವೇ ಅಳವಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ  ಟ್ರಸ್ಟಿ ರಾಮಕೃಷ್ಣ ನಾಯಕ್‌, ರಂಗಕರ್ಮಿ ಕೃಷ್ಣಮೂರ್ತಿ ಕವತ್ತಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.