ಬಡ್ತಿ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ


Team Udayavani, Jul 26, 2017, 11:52 AM IST

sucide-].jpg

ಕೆ.ಆರ್‌.ಪುರ: ಉದ್ಯೋಗದಲ್ಲಿ ಬಡ್ತಿ ಸಿಗದಿದ್ದಕ್ಕೆ ಮನನೊಂದು ಕೆಫೆ ಕಾಫಿ ಡೇ ನೌಕರ “ನನ್ನ ಸಾವಿಗೆ ಕೆಪೆ ಕಾಫಿ ಡೇ’ ಕಾರಣ ಎಂದು ಡೆತ್‌ನೋಟ್‌ ಬರೆದು ನೇಣಿಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎ.ನಾರಾಯಣಪುರದಲ್ಲಿ ಮಂಗಳವಾರ ನಡೆದಿದೆ.

ಚಿಕ್ಕಮಂಗಳೂರು ಮೂಲದ ಪ್ರಮೋದ್‌(34) ನೇಣಿಗೆ ಶರಣಾದವ. ಪ್ರಮೋದ್‌ ವಿಜಯನಗರದ ಬಾಡಿಗೆ ಮನಯೊಂದರಲ್ಲಿ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ವಾಸವಾಗಿದ್ದ. ಕೆಪೆ ಕಾಫಿ ಡೇ ಸಂಸ್ಥೆಯಲ್ಲಿ 11 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೀಗೆ ಸಿಂಗಯ್ಯಪಾಳ್ಯ ಪಿನಿಕ್ಸ್‌ ಮಾರ್ಕೆಟ್‌ ಸಿಟಿಯಲ್ಲಿನ ಕೆಪೆ ಕಾಫಿ ಡೇ ಸಂಸ್ಥೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಮೋದ್‌ಗೆ ಕೆಲಸದಲ್ಲಿ ಬಡ್ತಿ ಸಿಕ್ಕಿರಲಿಲ್ಲವಾದರೂ, ಪದೇ ಪದೇ ವರ್ಗಾವಣೆಯಾಗುತ್ತಿದ್ದರು. ಅಲ್ಲದೆ, ಸಂಸ್ಥೆಯ ಹಿರಿಯ ಸಿಬ್ಬಂದಿಯಿಂದ ಕಿರುಕುಳಕ್ಕೊಳಗಾಗಿದ್ದಎನ್ನಲಾಗಿದೆ. ಇದರಿಂದ ಬೇಸತ್ತು ಸೊಮವಾರ ಸಂಜೆ ಸುಮಾರಿನಲ್ಲಿ ಎ.ನಾರಾಯಣಪುರದ ಸ್ನೇಹಿತನ ರೂಂನಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಸ್ನೇಹಿತ ಬಂದ ಮೇಲೆ ವಿಚಾರ ತಿಳಿದು ಮಹದೇವಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದರು. ಪ್ರಮೋನ್‌ ಸಾವಿಗೆ ಶರಣಾಗುವುದಕ್ಕೂ ಮುನ್ನ ಬರೆದ ಡೆತ್‌ ನೋಟ್‌ ಪೊಲೀಸರಿಗೆ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಡೆತ್‌ ನೋಟ್‌ನಲ್ಲಿ ಏನಿದೆ?: “ನನ್ನ ಸಾವಿಗೆ ಕೆಪೆ ಕಾಫಿ ಡೇ ನೆ ಕಾರಣ. ಯಾಕಂದರೆ ನಾನು ಬೆಂಗಳೂರಿನಲ್ಲಿ ಕೆಲಸ ಮಾಡ್ತಾ ಇದ್ದೆ. ಪ್ರಮೋಷನ್‌ ಕೊಡುತ್ತೇನೆ ಎಂದು ಮಂಗಳೂರಿಗೆ ಟ್ರಾನ್ಸ್‌ಪೊರ್‌ ಮಾಡಿದ್ರು. ಆದರೆ ಅಲ್ಲೂ ಸಹಾ ಪ್ರಮೋಷನ್‌ ಕೊಡಲಿಲ್ಲ. ಮತ್ತೆ ಬೆಂಗಳೂರಿಗೆ ಹೋಗಬೇಕು ಅಂತ ಹೇಳಿದ್ರು. ಮತ್ತೆ ಬೆಂಗಳೂರಿಗೆ ಬಂದೆ ಆದರೆ ಇದರಿಂದ ನನ್ನ ಮನಸಿಗೆ ತುಂಬಾ ನೋವಾಗಿತ್ತು. ಎಲ್ಲರೂ ಕೇಳುತ್ತಿದ್ದರು ಪ್ರಮೋಷನ್‌ ಏನಾಯ್ತು ಅಂತ.

ಅಷ್ಟೆ ಅಲ್ಲ ಕೆಪೆ ಕಾಫಿ ಡೆ ಅಲ್ಲಿ ತುಂಬಾ ಸೇಲ್ಸ್‌ ಪ್ರಜರ್‌, ಬ್ಯಾಂಕಿಂಗ್‌ ಮಾಡದೆ ಇದ್ದರೆ ಮ್ಯಾನೆಜರ್‌ ಸಾಲರಿ ಹೋಲ್ಡ್‌ ಮಾಡ್ತಾರೆ. ಲಕ್ಷ ಲಕ್ಷ ದುಡ್ಡು ಎಲ್ಲಿಂದ ತರುವುದು. ಎಲ್ಲ ಸ್ಟಾಫ್ ಮತ್ತು ಮ್ಯಾನೆಜರ್‌ಗೆ ತುಂಬಾ ಕಷ್ಟ. ಕೆಲಸ ಮಾಡುವುದು ಹೊಟ್ಟಡ ಪಾಡಿಗಾಗಿ. ಈ ರೀತಿ ಮಾಡಿದರೆ ಹೇಗೆ ವರ್ಕ್‌ ಮಾಡುವುದು. ಚಿನ್ನು ಅಂಡ್‌ ಮದ್ದು ನನ್ನನ್ನು ಕ್ಷಮಿಸಿಬಿಡಿ. ನಾನು ಸಿದ್ದಾರ್ಥ ಸರ್‌ ಹತ್ತಿರ ಕೇಳಿಕೊಳ್ಳುವುದೆಂದರೆ ನನ್ನ ಮಗನ ವಿದ್ಯಾಬ್ಯಾಸಕ್ಕೆ ಮತ್ತು ನನ್ನ ಹೆಂಡತಿ ಜೀವನಕ್ಕೆ ಸಹಾಯ ಮಾಡಿ. ಅಷ್ಟೆ ಅಲ್ಲದೆ ಸೇಲ್ಸ್‌ ಡೇ ಮಾಡುವುದು ಬೇಡ ಅಂತ ಹೇಳಿ.’

“ಅಪ್ಪ ,ಅಮ್ಮ,ಅಣ್ಣ, ಅತ್ತೆ, ಮಾವ, ಬಾವ, ಮುದ್ದು, ಮತ್ತು  ಅರ್ಪಿತಾಳನ್ನು ಚೆನ್ನಾಗಿ ನೋಡಿಕೊಳ್ಳಿ ಅವರಿಗೆ ನಾನು ಇಲ್ಲ ಅಂತ ಯಾವುತ್ತು ಅನ್ನಿಸಬಾರದು. ನಾನು ಸತ್ತ ಮೇಲೆ ನನ್ನ ಅಂಗಾಗ ಯಾರಿಗಾದರು ದಾನ ಮಾಡಿ,’ ಎಂದು ಪ್ರಮೋದ್‌ ತಮ್ಮ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.