ಪಾಟರಿ ಟೌನ್‌ ಗಣಪನಿಗೆ ಈ ವರ್ಷ ಡಿಮಾಂಡ್‌


Team Udayavani, Aug 16, 2017, 11:30 AM IST

ganesha-package.jpg

ಬೆಂಗಳೂರು: ಈ ಬಾರಿಯ ಗೌರಿ-ಗಣೇಶ ಹಬ್ಬ ಪ್ರಯುಕ್ತ ನಗರದೆಲ್ಲಡೆ ಗೌರಿ-ಗಣಪ ಮೂರ್ತಿಗಳು ಈಗಾಗಲೇ ಸಿದ್ಧಗೊಳ್ಳುತ್ತಿವೆ. ಈ ಬಾರಿ ಪಿಒಪಿ (ಪ್ಲಾಸ್ಟರ್‌ ಆಫ್ ಪ್ಯಾರೀಸ್‌) ಮೂರ್ತಿಗಳ ನಿಷೇಧ ಹಿನ್ನೆಲೆಯಲ್ಲಿ ನಗರದ  ಪರಿಯಾರ್‌ ನಗರ ಸರ್ಕಲ್‌ ಬಳಿ ಇರುವ ಪಾಟರಿ ಟೌನ್‌ನಲ್ಲಿ ಕುಂಬಾರರ ಕೈಯಲ್ಲಿ ತಯಾರಾಗುತ್ತಿರುವ ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. 

ಪಾಟರಿಟೌನ್‌ ಮೊದಲಿನಿಂದಲೂ ಮಣ್ಣಿನ ಮಡಕೆ ಸೇರಿದಂತೆ ಗಣಪ ಸೇರಿ ವಿವಿಧ ದೇವರ ಮೂರ್ತಿಗಳ ತಯಾರಿಕೆಗೆ ಖ್ಯಾತಿ ಪಡೆದಿದೆ. ಆದರೆ,  ಈ ಬಾರಿ ಪಿಒಪಿ ಗಣಪ-ಗೌರಿ ಮೂರ್ತಿಗಳಿಗೆ ನಿಷೇಧ ಇರುವುದರಿಂದ ಇಲ್ಲಿನ ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಬಂದಿದೆ. 

ಗಣೇಶ  ಹಬ್ಬಕ್ಕೆ ಮೂರು ತಿಂಗಳ ಮುಂಚೆಯೇ ಇಲ್ಲಿ ಗೌರಿ-ಗಣಪ ಮೂರ್ತಿಗಳ ತಯಾರಿಕೆ ಕಾರ್ಯ ಆರಂಭವಾಗುತ್ತದೆ. ಕುಂಬಾರರ ಕುಟುಂಬ ಸದಸ್ಯರೆಲ್ಲಾ ಸೇರಿ ಮಣ್ಣಿನ ಗೌರಿ-ಗಣಪ ಮೂರ್ತಿ ತಯಾರಿಸಲು ಮುಂದಾಗುತ್ತಾರೆ. ಸಂಪೂರ್ಣವಾಗಿ ಮಣ್ಣಿನಿಂದ ಮಾಡುವ ಮೂರ್ತಿ ಒಣಗಲು ಸಮಯ ಬೇಕಾಗುತ್ತದೆ. ಮೂರ್ತಿಗಳಿಗೆ ಬಣ್ಣ ಹಚ್ಚುವುದು ಮಾತ್ರ ಹಬ್ಬಕ್ಕೆ ಎರಡು ಮೂರು ದಿನಗಳ ಮುಂಚೆ. ಗೌರಿ-ಗಣಪ ಮೂರ್ತಿಗಳಿಗೆ ಬೇಡಿಕೆ ಆಧಾರದ ಮೇಲೆ ಬಣ್ಣ ಹಚ್ಚಿ ಮಾರುಕಟ್ಟೆಗೆ ಪೂರೈಕೆ ಮಾಡುತ್ತಾರೆ.

ಮಣ್ಣಿನಿಂದ ಮಾಡುವ ಮೂರ್ತಿಗಳ ತೂಕ ಸಾಮಾನ್ಯವಾಗಿ ಹೆಚ್ಚು. ಹಾಗಾಗಿಯೇ ಇವರು 2ರಿಂದ 3 ಅಡಿಯ ಗಣಪತಿ ಮೂರ್ತಿಗಳನ್ನು ಮಾತ್ರ ತಯಾರಿಸಿದ್ದಾರೆ. ಅದಕ್ಕೂ ಹೆಚ್ಚಿನ ಎತ್ತರದ ಮೂರ್ತಿಗಳು ಬೇಕಾಕೆನ್ನುವವರು ಪಾಂಡೀಚೆರಿ ಮೂಲದ ಪೇಪರ್‌ ಗಣಪತಿ ಮೂರ್ತಿಗಳನ್ನೇ ಜನರು ಕೊಂಡುಕೊಳ್ಳಬೇಕು ಎನ್ನುತ್ತಾರೆ ವ್ಯಾಪಾರಿ ಮೂರಳಿ ಬೋಜಿ. 

ಬ್ರಿಟಿಷರ ಕಾಲದಿಂದಲೂ ತಯಾರಿಕೆ
ಸ್ವಾತಂತ್ರ್ಯಕ್ಕೂ ಮುನ್ನ ತಮಿಳು ನಾಡು, ಆಂಧ್ರ ದಿಂದ ಇಲ್ಲಿಗೆ ವಲಸೆ ಬಂದಿರುವ ಈ ಕುಂಬಾರರಿಗೆ ಬ್ರಿಟಿಷ್‌ ಅಧಿಕಾರಿಗಳು ಅಂದು ಕುದುರೆ ಕಟ್ಟುತ್ತಿದ್ದ ಜಾಗವನ್ನು ಬಿಟ್ಟು ಕೊಟ್ಟಿದ್ದರು. 150 ವರ್ಷಗಳಿಂದಲೂ ವಂಶ ಪಾರಂಪರ್ಯವಾಗಿ ಇಲ್ಲಿ ಮಣ್ಣಿನ ಮಡಿಕೆ, ದೇವರ ಮೂರ್ತಿಗಳನ್ನು ತಯಾರಿ ಸಲಾಗುತ್ತಿದೆ. ಜೇಡಿ ಮಣ್ಣನ್ನು ಬೆಂಗಳೂರಿನ ಸುತ್ತ ಮುತ್ತಲಿನ ಹಳ್ಳಿಗಳಿಂದ ಲಾರಿ ಲೋಡಿಗೆ 3ರಿಂದ 4 ಸಾವಿರ ಕೊಟ್ಟು ತರಲಾಗುತ್ತದೆ.

ಮಳೆಗಾಲದಲ್ಲಿ ಜೇಡಿ ಮಣ್ಣು ಸಿಗುವುದು ಕಷ್ಟ. ಈ ಬಾರಿ ಸರ್ಕಾರ ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿರುವುದರಿಂದ ನಮ್ಮ ಮಣ್ಣಿನ ಗಣೇಶ ಮೂರ್ತಿಗಳಿಗೆ ಬೇಡಿಕೆ ಬಂದಿದೆ. ಈ ಬಾರಿ ಯಾದರು ಉತ್ತಮ ವ್ಯಾಪಾರವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಮೂರ್ತಿ ತಯಾರಕ ಜಿ. ಪ್ರಕಾಶ್‌.  

ಬಣ್ಣವಿಲ್ಲದ ಸಾದಾ ಮೂರ್ತಿಗಳಿಗೆ ಬೇಡಿಕೆ ಇದೆ. ಜನ ಕೇಳಿದರೆ ಮಾತ್ರ ಬಣ್ಣ ಹಚ್ಚಿಕೊಡುತ್ತೇವೆ. 
-ಮೂರಳಿ ಬೋಜಿ, ವ್ಯಾಪಾರಿ. 

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.