ದಾಖಲೆ ಬರೆದ “ಕವಿ ಮನೆ’ ಫ‌ಲಪುಷ್ಪ ಪ್ರದರ್ಶನ


Team Udayavani, Aug 16, 2017, 11:30 AM IST

lalbhag5.jpg

ಬೆಂಗಳೂರು: ಮೈಸೂರು ಉದ್ಯಾನಕಲಾ ಸಂಘವು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಲಾಲಾಬಾಗ್‌ನಲ್ಲಿ ಹಮ್ಮಿಕೊಂಡಿದ್ದ 10 ದಿನಗಳ ಫ‌ಲಪುಷ್ಪ ಪ್ರದರ್ಶನಕ್ಕೆ ಮಂಗಳವಾರ ತೆರೆಬಿದ್ದಿದೆ. ಶುಲ್ಕ ಸಂಗ್ರಹ ಲೆಕ್ಕದಲ್ಲಿ ಹಿಂದಿನ 206 ಫ‌ಲ-ಪುಷ್ಪ ಪ್ರದರ್ಶನಗಳ ದಾಖಲೆ ಮುರಿದಿರುವ ಈ ಬಾರಿಯ ಪ್ರದರ್ಶನದಲ್ಲಿ 2.14 ಕೋಟಿ ರೂ. ಶುಲ್ಕ ಸಂಗ್ರಹವಾಗಿದೆ. 

ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ರಸ ಋಷಿ ಕುವೆಂಪು ಅವರ ಸ್ಮರಣಾರ್ಥ ಕುಪ್ಪಳಿಯ ಅವರ ಮನೆ, ಕವಿಶೈಲ, ಜೋಗ ಜಲಪಾತ ಸೇರಿ ವಿವಿಧ ಕಲಾಕೃತಿಗಳನ್ನು ಳಗೊಂಡಿದ್ದ ಹತ್ತು ದಿನಗಳ ಪ್ರದರ್ಶನಕ್ಕೆ 5.74 ಲಕ್ಷ ಮಂದಿ ಭೇಟಿ ನೀಡಿದ್ದಾರೆ. 

ಸಾಧಕರೊಬ್ಬರನ್ನು ಮಾದರಿಯಾಗಿಟ್ಟುಕೊಂಡು ಇದೇ ಮೊದಲ ಬಾರಿ ಏರ್ಪಡಿಸಿದ್ದ ಫ‌ಲಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ನಿರೀಕ್ಷೆ ಮೀರಿ ಸ್ಪಂದಿಸಿದ್ದು, ಪ್ರವಾಸಿಗರಿಂದ ಸುಮಾರು 2 ಕೋಟಿ ರೂ.ಗೂ ಅಧಿಕ ಟಿಕೆಟ್‌ ಶುಲ್ಕ ಸಂಗ್ರಹವಾಗಿದೆ. ಕುವೆಂಪು ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳು ಕೈಜೋಡಿಸಿದ್ದರಿಂದ 10 ದಿನಗಳ ಕಾಲವೂ ದಿನವಿಡೀ ವಿವಿಧ ಕಾರ್ಯಕ್ರಮಗಳು ನಡೆಯುತ್ತಲೇ ಇದ್ದವು. ಜತೆಗೆ ವೀಕ್ಷಕರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ಬಂದಿದ್ದು, ಕವಿ ಮನೆ ಪುಷ್ಪ ಪ್ರದರ್ಶನ ಯಶಸ್ವಿಯಾಗಿದೆ.

ಹಂಸಲೇಖ ಭೇಟಿ: ಫ‌ಲಪುಷ್ಪ ಪ್ರದರ್ಶನಕ್ಕೆ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಕುಟುಂಬ ಹಾಗೂ ವಿಮರ್ಶಕ ನರಹಳ್ಳಿ ಬಾಲಸುಬ್ರಮಣ್ಯ ಅವರು ಭೇಟಿ ನೀಡಿದ್ದರು. “ತೋಟಗಾರಿಕೆ ಇಲಾಖೆ ಯುಗದ ಕವಿಗೆ ಅದ್ಭುತ ಗೌರವ ಸಲ್ಲಿಸಿದೆ. ನಾಡಗೀತೆಯ ಒಂದು ಸಾಲನ್ನೂ ತೆಗೆಯದೆ ಕೇವಲ ಎರಡೇ ನಿಮಿಷದಲ್ಲಿ ಸಂಗೀತ ಸಂಯೋಜಿಸಿದ್ದೇನೆ. ಶೀಘ್ರವೇ ಅದನ್ನು ಸರ್ಕಾರದ ಗಮನಕ್ಕೆ ತರಲಾಗುವುದು,’ ಎಂದು ಹಂಸಲೇಖ ಹೇಳಿದರು.

ಮಳೆ ಅವಾಂತರ: ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಲಾಲ್‌ಬಾಗ್‌ ಗಾಜಿನಮನೆ ಒಳಗೆ ವಿಪರೀತ ನೀರು ಮತ್ತು ಕೆಸರು ತುಂಬಿತ್ತು. ನೂರಕ್ಕೂ ಅಧಿಕ ಕಾರ್ಮಿಕರನ್ನು ಬಳಸಿ ಕೆಸರನ್ನೆಲ್ಲಾ ಹೊರ ಹಾಕಲಾಯಿತು. ಜತೆಗೆ ಹೊಸದಾಗಿ ಮರಳು ತುಂಬಿಸಿ, ವೀಕ್ಷಕರಿಗೆ ಅನುಕೂಲ ಮಾಡಿಕೊಡಲಾಗಿತ್ತು.

ದಾಖಲೆಯ ಜನಸಾಗರ: ರಾತ್ರಿಯಿಡೀ ಸುರಿದ ಮಳೆ ಸ್ವಾತಂತ್ರೊತ್ಸವದ ದಿನದ ಪ್ರದರ್ಶನಕ್ಕೆ ಅಡ್ಡಿಯುಂಟು ಮಾಡಬಹುದು ಎಂಬ ಆತಂಕದಲ್ಲೇ ಕಡೆಯ ದಿನದ ಪ್ರದರ್ಶನ ಆರಂಭವಾಗಿತ್ತು. ಆದರೆ ವಯಸ್ಕರು 1.66 ಲಕ್ಷ, ಮಕ್ಕಳು 16,500, ಶಾಲಾ ಮಕ್ಕಳು 18,500, ಪಾಸ್‌ವುಳ್ಳವರು 12,410 ಸೇರಿದಂತೆ ಸುಮಾರು 2.13 ಲಕ್ಷಕ್ಕೂ ಅಧಿಕ ಮಂದಿ ಒಂದೇ ದಿನ ಭೇಟಿ ನೀಡಿದ್ದು, ಹಿಂದಿನ ಎಲ್ಲ ದಾಖಲೆಯನ್ನು ಬುಡಮೇಲು ಮಾಡಿದೆ. ರಜೆ ದಿನವಾದ್ದರಿಂದ ಸುಮಾರು 1.25 ಲಕ್ಷ ಪ್ರೇಕ್ಷಕರು ಬರಬಹುದು ಎಂದು ಆಯೋಜಕರು ನಿರೀಕ್ಷಿಸಿದ್ದರು. ಆದರೆ, ಅದಕ್ಕೂ ಮೀರಿ ಜನಸಾಗರ ಹರಿದುಬಂದಿದ್ದರಿಂದ ನೂಕುನುಗ್ಗಲಿನಿಂದ ಶೇ.30ರಿಂದ 40ರಷ್ಟು ಮಂದಿಗೆ ಟಿಕೆಟ್‌ ನೀಡಲಾಗಿಲ್ಲ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಜನ-ಹಣದ ದಾಖಲೆ!: ಮೈಸೂರು ಉದ್ಯಾನ ಕಲಾ ಸಂಘ ಫ‌ಲಪುಷ್ಪ ಪ್ರದರ್ಶನ ಆರಂಭಿಸಿದ ವರ್ಷದಿಂದ ಇದುವರೆಗೂ 206 ಪ್ರದರ್ಶನಗಳು ನಡೆದಿವೆ. ಹಿಂದೆಂದೂ ಕಂಡರಿಯದಷ್ಟು ಜನಸಂದಣಿ ಈ ಬಾರಿಯ ಫ‌ಲಪುಷ್ಪ ಪ್ರದರ್ಶನದಲ್ಲಿ ಕಂಡು ಬಂದಿದೆ. ಹತ್ತು ದಿನಗಳ ಫ‌ಲಪುಷ್ಪ ಪ್ರದರ್ಶನಕ್ಕೆ 4.28 ಲಕ್ಷ ವಯಸ್ಕರು, 36,500 ಮಕ್ಕಳು, 66500 ಶಾಲಾ ಮಕ್ಕಳು ಮತ್ತು 42 ಸಾವಿರ ಜನ ಪಾಸ್‌ವುಳ್ಳವರು ಸೇರಿದಂತೆ 5.74 ಲಕ್ಷ ಜನರು ಭೇಟಿ ನೀಡಿದ್ದಾರೆ. ಆ.4ರಿಂದ 14ರವರೆಗೆ 1.51 ಕೋಟಿ ರೂ.ಸಂಗ್ರಹವಾಗಿತ್ತು. ಅಂತಿಮ ದಿನವಾದ ಆ.15ರಂದು 62,40,260 ರೂ.ಟಿಕೆಟ್‌ ಶುಲ್ಕ ಸಂಗ್ರಹವಾಗಿದ್ದು, ಒಟ್ಟಾರೆಯಾಗಿ ಹತ್ತು ದಿನಗಳಿಂದ 2.14 ಕೋಟಿ ರೂ. ಸಂಗ್ರಹವಾಗಿದೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.