ಮಳೆ ನಿಲ್ಲುತ್ತಿಲ್ಲ, ಜನರಿಗೆ ನೆಮ್ಮದಿಯಿಲ್ಲ


Team Udayavani, Aug 18, 2017, 11:29 AM IST

rain.jpg

ಬೆಂಗಳೂರು: ಮಳೆ ಬಿಡುತ್ತಿಲ್ಲ, ರಾಜಧಾನಿ ಜನತೆಗೆ ನೆಮ್ಮದಿ ಇಲ್ಲ. ಸೋಮವಾರ ರಾತ್ರಿ ಆರಂಭವಾಗಿರುವ ಮಳೆ ಗುರುವಾರವೂ ಮುಂದುವರಿದ ಪರಿಣಾಮ ರಾಜಧಾನಿಗೆ ಮಳೆ ಅವಾಂತರದಿಂದ ಮುಕ್ತಿ ಸಿಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ.

ಸತತ ನಾಲ್ಕನೇ ದಿನವಾದ ಗುರವಾರವೂ ಮಳೆ ಮುಂದುವರಿದಿದ್ದು, ತಡ ರಾತ್ರಿ ಸುರಿದ ಮಳೆಗೆ ನಗರದ ಅನೇಕ ಭಾಗಗಳು ಸಮಸ್ಯೆ ಎದುರಿಸಿವೆ. ವಿಶೇಷವಾಗಿ ಎಚ್‌ಎಎಲ್‌ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅಣ್ಣಸಂದ್ರ ಬಡಾವಣೆ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಮ್ಯಾನ್‌ಹೋಲ್‌ ಉಕ್ಕಿ ಹರಿದು ಪ್ರವಾಹ ಮಾದರಿಯಲ್ಲಿ ನೀರು ರಸ್ತೆಯಲ್ಲಿ ತುಂಬಿದೆ. ಇನ್ನು ಮೂರು ದಿನಗಳಿಂದ ದ್ವೀಪದಂತಾಗಿರುವ ಎಸ್‌ಟಿ ಬೆಡ್‌ ಪ್ರದೇಶದಲ್ಲಿ ಮತ್ತೂಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸಂಪಂಗಿರಾಮ ನಗರ 28.5 ಮಿ.ಮೀ. ದಯಾನಂದ ನಗರ 25, ವಿದ್ಯಾಪೀಠ 20.5, ದಾಸನಪುರ 15ಮಿ.ಮೀ., ಬಸವೇಶ್ವರನಗರ 14, ನಾಗಾಪುರ 14.5, ಕಾಟನ್‌ಪೇಟೆ 17, ರಾಜ್‌ಮಹಲ್‌ ಗುಟ್ಟಹಳ್ಳಿ 18, ಸಾರಕ್ಕಿ 19 ಹಾಗೂ ಬಸವನಗುಡಿಯಲ್ಲಿ 16 ಮಿ.ಮೀ ಮಳೆಯಾಗಿದೆ. ಗುರುವಾರ ರಾತ್ರಿ ಗಾಳಿಯಿಲ್ಲದೆ ಬರಿ ಮಳೆ ಮಾತ್ರ ಸುರಿದಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.

ಸ್ಥಿತಿ ಬದಲಾಗಿಲ್ಲ: ಒಳ ಚರಂಡಿಗಳು ತುಂಬಿ ಹರಿದಿರುವುದರಿಂದ ಎಸ್‌ಟಿ ಬೆಡ್‌ ಪ್ರದೇಶ ಕೊಚ್ಚೆಯಂತಾಗಿದ್ದು, ಕೋರಮಂಗಲ ನಾಲ್ಕನೇ ಹಂತ ಮತ್ತು ಎಸ್‌ಟಿ ಬೆಡ್‌ ಪ್ರದೇಶಗಳಲ್ಲಿ ಇನ್ನೂ ಸ್ಥಿತಿ ಬದಲಾಗಿಲ್ಲ. ಅನೇಕ ಅಪಾರ್ಟ್‌ಮೆಂಟ್‌ಗಳು ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರಿನಲ್ಲಿಯೇ ನಿಂತಿವೆ. ಗುರುವಾರ ರಾತ್ರಿ ಮತ್ತೆ ಮಳೆ ಬಿದ್ದಿರುವುದು ಸಮಸ್ಯೆ ದುಪ್ಪಟ್ಟಾಗಿದೆ. ಬೇಸ್‌ಮೆಂಟ್‌ನಲ್ಲಿ ತುಂಬಿರು ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ.

ನೀರನ್ನು ಹೊರಕ್ಕೆ ಪಂಪ್‌ ಮಾಡಲು ಮೋಟಾರ್‌ಗಳ ಅವಶ್ಯವಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಿರುವ ಕನ್ನಡಭವನದ ನಯನ ಸಭಾಂಗಣ ಜಲಾವೃತಗೊಂಡಿದ್ದು, ನೀರು ಹೊರ ಹಾಕುವ ಕಾರ್ಯದಲ್ಲಿ ಸಿಬ್ಬಂದಿ ಮಗ್ನರಾಗಿದ್ದರು. ಪಾಲಿಕೆ ಸಿಬ್ಬಂದಿಗಳು ಮೂರು ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ಮಾಡುತ್ತಿದ್ದರೂ ಸಹ ಮೂಲ ಸೌಕರ್ಯ ಒದಗಿಸುವುದು ಸವಾಲಿನ ಕೆಲಸವಾಗಿದೆ.  

ಪಾಲಿಕೆ ತ್ವರಿತಗತಿಯಲ್ಲಿ ಸ್ವತ್ಛತೆ ಕೈಗೊಳ್ಳದಿದ್ದಲ್ಲಿ ಮತ್ತಷ್ಟು ಅನಾಹುತ ಎದುರಾಗಲಿದೆ. ನೀರು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಪಾಲಿಕೆ ತಕ್ಷಣವೇ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.