ಪ್ರತಿಪಕ್ಷಗಳಿಗೆ ನುಂಗಲಾಗದ ತುತ್ತಾದ ಇಂದಿರಾ ಕ್ಯಾಂಟೀನ್‌


Team Udayavani, Aug 21, 2017, 11:28 AM IST

canteen-pratipakhsa.jpg

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಇಂದಿರಾ ಕ್ಯಾಂಟೀನ್‌’ ಯೋಜನೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ಗೆ ತಲೆಬಿಸಿಯಾಗಿದೆ. ಆಟೋ ಚಾಲಕರು, ವಿದ್ಯಾರ್ಥಿಗಳು, ಕಾರ್ಮಿಕರು, ಬಡ ಹಾಗೂ ಮಧ್ಯಮ ವರ್ಗದವರು ಕ್ಯಾಂಟೀನ್‌ನತ್ತ ಆಕರ್ಷಿತರಾಗುತ್ತಿರುವುದು ಇದಕ್ಕೆ ಕಾರಣ.

ಈ ನಡುವೆ ಯೋಜನೆಯನ್ನು ರಾಜ್ಯವ್ಯಾಪಿ ವಿಸ್ತರಿಸಲು ಸರ್ಕಾರ ಮುಂದಾಗಿರುವುದರಿಂದ ಅದು ಕಾರ್ಯಗತಗೊಂಡರೆ ಒಂದು ವರ್ಗದ “ಮತಬ್ಯಾಂಕ್‌’ ಕೈ ಪಾಲಾಗಬಹುದು ಎಂಬ ಆತಂಕ ಎರಡೂ ಪಕ್ಷಗಳದ್ದು ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಜೆಡಿಎಸ್‌ಗೆ ನುಂಗಲಾಗದ ತುತ್ತು: ಅದರಲ್ಲೂ “ಅಹಿಂದ’ ವರ್ಗ ಸೇರಿ ಕಾಂಗ್ರೆಸ್‌ ಓಟ್‌ಬ್ಯಾಂಕ್‌ಗೆ ಲಗ್ಗೆ ಹಾಕಲು ವರ್ಷಕ್ಕೆ ಮುಂಚೆಯೇ ಚುನಾವಣಾ ಅಖಾಡಕ್ಕಿಳಿದು ರಣತಂತ್ರ ರೂಪಿಸುತ್ತಿರುವ ಜೆಡಿಎಸ್‌ಗೆ ಇಂದಿರಾ ಕ್ಯಾಂಟೀನ್‌ ನುಂಗಲಾರದ ತುತ್ತಾಗಿದೆ. ಹೀಗಾಗಿ, ನಮ್ಮ ಅಪ್ಪಾಜಿ ಕ್ಯಾಂಟೀನ್‌ ಮತ್ತಷ್ಟು ವಿಸ್ತರಿಸುವ ಬಗ್ಗೆ ಗಂಭೀರ ಚಿಂತನೆಯಲ್ಲಿದೆ.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಯುವಸಮೂಹ ಕ್ಯಾಂಟೀನ್‌ನತ್ತ ಆಕರ್ಷಿತರಾಗುತ್ತಿರುವುದು. ಆಟೋ ಚಾಲಕರು, ಗಾರ್ಮೆಂಟ್ಸ್‌ ಕಾರ್ಮಿಕರು ಸೇರಿದಂತೆ ಶ್ರಮಿಕ ವರ್ಗ ಕ್ಯಾಂಟೀನ್‌ ಯೋಜನೆಗೆ ಸಂತಸ ವ್ಯಕ್ತಪಡಿಸಿರುವ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವುದರಿಂದ ಪಕ್ಷವನ್ನು ಚಿಂತೆಗೀಡುಮಾಡಿದೆ ಎನ್ನಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಕನಿಷ್ಠ 10 ಸ್ಥಾನ ಗೆಲ್ಲುವ ಗುರಿ ಹೊಂದಿದ್ದ ನಮಗೆ ನಮಗೆ ಇಂದಿರಾ ಕ್ಯಾಂಟೀನ್‌ ಸ್ವಲ್ಪ ಹೊಡೆತ ಕೊಡಬಹುದು. ರಾಜ್ಯಾದ್ಯಂತ ಇಂದಿರಾಕ್ಯಾಂಟೀನ್‌ ಪ್ರಾರಂಭವಾದರೆ ಆಗಬಹುದಾದ ಪರಿಣಾಮಗಳನ್ನೂ ಯೋಚಿಸಿ ಪರ್ಯಾಯ ತಂತ್ರಗಾರಿಕೆ ಬಗ್ಗೆ ಈಗಾಗಲೇ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಮುಖಂಡರೊಬ್ಬರು ಹೇಳುತ್ತಾರೆ.

ನಮ್ಮ ಅಪ್ಪಾಜಿ ಕ್ಯಾಂಟೀನ್‌ ವಿಸ್ತರಣೆ
ಈ ಮಧ್ಯೆ, ಇಂದಿರಾ ಕ್ಯಾಂಟೀನ್‌ಗೆ ಪರ್ಯಾಯವಾಗಿ ಜೆಡಿಎಸ್‌ ವತಿಯಿಂದ ಬಸವನಗುಡಿಯಲ್ಲಿ ಆರಂಭಿಸಿರುವ ದೇವೇಗೌಡರ ಹೆಸರಿನ ನಮ್ಮ ಅಪ್ಪಾಜಿ ಕ್ಯಾಂಟೀನ್‌ ಅನ್ನು ಇತರೆಡೆಗೆ ವಿಸ್ತರಿಸಲು ಗಂಭೀರ ಚಿಂತನೆ ನಡೆದಿದೆ. ಶೀಘ್ರದಲ್ಲೇ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗೋಪಾಲಯ್ಯ ಅವರ ನೇತೃತ್ವದಲ್ಲಿ ಕ್ಯಾಂಟೀನ್‌ ಆರಂಭವಾಗಲಿದೆ. ಈಗಾಗಲೇ ಜಾಗ ಗುರುತಿಸುತ್ತಿದ್ದು, ಮಲ್ಲೇಶ್ವರದಲ್ಲೂ ನಮ್ಮ ಅಪ್ಪಾಜಿ ಕ್ಯಾಂಟೀನ್‌ ತೆರೆಯಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಆರ್ಥಿಕವಾಗಿ ಸ್ಥಿತಿವಂತರಾಗಿರುವ ನಾಯಕರಿಗೆ ಖುದ್ದು ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರು, ಸಾಧ್ಯವಾದರೆ ಕ್ಯಾಂಟೀನ್‌ ತೆರೆಯುವಂತೆ ಸಲಹೆ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಕೆಲವೆಡೆ ಕ್ಯಾಂಟೀನ್‌ ತೆರೆಯಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಸವನಗುಡಿಯಲ್ಲಿ ನಮ್ಮ ಅಪ್ಪಾಜಿ ಕ್ಯಾಂಟೀನ್‌ ತೆರೆದಿರುವ ಶರವಣ ಅವರ ಬಳಿ ದೈನಂದಿನ ವೆಚ್ಚ, ಕಾರ್ಮಿಕರ ಅಗತ್ಯತೆ ಮತ್ತಿತರ ಮಾಹಿತಿಗಳನ್ನು ಕೆಲವು ಜೆಡಿಎಸ್‌ ನಾಯಕರು ಪಡೆದುಕೊಂಡಿದ್ದಾರೆ. ಒಟ್ಟಾರೆ, ವಿಧಾನಸಭೆ, ಲೋಕಸಭೆ, ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಡ ಹಾಗೂ ಮಧ್ಯಮ ವರ್ಗ ದೃಷ್ಟಿಯಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ಊಟ ಮತ್ತು ತಿಂಡಿ ನೀಡುವ ಕ್ಯಾಂಟೀನ್‌ಗಳ ಸ್ಥಾಪನೆ “ಸಮೂಹ ಸನ್ನಿಯಂತೆ’ ಆದರೂ ಆಶ್ಚರ್ಯವಿಲ್ಲ. “ಕ್ಯಾಂಟೀನ್‌’ ಭಾಗ್ಯ ಎಷ್ಟರ ಮಟ್ಟಿಗೆ ರಾಜಕೀಯ ಲಾಭ ತಂದುಕೊಡಲಿದೆ ಎಂಬುದನ್ನೂ ಕಾದು ನೋಡಬೇಇದೆ.

ಇಂದಿರಾ ಕ್ಯಾಂಟೀನ್‌ಗೆ ನಾವು ಹೆದರಿಲ್ಲ. ಬದಲಿಗೆ ನಮ್ಮ ಅಪ್ಪಾಜಿ ಕ್ಯಾಂಟೀನ್‌ ವಿಸ್ತರಿಸುವ ಯೋಚನೆಯಿದೆ. ಇಂದಿರಾ ಕ್ಯಾಂಟೀನ್‌ ಯೋಜನೆ ನಮ್ಮ ಮತಬ್ಯಾಂಕ್‌ ಮೇಲೇನೂ ಪರಿಣಾಮ ಬೀರದು. ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ ತರಾತುರಿಯಲ್ಲಿ ಜಾರಿ ಮಾಡಿರುವ ಕ್ಯಾಂಟೀನ್‌ ಯೋಜನೆ ಬಹಳ ದಿನ ನಡೆಯಲ್ಲ.
-ಟಿ.ಎ.ಶರವಣ, ರಾಜ್ಯ ಜೆಡಿಎಸ್‌ ವಕ್ತಾರ

* ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.