ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಮೇಯರ್ ಕರೆ
Team Udayavani, Aug 21, 2017, 11:31 AM IST
ಬೆಂಗಳೂರು: ಸಾರ್ವಜನಿಕರು ಗಣಪತಿ ಮೂರ್ತಿಗಳನ್ನು ಮನೆಗಳಲ್ಲೇ ತಯಾರಿಸಿ ಪೂಜಿಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಣೆ ಮಾಡಬೇಕು ಎಂದು ಮೇಯರ್ ಜಿ.ಪದ್ಮಾವತಿ ಕರೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ “ಜಾಗೃತಿಗಾಗಿ ಓಟ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಣೇಶ ಹಬ್ಬದಂದು ಮೂರ್ತಿ ಪೂಜೆ ಮಾಡುವವರು ಮಣ್ಣಿ ನ ಗಣೇಶನನ್ನೇ ಪೂಜಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಗ್ರೀನ ಸ್ಟೇಜ್ ತಂಡದವರು ಬೀದಿ ನಾಟಕದ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಣೆ ಕುರಿತು ಜಾಗೃತಿ ಮೂಡಿಸಿದರು. ಜಾಗೃತಿ ಓಟದಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರು ಪಾಲ್ಗೊಂಡಿದ್ದರು.
ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ ಆರಂಭವಾದ ಓಟ, ಕೇಂದ್ರ ಗ್ರಂಥಾಲಯದ ಮೂಲಕ ನೃಪತುಂಗ ರಸ್ತೆಯಲ್ಲಿ ಸಾಗಿ ಮತ್ತೆ ಕಬ್ಬನ್ ಮುಖ್ಯದ್ವಾರಕ್ಕೆ ಬಂದು ತಲುಪಿತು. ಓಟದಲ್ಲಿ ಪಾಲಿಕೆಯ ತೆರಿಗೆ ಅಧಿಕಾರಿ ಸುಧಾಕರ್ ಹಾಗೂ ಆಶಾ ಅವರು ಮೊದಲ ಸ್ಥಾನ ಪಡೆದು ತಲಾ 10 ಸಾವಿರ ನಗದು ಬಹುಮಾನ ಪಡೆದರು.
ರಸ್ತೆ ಓಟದಲ್ಲಿ ಭಾಗವಹಿಸಿದ್ದವರು ಸಾರ್ವಜನಿಕರಿಗೆ ಪರಿಸರ ಗಣಪತಿಯ ಬಗ್ಗೆ ಅರಿವು ಮೂಡಿಸಲು ಕರಪತ್ರ ವಿತರಿಸಿದರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಸಂಘದ ಅಧ್ಯಕ್ಷ ಎ.ಅಮೃತರಾಜ್, ಗೌರವಾಧ್ಯಕ್ಷ ಎಚ್.ವಿ.ಅಶ್ವತ್ಥ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು