ಕ್ಯಾಂಟೀನ್ ವ್ಯವಸ್ಥೆ ಮೇಲೆ ಕಣ್ಣು
Team Udayavani, Aug 23, 2017, 12:10 PM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ಗಳಲ್ಲಿನ ವ್ಯವಸ್ಥೆ ಬಗ್ಗೆ ತಿಳಿಯಲು ದಿಢೀರ್ ಭೇಟಿ ಮುಂದುವರಿಸಿರುವ ಮೇಯರ್ ಜಿ. ಪದ್ಮಾವತಿ, ಮಂಗಳವಾರ ಅತಿ ¤ಗುಪ್ಪೆ, ನಾಗರಬಾವಿ, ಪಾದರಾಯನಪುರ, ಆಜಾದ್ನಗರ ಮತ್ತು ರಾಯಪುರಂ ವಾರ್ಡ್ಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಪರಿಶೀಲನೆ ನಡೆಸಿದರು.
ಈ ವೇಳೆ ಕ್ಯಾಂಟೀನ್ ಸಿಬ್ಬಂದಿಗೆ ಹಲವು ಸಲಹೆ ಸೂಚನೆಗಳನ್ನು ಮೇಯರ್ ನೀಡಿದ್ದಾರೆ. “ಕ್ಯಾಂಟೀನ್ಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಆಹಾರದ ಹಂಚಿಕೆ ಸಮರ್ಪಕವಾಗಿರಬೇಕು ಹಾಗೂ ಸ್ವತ್ಛತೆ ಕಾಪಾಡಬೇಕು,’ ಎಂದು ತಾಕೀತು ಮಾಡಿದ್ದಾರೆ. ಆಜಾದ್ನಗರ ಮತ್ತು ಬಾಬು ಜಗಜೀವನರಾಮ್ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಹೊರಭಾಗದಲ್ಲಿ ನಡೆಯುತ್ತಿರುವ ಸಿವಿಲ್ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಅನಿರೀಕ್ಷಿತ ತಪಾಸಣೆ ವೇಳೆ ಅತ್ತಿಗುಪ್ಪೆ ವಾರ್ಡ್ ಇಂದಿರಾ ಕ್ಯಾಂಟೀನ್ನಲ್ಲಿ ಶಾಲಾ ಮಕ್ಕಳು ಸಾಲಿನಲ್ಲಿ ನಿಂತಿರುವುದನ್ನು ಗಮನಿಸಿದ ಮೇಯರ್, ಮಕ್ಕಳಿಗೆ ಸ್ವತಃ ತಿಂಡಿ ತಿನಿಸಿದರು. ವ್ಯವಸ್ಥಿತವಾಗಿ ತಿಂಡಿ ಸರಬರಾಜು ಆಗುತ್ತಿರುವುದನ್ನು ಗಮನಿಸಿದರು. ನಂತರ ಪೂರ್ವವಲಯದ ಗಂಗಾನಗರ ವಾರ್ಡ್, ಗಂಗೇನಹಳ್ಳಿ ವಾರ್ಡ್, ಹೆಬ್ಟಾಳ ವಾರ್ಡ್ನಲ್ಲಿರುವ ಇಂದಿರಾ ಕ್ಯಾಂಟೀನ್ಗಳಿಗೆ ಮಧ್ಯಾಹ್ನದ ಊಟ ಸರಬರಾಜಿನ ಬಗ್ಗೆ ತಪಾಸಣೆ ಕೈಗೊಂಡು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಆಹಾರದ ಗುಣಮಟ್ಟ ಮತ್ತು ರುಚಿಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಮಾತನಾಡಿದ ಮೇಯರ್, ಇಂದಿರಾ ಕ್ಯಾಂಟೀನ್ ವ್ಯವಸ್ಥೆಯು ದಿನೇ ದಿನೇ ಸುಧಾರಿಸುತ್ತಿದ್ದು, ನಿರೀಕ್ಷೆಗಿಂತ ಹೆಚ್ಚು ಜನ ಭೇಟಿ ನೀಡುತ್ತಿದ್ದಾರೆ. ಹಾಗಾಗಿ, ಎಲ್ಲರಿಗೂ ಸಮರ್ಪಕ ಆಹಾರ ಪೂರೈಕೆಯಲ್ಲಿ ತುಸು ವ್ಯತ್ಯಾಸವಾಗುತ್ತಿದ್ದು, ಹಂತ-ಹಂತವಾಗಿ ಸುಧಾರಣೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ