ಮೃತನ ಪರಿಹಾರದ ಹಣಕ್ಕೆ ಹಗ್ಗಜಗ್ಗಾಟ


Team Udayavani, Sep 20, 2017, 11:43 AM IST

bbmp-check.jpg

ಬೆಂಗಳೂರು: ಈಚೆಗೆ ಕಾರಿನ ಮೇಲೆ ಮರಬಿದ್ದು ಮೃತಪಟ್ಟ ಜಗದೀಶ್‌ ಅವರ ಕುಟುಂಬಕ್ಕೆ ಬಿಬಿಎಂಪಿ ನೀಡಿದ್ದ ಪರಿಹಾರ ಮೊತ್ತದ ಹಂಚಿಕೆ ವಿಚಾರದಲ್ಲಿ ಜಗದೀಶ್‌ ಪತ್ನಿ ಹಾಗೂ ಪೋಷಕರ ನಡುವೆ ತಿಕ್ಕಾಟ ಶುರುವಾಗಿದೆ. 

ಕಳೆದ ಸೆ. 8ರಂದು ಸಂಜೆ ನಗರದಲ್ಲಿ ಸುರಿದ ಗಾಳಿಸಹಿತ ಭಾರಿ ಮಳೆಗೆ ಕಾರಿನ ಮೇಲೆ ಮರಬಿದ್ದು ಜಗದೀಶ್‌ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತ ಪಟ್ಟಿದ್ದರು. ಆಗ ಬಿಬಿಎಂಪಿಯು ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ನೀಡುವ ಭರವಸೆ ನೀಡಿತ್ತು. ಬಳಿಕ ಸೆ. 11ರಂದು ಮೇಯರ್‌ ಜಿ. ಪದ್ಮಾವತಿ, ಜಗದೀಶ್‌ ಪತ್ನಿ ರೂಪಾಗೆ ಐದು ಲಕ್ಷ  ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದರು. 

ನಂತರದಲ್ಲಿ ರೂಪಾ ಹಾಗೂ ಜಗದೀಶ್‌ ಫೋಷಕರ ನಡುವೆ ಪರಿಹಾರದ ಮೊತ್ತಕ್ಕಾಗಿ ಪರಸ್ಪರ ತಿಕ್ಕಾಟ ಶುರುವಾಗಿದೆ. ಈ ಮಧ್ಯೆ ಮೇಯರ್‌ ಅವರನ್ನು ಭೇಟಿ ಮಾಡಿದ ಜಗದೀಶ್‌ ತಂದೆ-ತಾಯಿ, “ಇರುವ ಒಬ್ಬ ಮಗ ಜಗದೀಶ್‌ ಮೃತಪಟ್ಟಿದ್ದಾನೆ. ನಮ್ಮನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಹಾಗಾಗಿ,ಪರಿಹಾರದ ಮೊತ್ತದಲ್ಲಿ ತಮಗೂ ಪಾಲು ನೀಡಬೇಕು’ ಎಂದು ಮನವಿ ಮಾಡಿದರು. 

ಈ ಹಿನ್ನೆಲೆಯಲ್ಲಿ ಮೇಯರ್‌ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ಜಗದೀಶ್‌ ತಂದೆ-ತಾಯಿಯ ಜವಾಬ್ದಾರಿ ವಹಿಸಿಕೊಳ್ಳಬೇಕು. ಹಾಗೂ ಪರಿಹಾರದ ಮೊತ್ತದಲ್ಲಿ ಪೋಷಕರಿಗೂ ಸ್ವಲ್ಪ ಹಣ ನೀಡುವಂತೆ ರೂಪಾಗೆ ತಿಳಿಸಿದರು. ಆದರೆ, ಇದಕ್ಕೆ ಒಪ್ಪದ ರೂಪಾ, ತಮಗೂ ಮಕ್ಕಳು ಇರುವುದರಿಂದ ಅವರನ್ನು ಸಾಕುವ ಹೊಣೆ ಇದೆ. ಹಾಗಾಗಿ, ಸಂಪೂರ್ಣ ಪರಿಹಾರ ಮೊತ್ತವನ್ನು ತನಗೇ ನೀಡಬೇಕು ಎಂದು ಮನವಿ ಮಾಡಿದರು. 

ಈ ಬಗ್ಗೆ  ಪ್ರತಿಕ್ರಿಯಿಸಿದ ಮೇಯರ್‌ ಜಿ. ಪದ್ಮಾವತಿ, ಮೃತ ಜಗದೀಶ್‌ಗೆ ವೃದ್ಧ ತಂದೆ-ತಾಯಿಗಳಿದ್ದಾರೆ. ಅವರಿಗೆ ಬೇರೆ ಯಾರೂ ಇಲ್ಲ. ಹಾಗಾಗಿ, ಅವರಿಗೂ ನೆರವು ನೀಡುವ ಉದ್ದೇಶದಿಂದ ಪರಿಹಾರದ ಮೊತ್ತ ಡ್ರಾ ಮಾಡಿಕೊಳ್ಳದಂತೆ ತಡೆಹಿಡಿಯಲಾಗಿದೆ. ಉಳಿದಂತೆ ಅಂದಿನ ಘಟನೆಯಲ್ಲಿ ಮೃತಪಟ್ಟ ಅರುಣ್‌, ಭಾರತಿ, ರಮೇಶ್‌ ಅವರಿಗೆ ನೀಡಿದ್ದ ಪರಿಹಾರದ ಮೊತ್ತ ಬಿಡುಗಡೆ ಮಾಡಲಾಗಿದೆ. ಜಗದೀಶ್‌ ತಂದೆ ಮತ್ತು ತಾಯಿಗೆ ತಲಾ 50 ಸಾವಿರ ರೂಪಾಯಿ ಹಾಗೂ ಜಗದೀಶ್‌ ಪತ್ನಿಗೆ 4 ಲಕ್ಷ ರೂಪಾಯಿ, ರೂಪಾಗೆ ಉದ್ಯೋಗದ ಭರವಸೆ ನೀಡಲಾಗಿದೆ ಎಂದರು. 

ಮೃತ ಜಗದೀಶ್‌ ತಂದೆ ತಾಯಿ ಪರಿಹಾರ ವಿಚಾರದಲ್ಲಿ ತಕರಾರು ಅರ್ಜಿ ಸಲ್ಲಿಸಿದ ಹಿನ್ನೆಯಲ್ಲಿ ಪರಿಹಾರವನ್ನು ತಡೆಹಿಡಿಯಲಾಗಿದೆ. ಪಾಲಿಕೆಯಲ್ಲಿ ಹಣದ ಲಭ್ಯತೆಯಿದ್ದು. ಯಾವುದೇ ಚೆಕ್‌ಗಳು ಬೌನ್ಸ್‌ ಆಗಿಲ್ಲ. 
-ಮಹದೇವ್‌ ಮುಖ್ಯ ಲೆಕ್ಕಾಧಿಕಾರಿ ಬಿಬಿಎಂಪಿ

ನನಗೆ ಇಬ್ಬರೂ ಮಕ್ಕಳಿದ್ದಾರೆ ಅವರ ಭವಿಷ್ಯ ನೋಡಬೇಕಾಗಿದೆ. ಬೇರೆ ಯಾವುದೇ ಆದಾಯವಿಲ್ಲ. ಜಗದೀಶ್‌ ಬದುಕಿದ್ದ ಸಂದರ್ಭದಲ್ಲಿ ಯಾರೂ ನಮ್ಮನ್ನು  ನೀಡಿಲ್ಲ. ಈಗ ಪರಿಹಾರಕ್ಕಾಗಿ ಬಂದಿದ್ದಾರೆ. 
-ರೂಪಾ (ಮೃತ ಜಗದೀಶ್‌ ಪತ್ನಿ)

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.