ಸೋದರ ಮಾವನಿಂದಲೇ ಬಾಲಕಿ ಅತ್ಯಾಚಾರ
Team Udayavani, Sep 25, 2017, 12:51 PM IST
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಸಂಬಂಧಿಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ (25) ಬಂಧಿತ ಆರೋಪಿ. ಸಂಬಂಧದಲ್ಲಿ ಸಂತ್ರಸ್ತೆಗೆ ಸೋದರ ಮಾವನಾಗಿರುವ ಗಿರೀಶ್, ಅಪ್ರಾಪೆ¤ಯ ಪೋಷಕರು ಮನೆಯಲ್ಲಿ ಇಲ್ಲದಿರುವಾಗ ಅತ್ಯಾಚಾರ ಎವೆಸಗಿದ್ದ. ಈ ಬಗ್ಗೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಪರಾರಿಯಾಗಿದ್ದ.
ಯಲಹಂಕ ಉಪನಗರದ ಆನಂದಪುರದಲ್ಲಿ ವಾಸವಿರುವ ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿರುವ ಆರೋಪಿ ಗಿರೀಶ್, ಸ್ಥಳೀಯ ವಸತಿ ಶಾಲೆಯೊಂದರ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಂಬಂಧಿಯಾದ್ದರಿಂದ ಆಗಾಗ ಸಂತ್ರಸ್ತೆಯ ಮನೆಗೆ ಬರುತ್ತಿದ್ದ ಆತ, ಪೋಷಕರ ಅನುಪಸ್ಥಿತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಆದರೆ, ಬಾಲಕಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿರಲಿಲ್ಲ. ಆಕೆಯ ಮುಗ್ಧತೆ ದುರುಪಯೋಗಪಡಿಸಿಕೊಂಡ ಆರೋಪಿ, ಸೆ.19ರಂದು ಬಾಲಕಿಯ ಪೋಷಕರು ಹೊರಗೆ ಹೋದ ಸಂದರ್ಭದಲ್ಲಿ ಮನೆಗೆ ಬಂದು ಅತ್ಯಾಚಾರವೆಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯ ತಾಯಿ ಮನೆಗೆ ವಾಪಸಾದ ಬಳಿಕ ಪುತ್ರಿಯ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದ್ದರು.
ಆಗ ಗಿರೀಶ್ ಎಸಗಿದ ಕೃತ್ಯವನ್ನು ಆಕೆ ತಿಳಿಸಿದ್ದು, ಪೋಷಕರು ಯಲಹಂಕ ಉಪನಗರ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪೊಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ಹೊರವಲಯದಲ್ಲಿ ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಗಿರೀಶ್ಗೆ ಈಗಾಗಲೇ ಮದುವೆ ನಿಶ್ಚಯವಾಗಿದ್ದು, ಇನ್ನೆರಡು ತಿಂಗಳ ಬಳಿಕ ಮದುವೆ ನಡೆಯಲಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್