ಮನಸೆಳೆದ ಗರುಡ ದಸರಾ ಉತ್ಸವ


Team Udayavani, Sep 25, 2017, 12:51 PM IST

garuda-mall.jpg

ಬೆಂಗಳೂರು: ಸಿಲಿಕಾನ್‌ ಸಿಟಿಯ ಮಾಲ್‌ಗ‌ಳಲ್ಲೂ ಈಗ ದಸರಾ ಸಂಭ್ರಮ. ಮದುವಣಗಿತ್ತಿಯಂತೆ ಸಿಂಗಾರಗೊಂಡ ಮಾಲ್‌ಗ‌ಳು, ಮೈಸೂರು ದಸರಾ ವೈಭವವನ್ನು ಕಟ್ಟಿಕೊಡುತ್ತಿವೆ. ವರ್ಷದ ಹಲವು ದಿನಗಳಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯಲ್ಲಿ ಮಿಂದೇಳುತ್ತಿದ್ದ ಮಾಲ್‌ಗ‌ಳು ಇದೀಗ ದೇಶಿಯ ಶೈಲಿಗೆ ಒಗ್ಗಿಕೊಳ್ಳುತ್ತಿರುವುದು ಮತ್ತೂಂದು ವಿಶೇಷ.

ಅದರಲ್ಲೂ ಅಶೋಕ ನಗರ ರಸ್ತೆಯಲ್ಲಿರುವ ಗರುಡ ಮಾಲ್‌ನಲ್ಲಂತೂ ನಗರ ಸಂಸ್ಕೃತಿಗೆ ಒಗ್ಗಿಕೊಂಡಿರುವ ಜನರಿಗೆ ಐತಿಹಾಸಿಕ ದಸರಾ ಉತ್ಸವವನ್ನು  ಕಟ್ಟಿಕೊಂಡುವ ಸ್ತಬ್ಧಚಿತ್ರವೊಂದು ಅನಾವರಣಗೊಂಡಿದ್ದು, ಕಣ್ಮನ ಸೆಳೆಯುತ್ತಿದೆ.  ಬಹು ದೂರದಿಂದಲೇ ಜನರನ್ನು ತನ್ನತ್ತ ಆಕರ್ಷಿಸುವ ಈ ಸ್ತಬ್ಧ ಚಿತ್ರಕ್ಕೆ ಮನಸೋತ ಮಂದಿ, ಸೆಲ್ಫಿ ಕ್ಲಿಕ್ಕಿಸಿಕೊಂಡು ಆನಂದಿಸುತ್ತಿದ್ದುದು ಕಂಡುಬಂತು. ಸೂರ್ಯ ಮುಳುಗುತ್ತಿದ್ದಂತೆ ವಿದ್ಯುತ್‌ ದೀಪಾಲಂಕಾರದ ಮೆರಗು ಮಾಲ್‌ಗೆ ಮತ್ತಷ್ಟು ಕಳೆ ನೀಡಿತ್ತು.

ಹೀಗಾಗಿ ನವೋಲ್ಲಾಸಗೊಂಡ ಜನರು ನಾಮುಂದು, ತಾಮುಂದು ಎಂದು ಸ್ತಬ್ಧ ಚಿತ್ರದ ಬಳಿ ಬಂದು ತಮ್ಮ ಮೊಬೈಲ್‌ನಲ್ಲಿ ಕೌಟಂಬದೊಂದಿಗೆ ಚಿತ್ರ ಸೆರೆಹಿಡಿದುಕೊಂಡರು. ಪುಟಾಣಿ ಮಕ್ಕಳು ಕೂಡ ಸ್ತಬ್ಧ ಚಿತ್ರದ ಮೇಲೆ ಕುಳಿತು ಆನಂದಿಸಿದರು. ಪ್ರತಿ ವರ್ಷ ಗರುಡ ಮಾಲ್‌ ಆಡಳಿತ ಮಂಡಳಿ ವಿಭಿನ್ನ ರೀತಿಯ ಆಲೋಚನೆಯೊಂದಿಗೆ ದಸರಾ ಹಬ್ಬಕ್ಕಾಗಿ ಸಿದ್ಧವಾಗುತ್ತದೆ. ಈ ವರ್ಷ ಕೂಡ ವಿಭಿನ್ನವಾದ ಚಿಂತನೆಯೊಂದಿಗೆ ದಸರಾ ವೈಭವದ ಕುರಿತ ಸ್ತಬ್ಧ ಚಿತ್ರವನ್ನು ಅಣಿಗೊಳಿಸಿದೆ.

ದಸರಾ ನೆನಪು: ಯಾಂತ್ರಿಕ ಬದುಕಿನಲ್ಲಿ ಕಳೆದು ಹೋಗುತ್ತಿರುವ ನಗರದ ಜನತೆ ಐತಿಹಾಸಿಕ ದಸರಾವನ್ನು ಮರೆಯುತ್ತಿದ್ದಾರೆ. ಹೀಗಾಗಿ ಮತ್ತೆ ದಸರಾ ಹಬ್ಬವನ್ನು ನೆನಪಿಸಬೇಕಾಗಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡೇ ಖ್ಯಾತ ಕಲಾ ವಿನ್ಯಾಸಕ ಅರುಣ್‌ ಸಾಗರ್‌ ಅವರ ನೇತೃತ್ವದಲ್ಲಿ ದಸರಾವನ್ನು ನೆನಪಿಸುವ ಸ್ತಬ್ಧಚಿತ್ರವನ್ನು  ಸಿದ್ಧಪಡಿಸಲಾಗಿದ್ದು, ಇದನ್ನು ನೋಡಿದ ಜನ ಮೈಸೂರು ದಸರಾವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಗರುಡ  ಮಾಲ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಚೇತನ ಹೇಳುತ್ತಾರೆ.

ದಸರಾ ಉತ್ಸವ ಮುಗಿಯುವವರೆಗೂ ಈ ಸ್ತಬ್ಧಚಿತ್ರ ಇರಲಿದೆ. ಗಡಿಬಿಡಿಯ ಬದುಕಿನಲ್ಲಿ ಜೀವನ ಕಳೆಯುತ್ತಿರುವ ನಗರ ಜನತೆ ನಮ್ಮ ಹಳೆಯ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ದಸರಾ ಗೊಂಬೆ ಕೂರಿಸುವ ಪ್ರವೃತ್ತಿಯಿಂದ ಹಿಂದೆ ಸರಿಯುತ್ತಿದ್ದಾರೆ. ಹೀಗಾಗಿ ದಸರಾ ವೇಳೆ ಗೊಂಬೆ ಕೂರಿಸುವವರ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಹೀಗಾಗಿ ಗತಕಾಲದ ವೈಭವವನ್ನು ನೆನಪಿಸುವ ನಿಟ್ಟಿನಲ್ಲಿ ಗರುಡ ಮಾಲ್‌ ಆಡಳಿತ ಮಂಡಳಿ ಹೆಜ್ಜೆ ಇರಿಸಿದೆ.

ತಾಜಾ ಆಹಾರ ಮೇಳ: ಹಾಗೇ ಗರುಡ ಮಾಲ್‌ ಬಳಿ ತಾಜಾ ಆಹಾರ ಮೇಳ ಆಯೋಜಿಸಿದ್ದು, ಇದು ಕೂಡ ಜನಾಕರ್ಷಣೆಯ ಕೇಂದ್ರವಾಗಿದೆ. ತಮ್ಮ ಮನೆಯೊಳಗೆ ಕೈ ತೋಟವನ್ನು ಮಾಡಿ ತರಕಾರಿ ಬೆಳುವ ಚಿತ್ರಣವೂ ಇಲ್ಲಿದೆ. ಟೊಮ್ಯಾಟೋ, ಮೂಲಂಗಿ, ಬದನೆಕಾಯಿ, ಮೆಣಸಿನಕಾಯಿ, ಕೋಸು ಸೇರಿದಂತೆ ಇನ್ನಿತರ ಕೈ ತೋಟದ ಕಾಯಿಪಲ್ಯಗಳ ಸಂಪೂರ್ಣ ಚಿತ್ರಣ ಇಲ್ಲಿ ದೊರೆಯಲಿದ್ದು, ಕೊಳ್ಳುವಿಕೆಗೂ ಅವಕಾಶ ಇದೆ.

ತಾಜಾ ತರಕಾರಿಗಳನ್ನೇ ಸೇವಿಸಿ ಎಂಬ ಸಂದೇಶದೊಂದಿಗೆ ಈ ಮೇಳ ಆರಂಭಗೊಂಡಿದ್ದು, ಬಿಸಿಲಿಗೆ ಹದವಾಗಿ ಒಣಗಿಸಿ ತಯಾರಿಸಿರುವ ಪಾಲಕ್‌, ಚಿಕೋ, ಪೈನಾಪಲ್‌, ಬಿಟ್ರೂಟ್‌ ಚಿಪ್ಸ್‌ ಮತ್ತು ಬೆಟ್ಟದ ನಲ್ಲಿಕಾಯಿ ಕ್ಯಾಂಡಿ ಮೇಳದ ಪ್ರಧಾನ ಆಕರ್ಷಣೆಯಾಗಿದೆ. ಪರಿಶುದ್ಧ  ತೆಂಗಿನ ಎಣ್ಣೆ, ಸೇರಿದಂತೆ ಇನ್ನಿತರ‌  ತೈಲಗಳು ಇಲ್ಲಿ ದೊರಕಲಿವೆ. ಶುಕ್ರವಾರದಿಂದಲೇ ಈ ಆಹಾರ ಮೇಳದಲ್ಲಿ ಒಂದೇ ಸೂರಿನಡಿ ವಿಭಿನ್ನ ಶೈಲಿಯ ಆಹಾರಗಳು ದೊರೆಯಲಿವೆ.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.