ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ
Team Udayavani, Oct 21, 2017, 11:41 AM IST
ನೆಲಮಂಗಲ: ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ ಮಾರಾಟ ನಿಷೇಧಿಸಿ ಕಾನೂನು ತಿದ್ದುಪಡಿಗೊಳಿಸಿರುವ ಸರ್ಕಾರದ ಕ್ರಮ ಖಂಡಿಸಿ ತಾಲೂಕು ಚಿಲ್ಲರೆ ಅಂಗಡಿ ಮತ್ತು ಸಣ್ಣಪುಟ್ಟ ವ್ಯಾಪಾರಿಗಳ ಸಂಘದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಇಂದಿರಾನಗರದಲ್ಲಿರುವ ಸಂಘದ ಕಚೇರಿಯಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘದ ಸದಸ್ಯರು ತಾಲೂಕು ಕಚೇರಿವರೆಗೂ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಈ ಕಾಯ್ದೆ ಸಡಿಲಗೊಳಿಸಿ: ಮೊದಲಿನಂತೆ ಚಿಲ್ಲರೆ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು. ಇತ್ತೀಚಿಗೆ ಸರ್ಕಾರ ಸಣ್ಣಪುಟ್ಟ ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನವಾದ ಸಿಗರೇಟ್ ಅನ್ನು ಬಿಡಿಬಿಡಿಯಾಗಿ ಚಿಲ್ಲರೆ ಹಣಕ್ಕೆ ಮಾರಾಟ ಮಾಡ ಬಾರದು ಎಂದು ಆದೇಶ ಮಾಡಿದೆ. ಇದರಿಂದ ಸಾವಿರಾರು ಸಂಖ್ಯೆಯ ಲ್ಲಿರುವ ಸಣ್ಣಪುಣ್ಣ ಚಿಲ್ಲರೆ ಅಂಗಡಿಗಳು ತಂಬಾಕು ಉತ್ಪನ್ನಗಳ ಬೀಡಿ ಮಾರಾಟ ಗಾರರು ಬೀದಿಪಾಲಾಗುತ್ತಾರೆ.
ಸರ್ಕಾರ ಇತ್ತೀಚಿಗೆ ಚಿಲ್ಲರೆ ಅಂಗಡಿ ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಹಾಗೂ ಬಿಡಿ ಬಿಡಿಯಾಗಿ ಚಿಲ್ಲರೆ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ಸಾಕಷ್ಟು ಸಮಸ್ಯೆಯಾಗಿದೆ. ತಕ್ಷಣ ಈ ಕಾಯ್ದೆ ಸಡಿಲಗೊಳಿಸಿ ಚಿಲ್ಲರೆ ವ್ಯಾಪಾರಿಗಳ ಮೇಲೆ ಸರ್ಕಾರಗಳು ದಿನಕ್ಕೊಂದು ಕಾನೂನು ತಂದು ಪರೋಕ್ಷವಾಗಿ ದೊಡ್ಡ ದೊಡ್ಡ ವ್ಯಾಪಾರಿಗಳ ಬೆಂಬಲಕ್ಕೆ ನಿಂತಿದೆ.
ತಕ್ಷಣ ಕಾನೂನು ಸಡಿಲಗೊಳಿಸಿ ಕ್ರಮಕೈಗೊ ಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಮುಂದಾ ಗಬೇಕಾಗಿತ್ತದೆ ಎಂದು ಸಣ್ಣಪುಟ್ಟ ವ್ಯಾಪಾ ರಿಗಳ ಸಂಘದ ಅಧ್ಯಕ್ಷ ಸಂಜೀವಯ್ಯ ಎಚ್ಚರಿಸಿದರು.
ಆರೋಪ: ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಯುವಕರಿಗೆ ಮಾರಾಟ ಮಾಡಬಾರದು ಹಾಗೂ ಅಂಗಡಿಗಳ ಮುಂಭಾಗದಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವಂತಹ ಜಾಹೀರಾತು ಹಾಕದೆ ನಿಯಮ ಹಾಗೂ ಕಾಲಕಾಲಕ್ಕೆ ಇಲಾಖೆ ವತಿಯಿಂದ ಬದಲಾಯಿಸುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆದರೂ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಸಮಸ್ಯೆ ಎದುರಿಸ ಲಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ