ದೀಪಾವಳಿ ಎಫೆಕ್ಟ್: ರಾಜಧಾನಿ ಖಾಲಿ


Team Udayavani, Oct 21, 2017, 11:43 AM IST

deepavali-MG-road-bangalore.jpg

ಬೆಂಗಳೂರು: ಸದಾ ಜನಸಂದಣಿಯಿಂದ ಕೂಡಿರುತ್ತಿದ್ದ ರಸ್ತೆಗಳು, ಸಂಚಾರ ದಟ್ಟಣೆಯಿಲ್ಲದೆ ಬೆಳಗದ ಸಿಗ್ನಲ್‌ ದೀಪಗಳು, ಪ್ರಯಾಣಿಕರಿಲ್ಲದೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌- ಮೆಟ್ರೋ, ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಮಾಲ್‌ಗ‌ಳು… ಇದು ಶುಕ್ರವಾರ ನಗರದ ಹಲವೆಡೆ ಕಂಡುಬಂದ ದೃಶ್ಯ. ಬಲಿಪಾಡ್ಯಮಿ ಹಬ್ಬದ ಹಿನ್ನೆಲೆ ಶುಕ್ರವಾರ ಸರ್ಕಾರಿ ರಜೆ ಜತೆಗೆ ವಾರಾಂತ್ಯದ ರಜೆಯೂ ಸೇರಿದ್ದರಿಂದ ಶುಕ್ರವಾರ ಪ್ರಮುಖ ಜನಸಂದಣಿ ಪ್ರದೇಶಗಳು, ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು.

ಕೆ.ಜಿ.ರಸ್ತೆ, ಶೇಷಾದ್ರಿ ರಸ್ತೆ, ನೃಪತುಂಗ ರಸ್ತೆ, ಲಾಲ್‌ಬಾಗ್‌ ರಸ್ತೆ, ಎಂ.ಜಿ.ರಸ್ತೆ, ಸ್ಯಾಂಕಿ ರಸ್ತೆ, ಸಂಪಿಗೆ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಎಂದಿಗಿಂತ ಬಹಳ ಕಡಿಮೆ ಇತ್ತು. ಕೆಲವೆಡೆ ಸಿಗ್ನಲ್‌ ದೀಪಗಳು ಸ್ಥಗಿತಗೊಂಡಿದ್ದು, ವಾಹನ ಸಂಚಾರ ತಗ್ಗಿರುವುದನ್ನು ತೋರುವಂತಿತ್ತು. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿರುವ ಕಾರಣ ಬಿಎಂಟಿಸಿ ಸಂಸ್ಥೆಯು ಬಸ್‌ಗಳ ಸಂಚಾರ, ಟ್ರಿಪ್‌ ಸಂಖ್ಯೆಯನ್ನು ಕಡಿತಗೊಳಿಸಿತ್ತು. ಆದರೆ ಸೇವೆಗೆ ನಿಯೋಜನೆಗೊಂಡಿದ್ದ ಬಹಳಷ್ಟು ಬಸ್‌ಗಳಲ್ಲೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಮಧ್ಯಾಹ್ನದ ಹೊತ್ತಿನಲ್ಲಿ ಕೆಲ ಬಸ್‌ಗಳು ಖಾಲಿಯಿದ್ದುದು ಕಂಡುಬಂತು.

ನಮ್ಮ ಮೆಟ್ರೋದಲ್ಲೂ ಶುಕ್ರವಾರ ಎಂದಿನ ಪ್ರಯಾಣಿಕರ ಸಂದಣಿ ಕಂಡುಬರಲಿಲ್ಲ. ರಜೆಯಿದ್ದ ಕಾರಣ ಕುಟುಂಬ ಸಮೇತರಾಗಿ ಸಾಕಷ್ಟು ಮಂದಿ ಮೆಟ್ರೋ ಪ್ರಯಾಣ ಅನುಭವ ಪಡೆದು ಸಂತಸದಲ್ಲಿದ್ದ ದೃಶ್ಯ ಸಾಮಾನ್ಯವಾಗಿತ್ತು. ನಗರದಿಂದ ಇತರೆ ಪ್ರದೇಶಗಳಿಗೆ ತೆರಳುವವರು ಹಾಗೂ ಇತರೆ ಪ್ರದೇಶಗಳಿಂದ ನಗರಕ್ಕೆ ಬರುವವರ ಸಂಖ್ಯೆಯೂ ಕಡಿಮೆಯಿದ್ದ ಕಾರಣ ಹೆದ್ದಾರಿ ಗಳಲ್ಲಿನ ಟೋಲ್‌ಗೇಟ್‌ಗಳಲ್ಲೂ ವಾಹನ ದಟ್ಟಣೆ ತಗ್ಗಿತ್ತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಬಳಿಯ ಟೋಲ್‌ಗೇಟ್‌, ಪೀಣ್ಯ ಹಾಗೂ ನೆಲಮಂಗಲ ಬಳಿಯ ಟೋಲ್‌ಗೇಟ್‌ಗಳಲ್ಲಿ ವಾಹನ ಸಂಚಾರ ಕಡಿಮೆಯಿತ್ತು. “ನೈಸ್‌’ ರಸ್ತೆಯ ಟೋಲ್‌ಗೇಟ್‌ಗಳಲ್ಲೂ ಎಂದಿನ ವಾಹನ ದಟ್ಟಣೆ ಕಾಣಲಿಲ್ಲ. ಹಬ್ಬದ ಹಿನ್ನೆಲೆ ಮಾಲ್‌ಗ‌ಳಲ್ಲೂ ಗ್ರಾಹಕರ ಸಂಖ್ಯೆ ಕಡಿಮೆಯಿತ್ತು. ಮಲ್ಟಿಫ್ಲೆಕ್ಸ್‌ಗಳಿರುವ ಮಾಲ್‌ಗ‌ಳಲ್ಲಿ ಸಿನಿಪ್ರಿಯರಿಂದಾಗಿ ಕಳೆಗಟ್ಟಿದ್ದು ಹೊರತು ಪಡಿಸಿದರೆ ಮಾಲ್‌ಗ‌ಳಲ್ಲಿ ಉಡುಪು ಸೇರಿದಂತೆ ಇತರೆ ವಸ್ತುಗಳ ಖರೀದಿ ಭರಾಟೆ ಕಂಡುಬರಲಿಲ್ಲ.

ಸಂಜೆ ವೇಳೆ ಪಟಾಕಿ ಸಿಡಿಸುವುದು ಹೆಚ್ಚಾಗಿರುವುದರಿಂದ ಮಾಲಿನ್ಯ ಕಾರಣಕ್ಕೂ ಬಹಳಷ್ಟು ಜನ ಮನೆಗಳಿಂದ ಹೊರಬಂದಿರಲಿಲ್ಲ. ಸಂಜೆ ಹೊತ್ತಿಗೆ ಹಲವು ಪ್ರದೇಶಗಳಲ್ಲಿ ಮಕ್ಕಳು, ವಯಸ್ಕರು ಪಟಾಕಿ ಸಿಡಿಸಲು ಮುಂದಾಗಿದ್ದರಿಂದ ಜನ, ವಾಹನ ಸಂಚಾರ ಇನ್ನಷ್ಟು  ವಿರಳವಾಗಿತ್ತು. ಶುಕ್ರವಾರ ದೀಪಾವಳಿ ಹಬ್ಬದ ಕೊನೆಯ ದಿನವಾಗಿದ್ದರಿಂದ ಪಟಾಕಿ ಸಿಡಿಸುವುದು ಜೋರಾಗಿತ್ತು. ಶುಕ್ರವಾರ ಮಧ್ಯರಾತ್ರಿವರೆಗೆ ಪಟಾಕಿಗಳನ್ನು ಸಿಡಿಸಿ, ಬಾಣ ಬಿರುಸುಗಳನ್ನು ಹಾರಿಸುವ ಮೂಲಕ ಬೆಳಕಿನ ಹಬ್ಬದ ಆಚರಣೆಗೆ ತೆರೆಬಿತ್ತು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.