ಮದ್ಯದ ಅಮಲಲ್ಲಿ ಆ್ಯಂಬುಲೆನ್ಸ್ ಚಾಲನೆ
Team Udayavani, Oct 23, 2017, 12:07 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ರೋಗಿ ಇಲ್ಲದಿದ್ದರೂ ಆ್ಯಂಬುಲೆನ್ಸ್ ಸೈರನ್ ಹಾಕಿಕೊಂಡು ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್ ಮತ್ತು ಚಾಲಕನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರ ನಿವಾಸಿ ಪೂಜಪ್ಪ ಬಂಧಿತ ಆರೋಪಿ.
ಆರೋಪಿ ಚಾಲಕ ಭಾನುವಾರ ರಾತ್ರಿ 11.30ರ ಸುಮಾರಿಗೆ ಸೈರನ್ ಮೊಳಗಿಸಿಕೊಂಡು ಹಲಸೂರು ಗೇಟ್ ಕಡೆಯಿಂದ ಕೆ.ಆರ್.ವೃತ್ತದ ಕಡೆಗೆ ಹೋಗುತ್ತಿದ್ದ. ಈ ವೇಳೆ ನೃಪತುಂಗ ರಸ್ತೆಯಲ್ಲಿ ಕರ್ತವ್ಯ ನಿರತ ಹಲಸೂರು ಗೇಟ್ ಸಂಚಾರ ಠಾಣೆ ಇನ್ಸ್ಪೆಕ್ಟರ್ ಮೊಹಮ್ಮದ್ ಅನುಮಾನಗೊಂಡು ಸೈರಾನ್ ಹಾಕಿದ್ದ ಆ್ಯಂಬುಲೆನ್ಸ್ ತಡೆದು ತಪಾಸಣೆ ನಡೆಸಿದರು.
ಈ ವೇಳೆ ಆ್ಯಂಬುಲೆನ್ಸ್ನಲ್ಲಿ ಯಾವುದೇ ರೋಗಿ ಇಲ್ಲದಿರುವುದು ಬೆಳಕಿಗೆ ಬಂದಿದೆ. ಚಾಲಕ ಪೂಜಪ್ಪ ಒಬ್ಬನೇ ಹೋಗುತ್ತಿದ್ದ. ಪೊಲೀಸರು ಪ್ರಶ್ನಿಸಿದಾಗ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಲುವಾಗಿ ಹೋಗುತ್ತಿರುವುದಾಗಿ ಹೇಳಿದ. ಈ ವೇಳೆ ಆಲ್ಕೋಮೀಟರ್ ಮೂಲಕ ಚಾಲಕನನ್ನು ತಪಾಸಣೆ ನಡೆಸಿದಾಗ ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ