ರಸ್ತೆ ಅಗಲೀಕರಣಕ್ಕೆ ಮಸೀದಿ ಗೋಡೆ ತೆರವು
Team Udayavani, Oct 23, 2017, 12:07 PM IST
ಬೆಂಗಳೂರು: ಹೊಸೂರು ರಸ್ತೆ ಅಗಲೀಕರಣಕ್ಕಾಗಿ ಶಿಯಾ ಮಸೀದಿಗೆ ಸೇರಿದ ಜಾಗ ನೀಡಲು ಮಜೀದ್ ಇ ಅಸ್ಕರಿ ಮತ್ತು ಖಬರಸ್ಥಾನ್ ಮ್ಯಾನೇಜಿಂಗ್ ಕಮಿಟಿ ಒಪ್ಪಿರುವ ಹಿನ್ನೆಲೆಯಲ್ಲಿ ಭಾನುವಾರ ಮಸೀದಿ ಕಾಂಪೌಂಡ್ ಗೋಡೆ ತೆರವುಗೊಳಿಸಲಾಯಿತು.
ಮಸೀದಿ ಕಾಂಪೌಂಡ್ನಿಂದಾಗಿ ಹೊಸೂರು ರಸ್ತೆಯಿಂದ ಬ್ರಿಗೇಡ್ ರಸ್ತೆಯ ಕಡೆಗೆ ಬರುವ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಹೀಗಾಗಿ ಜಾಗ ಬಿಟ್ಟುಕೊಡುವಂತೆ ಬಿಬಿಎಂಪಿ ಈ ಹಿಂದೆ ಸಮಿತಿಯನ್ನು ಕೋರಿತ್ತು. ಇದಕ್ಕೆ ಒಪ್ಪಿರುವ ಸಮಿತಿ ಕಾಂಪೌಂಡ್ ಒಳಗೆ ಮತ್ತೂಂದು ಕಾಂಪೌಂಡ್ ನಿರ್ಮಿಸಿ ಹಳೆಯ ಕಾಂಪೌಂಡ್ನ್ನು ಭಾನುವಾರ ಜೆಸಿಬಿ ಮೂಲಕ ತೆರವುಗೊಳಿಸಿತು.
ಗೋಡೆ ತೆರವುಗೊಳಿಸುವ ವೇಳೆ ಸ್ಥಳೀಯ ಶಾಸಕ ಎನ್.ಎ.ಹ್ಯಾರೀಶ್, ಮೇಯರ್ ಸಂಪತ್ರಾಜ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ಶೀಘ್ರ ಟಿಡಿಆರ್ ನೀಡುವುದಾಗಿ ಭರವಸೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹ್ಯಾರೀಸ್, ಮಸೀದಿಯ ಗೋಡೆಯಿಂದ ವಾಹನ ದಟ್ಟಣೆಯಾಗುತ್ತಿದ್ದರಿಂದ ರಸ್ತೆ ಅಗಲೀಕರಣಕ್ಕೆ ಜಾಗ ಬಿಟ್ಟುಕೊಡುವಂತೆ ಕೋರಲಾಗಿತ್ತು. ಮಸೀದಿ ಸಮಿತಿ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲಿಸಿದ್ದಾರೆ. ಸರ್ಕಾರ ಅಥವಾ ಪಾಲಿಕೆಯಿಂದ ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಕೋರಿದರು.
ಮೇಯರ್ ಸಂಪತ್ರಾಜ್, ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಈ ಜಾಗವನ್ನು ವಕ್ಫ್ ಮಂಡಳಿಗೆ ನೀಡಿದ್ದಾರೆ. 1936ರಲ್ಲಿ ಮಸೀದಿ ನಿರ್ಮಿಸಲಾಗಿದ್ದು, ಮಸೀದಿ ಕಾಂಪೌಂಡ್ ಗೋಡೆ ರಸ್ತೆಗೆ ಅಡ್ಡಲಾಗಿರುವುದರಿಂದ ದಟ್ಟಣೆಯಾಗುತ್ತಿತ್ತು. ಹೀಗಾಗಿ ಸಮಿತಿ ಅನುಮತಿ ನೀಡಿದೆ. ಶೀಘ್ರದಲ್ಲಿ ಟಿಡಿಆರ್ ನೀಡಿ ರಸ್ತೆ ನಿರ್ಮಿಸಲಾಗುವುದು ಎಂದು ತಿಳಿಸಿದರು.
ನಗರದ ಬೇರೊಂದು ಕಡೆ ಜಾಗ ನೀಡುವಂತೆ ಹಾಗೂ ಜಾನ್ಸನ್ ಮಾರುಕಟ್ಟೆ ಬಳಿಯ ಜಂಕ್ಷನ್ಗೆ ಸರ್ ಮಿರ್ಜಾ ಇಸ್ಮಾಯಿಲ್ ಹೆಸರಿಡಲು ಮನವಿ ನೀಡುವುದಾಗಿ ಸಮಿತಿ ಅಧ್ಯಕ್ಷರು ತಿಳಿಸಿದ್ದು, ಮನವಿ ನೀಡಿದ ನಂತರ ಕೌನ್ಸಿಲ್ನಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
“ಮೆಟ್ರೋ ನಿಲ್ದಾಣಕ್ಕೆ ಮಿರ್ಜಾ ಇಸ್ಮಾಯಿಲ್ ಹೆಸರಿಡಿ’
ಸಾರ್ವಜನಿಕರಿಗೆ ಮಸೀದಿಯಿಂದ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾಂಪೌಂಡ್ ತೆರವುಗೊಳಿಸಲಾಗುತ್ತಿದೆ. ಮಸೀದಿ ನಿರ್ಮಾಣಕ್ಕೆ ಬೇರೊಂದು ಕಡೆಯಲ್ಲಿ ಜಾಗ ನೀಡುವಂತೆ ಕೋರಲಾಗುವುದು. ಜತೆಗೆ ಜಾನ್ಸನ್ ಮಾರುಕಟ್ಟೆ ಬಳಿಯ ಜಂಕ್ಷನ್ ಹಾಗೂ ಈ ಭಾಗದಲ್ಲಿ ನಿರ್ಮಾಣವಾಗುವ ನಮ್ಮ ಮೆಟ್ರೋ ನಿಲ್ದಾಣಕ್ಕೆ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಹೆಸರಿಡುವಂತೆ ಮನವಿ ಮಾಡಲಾಗುವುದು ಎಂದು ಮಜೀದ್ ಇ ಅಸ್ಕರಿ ಸಮಿತಿ ಅಧ್ಯಕ್ಷ ಮೀರ್ ಅಲಿ ಜವಾದ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ