ಯುವಕರೇ, ನಿಮ್ಮೂರಲ್ಲೇ ಉದ್ಯಮ ತೆರೆಯಿರಿ, ವಲಸೆ ಬೇಡ


Team Udayavani, Jan 14, 2017, 2:39 PM IST

Town-Hall-Chandrashekara-Shetty.jpg

ದೊಡ್ಡಬಳ್ಳಾಪುರ: ಗ್ರಾಮೀಣ ಯುವಕರು ನವೀನ ಉದ್ಯಮಗಳನ್ನು ಸ್ವಂತ ಊರುಗಳಲ್ಲಿ ಸಂಘಟನೆಗಳ ಮೂಲಕ ಪ್ರಾರಂಭಿಸಿ, ಪಟ್ಟಣಗಳ ಕಡೆ ವಲಸೆ ಹೋಗದೆ ಸ್ವಾವಲಂಬನೆ ಸಾಧಿಸುವತ್ತ ಹೊಸ ಹೆಜ್ಜೆ ಇಡಬೇಕೆಂದು ಕೃಷಿ  ವಿಶ್ವ ವಿದ್ಯಾನಿಲಯದ ಮಾಜಿ ಕುಲಪತಿ ಕೆ.ನಾರಾಯಣಗೌಡ ಸಲಹೆ ನೀಡಿದರು. 

ತಾಲೂಕಿನ  ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಸ್ವಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಕುರಿತ  ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವಕರು ಸರ್ಕಾರಿ ಕೆಲಸಗಳಿಗೆ ಕಾಯುತ್ತಾ ಸಮಯ ಕಳೆಯದೆ ಸ್ವಉದ್ಯೋಗ ಕಂಡುಕೊಳ್ಳುವಲ್ಲಿ ಪ್ರಯತ್ನಿಸಬೇಕು.

ಕೇಂದ್ರ ಸರ್ಕಾರದ ಈ ಯೋಜನೆಯು ಒಂದು ಒಳ್ಳೆಯ ಕಾರ್ಯಕ್ರಮವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು  ಕರೆ ನೀಡಿದರು. ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ. ಸಾಯಿರಾಮ್‌ ಮಾತನಾಡಿ, ಗ್ರಾಮೀಣ ಯುವಕರು ಹೊಸ ತಂತ್ರಜ್ಞಾನ  ಅಳವಡಿಸಿಕೊಂಡು ಯೋಜನೆಯ ಉಪಯೋಗ ಪಡೆದು ಸ್ವಂತ ಉದ್ಯೋಗದಿಂದ ತಮ್ಮ ಆದಾಯದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 

ಕಾರ್ಯಾಗಾರವನ್ನು ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿಯಲ್ಲಿ ನಡೆಯುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಅನ್ನಪೂರ್ಣೇಶ್ವರಿ  ರಾಗಿ ಬೆಳೆಗಾರರ ಸಂಸ್ಕರಣಾ ಸಂಘ, ಪೆರಮಗೊಂಡನಹಳ್ಳಿ ಯುವ ರೈತರ ಸಂಘದ ಅಧ್ಯಕ್ಷರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಲಾಯಿತು.

ಕೃಷಿ ವಿಶ್ವ ವಿದ್ಯಾನಿಲಯ  ವಿಸ್ತರಣಾ ನಿರ್ದೇಶಕ ಡಾ. ಕೆ.ಜಗದೀಶ್ವರ, ಯೋಜನೆಯ ಉದ್ದೇಶಗಳು ಹಾಗೂ ಇದರ ಅನುಷ್ಠಾನ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ  ಮುಖ್ಯಸ್ಥ ಡಾ. ಕೆ.ಎನ್‌. ಶ್ರೀನಿವಾಸಪ್ಪ ಮತ್ತು ಪ್ರಾಧ್ಯಾಪಕರು, ಡಾ. ಜಿ.ಎಸ್‌ .ನಾಗರಾಜು, ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರು  ,ಕಾಚಹಳ್ಳಿ, ಲಕ್ಷ್ಮೀದೇವಿಪುರ, ಗಂಗಸಂದ್ರ, ಬಚ್ಚಹಳ್ಳಿ ಮತ್ತು ಪೆರಮಗೊಂಡನಹಳ್ಳಿಗಳ ಯುವ ರೈತರು ಹಾಗೂ ರೈತ ಮಹಿಳೆಯರು ಹಾಜರಿದ್ದರು. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.