ರೈತನ ಸಾವಿಗೆ ಕಾರಣವಾದ ಐರಾವತ ಕೊನೆಗೂ ಸೆರೆ


Team Udayavani, Feb 18, 2017, 12:04 PM IST

17-Nela-ph-4-copy.jpg

ನೆಲಮಂಗಲ: ಸೋಂಪುರ ಹೋಬಳಿಯ ಕಮಾಲಾಪುರ ಗ್ರಾಮದ ರಾಮಯ್ಯ ಎಂಬ ರೈತನನ್ನು ಬಲಿ ಪಡೆದಿದ್ದ ಸಲಗವನ್ನು  ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಬನ್ನೇರುಘಟ್ಟ ಅರಣ್ಯಕ್ಕೆ ಸಾಗಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕಾಟ ನೀಡುತ್ತಿದ್ದ ಒಟ್ಟು ನಾಲ್ಕು ಆನೆಗಳನ್ನು ಸೆರೆ ಹಿಡಿದಂತಾಗಿದೆ. 

ಬಂಧನಕ್ಕೊಳಗಾಗಿರುವ ಐರಾವತ ಸೋಂಪುರ ಹೋಬಳಿಯಲ್ಲಿ ಇಬ್ಬರನ್ನು ಮತ್ತು ಗುಬ್ಬಿ ತಾಲೂಕಿನಲ್ಲಿ ಒಬ್ಬರನ್ನು ಸಾಯಿಸಿತ್ತು. ಮೂರು ಮಂದಿ ರೈತರನ್ನು ಬಲಿ ಪಡೆದ ಐರಾವತ ಈಗ ಬಂಧನದಲ್ಲಿದ್ದು ಮಾವುತರಿಂದ ತರಬೇತಿಗೆ ಸಿದ್ಧವಾಗುತ್ತಿದೆ.

ಕಳೆದ ಏಳೆಂಟು ತಿಂಗಳಿಂದಲೂ ಆರು ಕಾಡಾನೆ­ಗಳ ಕಾಟದಿಂದ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿ ಮತ್ತು ತುಮಕೂರು ಹಾಗೂ ಮಾಗಡಿ ತಾಲೂಕಿನಲ್ಲಿ ಭಾರಿ ಅನಾಹುತ ಮತ್ತು ಪ್ರಾಣಹಾನಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಸೆರೆ ಹಿಡಿಯಲು ಐದು ಸಾಕಾನೆಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಸೋಂಪುರ ಹೋಬಳಿಯ ಹೊಸಹಳ್ಳಿ ಕೆರೆಯ ಬಳಿ ಕಾರ್ಯಾಚರಣೆ ನಡೆಸುವ ಮೂಲಕ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯ­ಲಾಗಿದೆ.

ಈಗ  ಬಂಧಿಸಿರುವ ಸಲಗವನ್ನು ಬನ್ನೇ­ರು­ಘಟ್ಟದ ಅರಣ್ಯಕ್ಕೆ ಸಾಗಿಸಿ ಪಳಗಿಸಲಾಗುವುದು. ನಂತರ ಇದೇ ಆನೆಯಿಂದ ಕಾಡಾನೆಗಳ ಸೆರೆಹಿಡಿಲು ಕಾರ್ಯಾಚರಣೆಗೆ ಬಳಸಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಶಿವಣ್ಣ ಉದಯವಾಣಿಗೆ ತಿಳಿಸಿದ್ದಾರೆ. ಅಭಿಮನ್ಯು, ಗಜೇಂದ್ರ, ಭೀಮ, ಹರ್ಷ ಮತ್ತು ದ್ರೋಣ ಎಂಬ ಸಾಕಾನೆಗಳು ಐರಾವತನನ್ನು ಓಡಿಸಿಕೊಂಡು ಬರುತ್ತಿದ್ದಂತೆ ಅರವಳಿಕೆ ತಜ್ಞ ಉಮಾಶಂಕರ್‌ ಅವರು ಅರವಳಿಕೆ ಚುಚ್ಚುಮದ್ದು ನೀಡಿದರು.

ಬಳಿಕ ಅರ್ಧ ಕಿ.ಮೀ. ದೂರದಲ್ಲಿ ಐರಾವತ ನೆಲಕ್ಕೆ ಬಿದ್ದಿತ್ತು. ನಾಗರಹೊಳೆ ಅಭಯಾರಣ್ಯದಿಂದ ಕಾವಾಡಿಗ ಕರೀಂಸಾಬ್‌ ನೇತೃತ್ವದ ತಂಡದೊಂದಿದೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾರ್ಯಾಚರಣೆಯನ್ನು ಶಿವಣ್ಣ ವಿವರಿಸಿದರು. ಸೋಂಪುರ ಹೋಬಳಿಯಲ್ಲಿ ಸುಮಾರು ಹತ್ತು ವರ್ಷಗಳಿಂದ ಕಾಡಾನೆಗಳು ಕಾಮಾಲಾಪುರ, ಶ್ರೀಪತಿಹಳ್ಳಿ, ದೇವಗಾನಹಳ್ಳಿ, ಬರಗೇನಹಳ್ಳಿ, ಗೌರಾಪುರ, ಕಂಬಾಳು ಗ್ರಾಮಗಳಲ್ಲಿ ಬೆಳೆ ನಾಶ ಮಾಡಿ ರೈತರಿಗೆ ನಷ್ಟ ಉಂಟುಮಾಡಿದ್ದವು.

ಈಗ ಒಂದು ಆನೆಯನ್ನು ಹಿಡಿದಿದ್ದರಿಂದ ರೈತರು ಸ್ವಲ್ಪ ಸಮಾಧಾನ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಡಿ.ಎಫ್.ಮಹೇಶ್‌­­ಕುಮಾರ್‌, ತುಮಕೂರು ಅರಣ್ಯಾ­ಧಿಕಾರಿ ದೇವರಾ­ಜಯ್ಯ, ನೆಲಮಂಗಲ ಅರಣ್ಯಾಧಿಕಾರಿ ಸಿದ್ದರಾಜು, ಹರೀಶ್‌, ಶಿವಣ್ಣ, ಸೇರಿ ಸುಮಾರು 60ಕ್ಕೂ  ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ಡಾಬಸ್‌ ಪೇಟೆ ಪಿಎಸ್‌ಐ ನವೀನ್‌ಕುಮಾರ್‌ ಕಾರ್ಯಾಚರಣೆಯಲ್ಲಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.