ರೈತರ ಸಾಲ ಮನ್ನಾಕ್ಕೆ ಆಗ್ರಹ: ಪ್ರತಿಭಟನೆ


Team Udayavani, Feb 18, 2017, 3:54 PM IST

Murder-2.jpg

ದೊಡ್ಡಬಳ್ಳಾಪುರ: ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಹಾಗೂ ಬರಗಾಲ ಪರಿಹಾರಗಳಿಗಾಗಿ ಕೃಷಿ ಯ ಕಂಪನೀಕರಣವನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿ ಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್‌.ಚಂದ್ರತೇಜಸ್ವಿ, ರೈತರ ಸಾಲ ಮನ್ನಾ ಬಗ್ಗೆ ಕೇಂದ್ರ ಬಜೆಟ್‌ನಲ್ಲಿ ಯಾವುದೇ ಯೋಜನೆ ಪ್ರಸ್ತಾಪವಿಲ್ಲ. ಈ ಬಜೆಟ್‌ ಉದ್ಯಮಿಗಳ ಪರವಾಗಿದೆಯೇ ಹೊರತು ರೈತರ, ಕಾರ್ಮಿಕರ ಪರವಾ ಗಿಲ್ಲ ಎಂದು ದೂರಿದರು.

ದೇಶದಲ್ಲಿ 8500 ಲಕ್ಷ ಕೋಟಿ ರೂ. ಉದ್ಯಮಿಗಳು ತೀರಿಸಲಾಗದ ಸಾಲ ಎಂದು ಘೋಷಣೆ ಮಾಡಿ ದ್ದಾರೆ. ಆದರೆ, ದೇಶದಲ್ಲಿ ರೈತರ ಸಾಲ ಇರುವುದೇ 2 ಲಕ್ಷ ಕೋಟಿ ರೂ., ರೈತರ ಖಾಸಗಿ, ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಇರುವ ಸಾಲವನ್ನು ಮನ್ನಾ ಮಾಡದಿದ್ದರೆ ಕೃಷಿಗೆ ಉಳಿಗಾಲವೇ ಇಲ್ಲ. ಬ್ಯಾಂಕ್‌ಗಳಲ್ಲಿ ರೈತರಿಗೆ ಹೆಚ್ಚು ಸಾಲ ನೀಡಲು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.

ಆದರೆ, ಸಣ್ಣ ಹಿಡುವಳಿದಾರ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ನೀಡುವುದಿಲ್ಲ, ಸಾಲ ಪಡೆಯುವ ಚೈತನ್ಯವೂ ರೈತರಿಗೆ ಇಲ್ಲದಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಪ್ರಾಂತ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಸಿ.ಎಚ್‌.ರಾಮಕೃಷ್ಣ, ಸಿಪಿಎಂ ತಾಲೂಕು ಕಾರ್ಯದರ್ಶಿ ರುದ್ರಾ ರಾಧ್ಯ, ತಾಲೂಕಿನ ರೈತ ಸಂಘದ ಮುಖಂಡರು, ಕೃಷಿಕರು ಮತ್ತಿತರರು ಭಾಗವಹಿಸಿದ್ದರು.

ಪ್ರಾಂತ ರೈತ ಸಂಘದ ಪ್ರಮುಖ ಬೇಡಿಕೆಗಳು
* ರೈತರ, ಕೂಲಿಕಾರರ ಮತ್ತು ಕಸುಬುದಾರರ ಎಲ್ಲಾ ರೀತಿಯ ಸಹಕಾರ ಸಂಘ, ಖಾಸಗಿ ಸಾಲ ಮನ್ನಾ ಮಾಡಬೇಕು.

* ಸ್ತ್ರೀಶಕ್ತಿ ಹಾಗೂ ಸ್ವ ಸಹಾಯ ಸಂಘಗಳ ಸಾಲ, ಎಸ್ಸಿ, ಎಸ್ಟಿ, ಬಿಸಿಎಂ, ದೇವದಾಸಿ ಪುನರ್‌ವಸತಿ ನಿಗಮದಲ್ಲಿ ಮಾಡಿರುವ ಸಾಲ ಮನ್ನಾ ಮಾಡಬೇಕು.

* ಅಗತ್ಯ ಬೆಳೆ ವಿಮೆ ಮತ್ತು ಬೆಳೆ ಪರಿಹಾರಕ್ಕಾಗಿ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರವನ್ನು ವಿತರಿಸಬೇಕು.

* ಕೃಷಿ ಕೂಲಿಕಾರರಿಗೆ ಉದ್ಯೋಗ ಪರಿಹಾರವಾಗಿ ಕುಟುಂಬಕ್ಕೆ ತಲಾ ಕನಿಷ್ಠ 25 ಸಾವಿರ ರೂ., ಉದ್ಯೋಗ ಖಾತ್ರಿ ಯೋಜನೆ ಮಾನವ ಕೆಲಸ 200 ದಿನಗಳಿಗೆ ವಿಸ್ತರಣೆ ಮಾಡಬೇಕು.

* 600 ರೂ.ಗೆ ಕೂಲಿ ಹೆಚ್ಚಳ, ರೈತರೂ ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳಿಗೂ ಅನ್ವಯಿಸಬೇಕು.

* ಎಲ್ಲಾ ಬಡವರಿಗೆ ಉಚಿತ ಪಡಿತರ ಇರುವ ರೇಷನ್‌ ಸರಬರಾಜು ಮಾಡಬೇಕು, ನಗದು ವರ್ಗಾವಣೆ ಅಥವಾ ಕೂಪನ್‌ ಪದ್ಧತಿ ಕೈಬಿಡಬೇಕು.

* ಆಧಾರ್‌ ಸಂಖ್ಯೆ ಕಡ್ಡಾಯವಾಗಿ ಪಡೆಯುವ ಪದ್ಧತಿ ಕೈಬಿಡಬೇಕು, ಪ್ರತಿ ಗ್ರಾಪಂನಲ್ಲಿ ಮೇವಿನ ಬ್ಯಾಂಕ್‌ ತೆರೆಯಬೇಕು ಮತ್ತು ಉಚಿತವಾಗಿ ನೀಡಬೇಕು.

* ಗ್ರಾಮ ಹಾಗೂ ನಗರಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಮುಂದಿನ ಬೆಳೆಗೆ ಬೀಜ, ಗೊಬ್ಬರ, ಕ್ರಿಮಿನಾಶಕ ಉಚಿತ ವಿತರಣೆ ಮಾಡಬೇಕು.

* ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌, ಸಾರ್ವಜನಿಕ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ವರ್ಷದ ಎಲ್ಲಾ ಶಿಕ್ಷಣ ಶುಲ್ಕ ಮನ್ನಾ ಮಾಡಬೇಕು.

* ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ, ಗ್ರಾಮಗಳ ಎಲ್ಲಾ ವಸತಿ ಹೀನರಿಗೆ ಉಚಿತ ನಿವೇಶನ, ಮನೆ ನೀಡಬೇಕು.

* ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 6 ಗಂಟೆ ತ್ರಿಪೇಸ್‌ ವಿದ್ಯುತ್‌ ಪೂರೈಕೆ, 18 ವರ್ಷ ಒಳಗಿನ ಅಂಗವಿಕಲರಿಗೂ ಮಾಶಾಸನ ನೀಡಬೇಕು.

* ಬಯಲುಸೀಮೆ ಜಿಲ್ಲೆಗಳ ಬರ ನೀಗಿಸಲು ಡಾ.ಪರಮಶಿವಯ್ಯ ವರದಿಯಂತೆ ನೀರಾವರಿ ಯೋಜನೆ ಜಾರಿ ಮಾಡಬೇಕು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.