ಧರ್ಮ ಎಂದರೆ ಬದುಕುವ ರೀತಿ: ಡಾ| ಭಟ್‌


Team Udayavani, May 7, 2017, 3:09 PM IST

0605btlph1.jpg

ಕಟ್ಟೆಮಾರು ತರವಾಡು ಕ್ಷೇತ್ರದ ದೈವಗಳ ಪುನಃ ಪ್ರತಿಷ್ಠೆ 
ಬಂಟ್ವಾಳ : ನಾವು ಹೇಗೆ ಬದುಕಬೇಕು ಎಂಬುದೇ ಧರ್ಮ ಹೊರತು ಅಂಧಾನುಕರಣೆಯಲ್ಲ. ಪ್ರಾಣಿಗಳೂ ಬದುಕುತ್ತವೆ. ಅವುಗಳಿಗೆ ಪ್ರಾಕೃತಿಕ ಧರ್ಮವಿದೆ. ಅಲ್ಲಿ ಆಹಾರ ಹೊರತುಪಡಿಸಿದರೆ ಹಿಂಸೆ, ನೋವು, ಸ್ವಾರ್ಥಗಳಿಲ್ಲ. ಮನುಷ್ಯ ಮೃಗವಲ್ಲ. ಹಾಗಾಗಿ ಅವನಿಗೆ ಶಿಸ್ತುಬದ್ಧ ಜೀವನ ಬೇಕು. ಅಂತಹ ಶಿಸ್ತು ಧರ್ಮ-ಸಂಸ್ಕೃತಿಯಿಂದ ಬರುವುದು, ಇದೇ ನೈಜ ಧರ್ಮ ಎಂದು ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಹೇಳಿದರು.

ಅವರು ಶುಕ್ರವಾರ ಕಟ್ಟೆಮಾರು ಶ್ರೀ ಧೂಮಾವತಿ, ನಾಗದೇವರು, ಚಾಮುಂಡಿ ಮತ್ತು ಪರಿವಾರ ದೈವಗಳ ತರವಾಡು ಕ್ಷೇತ್ರದ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ತರವಾಡು ಮನೆಯ ಗೃಹಪ್ರವೇಶ ಮೊದಲ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಧುನಿಕ ಆಂಗ್ಲ ಶಿಕ್ಷಣದಿಂದ ಎಳೆಯರಲ್ಲಿ ಸಂಸ್ಕಾರ ಕಡಿಮೆ ಆಗುತ್ತಿದೆ. ಶಿಕ್ಷಣದಲ್ಲಿ ಭಾರತೀಯ ವಿಚಾರಗಳ ಸೇರ್ಪಡೆ ಆಗಬೇಕು. ಅದು ವಿಚಾರ ಪ್ರಚೋದಕ ಆಗಬೇಕು. ನೀರಸ ಶಿಕ್ಷಣದಿಂದ ಆಸಕ್ತಿ ಕೆರಳುವುದಿಲ್ಲ. ಧರ್ಮದ ಮೌಲ್ಯದಿಂದ, ಶಿಕ್ಷಣದಿಂದ, ಆಚರಣೆಗಳಿಂದ ಹೊಸತನ ಮೂಡುವುದು ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ನಿಟಿಲಾಪುರ ಕ್ಷೇತ್ರ ಮತ್ತು ಇಲ್ಲಿನ ತರವಾಡು ಮನೆಗೆ ಅವಿನಾಭಾವ ಸಂಬಂಧವಿದೆ. ದೈವ-ದೇವರ ಸಾನ್ನಿಧ್ಯ ದೊರಕುವುದು ನಮ್ಮ ಪೂರ್ವ ಪುಣ್ಯ ಫಲದಿಂದ. ಸೇವೆ ಸಲ್ಲಿಸಬೇಕು ಎಂದು ಅಪೇಕ್ಷೆ ಪಟ್ಟವರಿಗೆ ಅನೇಕ ಸಂದರ್ಭಗಳಲ್ಲಿ ಅವಕಾಶ  ಲಭ್ಯವಾಗುವುದಿಲ್ಲ. ಆದರೆ ಕಟ್ಟೆಮಾರು ಕುಟುಂಬಕ್ಕೆ ಅಂತಹ ದೈವದೇವರ ಕೆಲಸ ಮಾಡಲು ಪೂರ್ವ ದಿಂದಲೇ ಅವಕಾಶ ಲಭ್ಯವಾಗಿದೆ ಎಂದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕಾದರೆ ನಾವು ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸ ಬೇಕು. ಅವರಿಗೆ ಆಚರಣೆಗಳ ಮಾಹಿತಿ ನೀಡದಿದ್ದರೆ ಅವರು ದೈವದ ಕೋಲವನ್ನು ಪಾನೀಯ ಎಂದು ತಪ್ಪಾಗಿ ಅರ್ಥೈಸುವ ದಿನ ದೂರವಿಲ್ಲ ಎಂದರು.

ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಬರಿಮಾರು, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌, ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಶಿವಪ್ಪ, ಜಿ.ಪಂ. ಮಾಜಿ ಸದಸ್ಯ ಚೆನ್ನಪ್ಪ ಆರ್‌. ಕೋಟ್ಯಾನ್‌ ಮಾತನಾಡಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗೀಶ್‌ ಪೂಜಾರಿ ಕಡ್ತಿಲ ಪ್ರಸ್ತಾವನೆಗೈದರು. ಆಡಳಿತ ಸಮಿತಿ ಅಧ್ಯಕ್ಷ ಲೋಕಾನಂದ ಕಲ್ಲಕಟ್ಟ ಸ್ವಾಗತಿಸಿ, ಕಾರ್ಯ ದರ್ಶಿ ಜಯರಾಮ ಪೂಜಾರಿ ವಂದಿಸಿದರು. ಸತೀಶ್‌ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.