ಬಿ.ಸಿರೋಡ್ ಬಸ್ ನಿಲ್ದಾಣ ಅ. 22ರಂದು ಸಿಎಂ ಉದ್ಘಾಟನೆ
Team Udayavani, Oct 21, 2017, 4:04 PM IST
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬಿ.ಸಿ.ರೋಡ್ ಕೆಎಸ್ ಆರ್ಟಿಸಿ ಬಸ್ ನಿಲ್ದಾಣ 10. 07 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 1.50 ಎಕ್ರೆ ಜಮೀನಿನಲ್ಲಿ ಒಟ್ಟು 3,554. 16 ಚ.ಮೀ. ವಿಸ್ತೀರ್ಣ ಹೊಂದಿದ್ದು ನೆಲ ಮತ್ತು ಮೊದಲ ಅಂತಸ್ತನ್ನು ಹೊಂದಿದೆ.
ಬಸ್ ನಿಲ್ದಾಣ ಮೂಲ ಸೌಕರ್ಯಗಳಾದ ಉಪಹಾರ ಗೃಹ, ಮುಂಗಡ ಟಿಕೇಟ್ ಕೌಂಟರ್, ಪುರುಷರಿಗೆ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕೆಳ ಅಂತಸ್ತಿನಲ್ಲಿ ವಾಹನ ಪಾರ್ಕಿಂಗ್, ಮಹಿಳಾ ವಿಶ್ರಾಂತಿ ಗೃಹ, ವಿಶ್ರಾಂತಿ ಆಸನಗಳು , ಲಗೇಜ್ ಕೊಠಡಿ ಹೊಂದಿದೆ.
ಬಿ.ಸಿ.ರೋಡ್ ತಲಪಾಡಿಯಲ್ಲಿ ಈಗಾಗಲೇ ಕೆಎಸ್ಆರ್ಟಿಸಿ ಬಸ್ ಡಿಪೋ ಹೊಂದಿದೆ. ಆದರೆ ಸುಸಜ್ಜಿತ ಬಸ್ ನಿಲ್ದಾಣ ಇರಲಿಲ್ಲ. ಇದೀಗ ಬಂಟ್ವಾಳಕ್ಕೆ ಅಂತಹ ಭಾಗ್ಯ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಂದ ಶಿಲಾನ್ಯಾಸ ನಡೆದು ಕೇವಲ ಒಂದು ವರ್ಷದ ಅವಧಿಯಲ್ಲಿ ಬಸ್ ನಿಲ್ದಾಣ ಸುಸಜ್ಜಿತವಾಗಿ ನಿರ್ಮಾಣಗೊಂಡು ಸೇವೆಗೆ ಸಿದ್ದವಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಉಸ್ತುವಾರಿ ಸಚಿವರ ಪ್ರಯತ್ನದ ಫಲವಾಗಿ ಒಟ್ಟು 252.50 ಕೋ.ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳು ಅನುಷ್ಠಾನಕ್ಕೆ ಬರಲಿವೆ. ಇದರಲ್ಲಿ 148.29 ಕೋ. ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, 104. 21 ಕೋ. ರೂ. ವೆಚ್ಚದ ಯೋಜನೆಗಳಿಗೆ ಶಿಲಾನ್ಯಾಸ ನಡೆಯುವ ಮೂಲಕ ಮುಂದಿನ ದಿನಗಳಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಈ ಎಲ್ಲಾ ಯೋಜನೆಗಳ ಲೋಕಾರ್ಪಣೆಗೆ ಅ. 22ರಂದು ಮುಹೂರ್ತ ಸಿದ್ದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ