ಮನೆ ಮುಂದೆ ಮಾಟ !:ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಂಗಾಲು
Team Udayavani, Apr 20, 2017, 10:52 AM IST
ಬೆಳಗಾವಿ : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸದ ಎದುರು ಮಾಟ ಮಂತ್ರ ಮಾಡಿರುವುದು ಗುರುವಾರ ಬೆಳಗ್ಗೆ ಕಂಡು ಬಂದಿದೆ.
ಕುವೆಂಪುನಗರದ ನಿವಾಸದ ಎದುರು ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಾಟ ಮಂತ್ರಕ್ಕೆ ಬಳಸುವ ಲಿಂಬೆ , ಮೊಟ್ಟೆ ,ಮೆಣಸಿನಕಾಯಿ ಬೂದು ಗುಂಬಳಕಾಯಿ ಅರಸಿನ ಕುಂಕುಮ ಇತ್ಯಾದಿ ವಸ್ತುಗಳು ಪತ್ತೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ‘ನಾನು ಮಾಟ,ಮಂತ್ರ ನಂಬುವುದಿಲ್ಲ. ರಾಜಕೀಯ ವಿರೋಧಿಗಳು ಇದನ್ನು ಮಾಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆ ನಡೆದ ಬಳಿಕ ಈ ರೀತಿ ಮಾಡುತ್ತಿದ್ದಾರೆ. ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು ನನ್ನ ತಮ್ಮನ ಕಾರು ಅಪಘಾತಕ್ಕೀಡಾಗಿದೆ. ಅದಾಗಿ 2 ದಿನಗಳಲ್ಲಿ ನನ್ನ ಇನ್ನೋವಾ ಕಾರು ಅಪಘಾತಕ್ಕೀಡಾಗಿ ಕೆಲವರಿಗೆ ಗಾಯವಾಗಿದೆ. ನನ್ನ ಮಗನೂ ಬಿದ್ದು ಗಾಯಗೊಂಡಿದ್ದಾನೆ. ಈ ಎಲ್ಲಾ ಘಟನೆಗಳಿಂದ ನಮ್ಮ ಮನೆಯವರಿಗೆಲ್ಲಾ ಸಂಶಯ ಮೂಡಿದೆ ಎಂದರು.
ಪಿಎಸ್ಐಗೆ ಧಮ್ಕಿ, ನಿವಾಸದ ಮೇಲೆ ಐಟಿ ದಾಳಿ,ಉಪಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿದ ಆರೋಪ ಹೀಗೆ ಸದಾ ಒಂದಿಲ್ಲ ಒಂದು ವಿಚಾರದಲ್ಲಿ ಹೆಬ್ಬಾಳ್ಕರ್ ಸುದ್ದಿಯಲ್ಲಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ