ಗ್ರಾಮ ವಾಸ್ತವ್ಯ ಚುನಾವಣೆ ಗಿಮಿಕ್ಕಲ್ಲ


Team Udayavani, Aug 18, 2017, 2:04 PM IST

18-BLR-6.jpg

ಕೂಡ್ಲಿಗಿ: ಗ್ರಾಮ ವಾಸ್ತವ್ಯ ನನ್ನ ಕನಸು. ನನ್ನ ಕ್ಷೇತ್ರದ ಜನರ ಸಮಸ್ಯೆ ತಳಮಟ್ಟದಲ್ಲಿ ಬಗೆಹರಿಸುವುದು, ಅವರ ಸಮಸ್ಯೆಗೆ ಧ್ವನಿಯಾಗಲು “ನಮ್ಮ ನಡೆ-ಹಳ್ಳಿ ಕಡೆಗೆ’ಎಂಬ ವಿನೂತನ ಕಾರ್ಯಕ್ರಮ ಮಾಡಿದ್ದೇವೆ ಹೊರತು, ಇದು ಚುನಾವಣೆ ರಣತಂತ್ರವಲ್ಲ ಎಂದು ಶಾಸಕ ಬಿ.ನಾಗೇಂದ್ರ ಸ್ಪಷ್ಟಪಡಿಸಿದರು.

ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ “ನಮ್ಮ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಯಾವುದೇ ಪಕ್ಷ ಮುಖ್ಯವಲ್ಲ. ಅವರ ಸಮಸ್ಯೆಗಳಿಗೆ ಪರಿಹಾರ ಮುಖ್ಯ. ಯಾವುದೇ ಪಕ್ಷದವರಾಗಿದ್ದರೂ ನನಗೆ ಎಲ್ಲರೂ ಒಂದೇ. ನಿಮ್ಮ ಸೇವೆ ಮಾಡುವುದಷ್ಟೇ ನನ್ನ ಗುರಿ. ಇದು ನನ್ನ ರಾಜಕೀಯ ಸಿದ್ಧಾಂತ ಎಂದರು.

ಗ್ರಾಮ ವಾಸ್ತವ್ಯ ಎಂದು ಊರಲ್ಲಿ ಬಂದು ಊಟ ಮಾಡಿ ಮಲಗುವುದಲ್ಲ. ಇಡೀ ತಾಲೂಕು ಆಡಳಿತವೇ ಹಳ್ಳಿಯ ಕಡೆಗೆ ಬಂದಿದ್ದು, ತಾಲೂಕಿನ ಎಲ್ಲ 32 ಇಲಾಖೆಗಳ ಅಧಿಕಾರಿಗಳು ನಿಮ್ಮ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ನೀಡಲಿದ್ದಾರೆ. ನಿಮಗೆ ಅನ್ಯಾಯವಾಗಿದ್ದರೆ ತಾವು ನ್ಯಾಯ ನೀಡಲು ಸಿದ್ಧ. ಆದರೆ ತಾಳ್ಮೆಯಿಂದ ಬಂದು ಸಮಸ್ಯೆ ಹೇಳಿ, ಕೂಡಲೇ ಆಗದಿದ್ದರೆ ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇಂದಿನಿಂದ ಡಿಸೆಂಬರ್‌ ತಿಂಗಳವರೆಗೆ “ನಮ್ಮ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ತಾಲೂಕಿನ 60 ಕಡೆ ಆಯೋಜಿಸಲಾಗುತ್ತಿದ್ದು, ಆಯಾ ಗ್ರಾಪಂ ವ್ಯಾಪ್ತಿಯ ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿ ಸೋಮವಾರ, ಮಂಗಳವಾರ ಬದಲು, ವಾರದಲ್ಲಿ 2 ದಿನ ಮಂಗಳವಾರ ಹಾಗೂ ಶುಕ್ರವಾರ ಕ್ಷೇತ್ರದಾದ್ಯಾಂತ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಇಡೀ ತಾಲೂಕು ಆಡಳಿತವನ್ನು ಹಳ್ಳಿಗಳ ಕಡೆ ಕೊಂಡೊಯ್ದು ಜನರ ಸಮಸ್ಯೆಗಳಿಗೆ ಪರಿಹರಿಸುವ ಕಾರ್ಯ ಮಾಡಲಿದ್ದೇನೆ ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಹಳ್ಳಿಗಳ ಅಭಿವೃದ್ಧಿ ಆಗಬೇಕಾದರೆ ಅಲ್ಲಿನ ಯುವಕರು, ಗ್ರಾಮಸ್ಥರು ಸಹಕಾರ ನೀಡಬೇಕು. ತಾವು ಕೂಡ ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಗಳ ತಳಮಟ್ಟದ ಸಮಸ್ಯೆಗಳನ್ನು ತಿಳಿಯಲು ಪ್ರಯತ್ನಿಸಿದ್ದು, ಜನರ ಸಹಕಾರ ನೀಡಿದರೆ ಸರ್ಕಾರದ ಯೋಜನೆಗಳು ಸಾಕಾರಗೊಳ್ಳುತ್ತವೆ. ಕಾರಣ ಹೇಳುವುದನ್ನು ಬಿಟ್ಟು ಅಭಿವೃದ್ಧಿಯಲ್ಲಿ ನಮ್ಮದು ಜವಾಬ್ದಾರಿ ಇದೆ ಎನ್ನುವುದನ್ನು ತಿಳಿಯಬೇಕೆಂದರು. ಈ ಸಂದರ್ಭದಲ್ಲಿ ವೃದ್ಧಾಪ್ಯ, ಅಂಗವಿಕಲರ ವೇತನ, ಅಂಗವಿಕಲರಿಗೆ ತ್ತೈಸಿಕಲ್‌ ಮುಂತಾದ ಸಮಸ್ಯೆಗಳಿಗೆ ಶಾಸಕರು ಮತ್ತು ಅಧಿಕಾರಿಗಳು
ಸ್ಥಳದಲ್ಲೇ ಪರಿಹಾರ ಸಿಕ್ಕರೆ, ಶೌಚಾಲಯ, ಮನೆ ಮುಂತಾದ ಸಮಸ್ಯೆಗಳಿಗೆ ಬಗೆಹರಿಸುವ ಭರವಸೆ ನೀಡಿದರು. ಜಿಪಂ ಅಧ್ಯಕ್ಷೆ ದೀನಾ ಮಂಜುನಾಥ್‌, ತಾಪಂ ಅಧ್ಯಕ್ಷ ಕೆ.ವೆಂಕಟೇಶ್‌, ಜಿಪಂ ಸದಸ್ಯ ಎಂ.ಎಂ.ಜೆ.ಹರ್ಷವರ್ದನ್‌, ತಾಪಂ ಇಒ ಮಂಜುನಾಥ್‌, ಹಶೀಲ್ದಾರ್‌.ಎಲ್‌.ಕೃಷ್ಣಮೂರ್ತಿ,  ತಾಪಂ ಸದಸ್ಯೆ ಸುಧಾ ಪ್ರಾಣೇಶ್‌, ಜಿ.ಪಾಪನಾಯಕ, ಕೆ.ಎಚ್‌.ವೀರನಗೌಡ್ರು, ಜಿ.ಉಮೇಶ್‌, ಕೆ.ಎನ್‌ .ಭೀಮಪ್ಪ, ಗುಡೇಕೋಟೆ ರಾಜಣ್ಣ, ಬಯಲು ತುಂಬರಗುದ್ದಿ ದುರುಗೇಶ್‌, ಜಿ.ಮಲ್ಲಿಕಾರ್ಜುನ, ಮಹೇಶ್‌, ಭಂಗಿ ವಿಜಯಕುಮಾರ್‌, ಜಗದೀಶ್‌, ಗೋವರ್ದನರೆಡ್ಡಿ ಇದ್ದರು.

ಹಳ್ಳಿಗಳಲ್ಲಿ ತಂಬಿಗೆ ಹಿಡಿದುಕೊಂಡು ಮಹಿಳೆಯರು ಬಹಿರ್ದೆಸೆಗೆ ರಸ್ತೆಯ ಕಡೆಗೆ ಹೋಗುತ್ತಿದ್ದಾರೆಂದರೆ ಅವರು ಬೇರೆ ಯಾರು ಅಲ್ಲ, ನನ್ನ ಮನೆಯ ತಾಯಿ, ತಂಗಿ ಎಂದು ತಿಳಿದುಕೊಂಡು ಸರ್ಕಾರ ನೀಡುವ ಅನುದಾನ ಬಳಸಿಕೊಂಡು ಶೌಚಾಲಯ ಕಟ್ಟಿಸಿಕೊಳ್ಳುವ ಮೂಲಕ ಮಹಿಳೆಯರ ಗೌರವ ಕಾಪಾಡಿ.
ಡಾ|ಕೆ.ವಿ.ರಾಜೇಂದ್ರ, ಜಿಪಂ ಸಿಇಒ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.