ತಾಲೂಕು ಆಡಳಿತ ಸಹಕಾರ ನೀಡಿದರೆ ಸಮಸ್ಯೆಗಳಿಗೆ ಪರಿಹಾರ


Team Udayavani, Aug 23, 2017, 1:16 PM IST

23-BLR-3.jpg

ಕೂಡ್ಲಿಗಿ: ತಾಲೂಕಿನ ಹಳ್ಳಿಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುವುದು ಸಾಮಾನ್ಯ. ಆದರೆ ಸಮಸ್ಯೆ ಏನೇ ಇರಲಿ ಎಲ್ಲವನ್ನೂ ಗಂಭೀರವಾಗಿ
ತೆಗೆದುಕೊಂಡು ಜನರಿಗೆ ಸ್ಪಂದಿಸುವುದು ನನ್ನ ಗುರಿಯಾಗಿದೆ ಎಂದು ಶಾಸಕ ಬಿ.ನಾಗೇಂದ್ರ ತಿಳಿಸಿದರು.

ಮಂಗಳವಾರ ತಾಲೂಕಿನ ಗುಡೇಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯರೊಬಯ್ಯನಹಟ್ಟಿ ಗ್ರಾಮದಲ್ಲಿ “ನಮ್ಮ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿ ಸುವ ಕೆಲಸ ಮಾಡುತ್ತಿದ್ದಾರೆ. ತಾಲೂಕು ಆಡಳಿತ ಸಹಕಾರ ನೀಡಿದರೆ ಮಾತ್ರ ಸಮಸ್ಯೆಗಳು ಬಗೆಹರಿಸಲು ಸಾಧ್ಯ.ಹೀಗಾಗಿ ಅಧಿ ಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನ ಜನರ ಸೇವೆ ಮಾಡಲು ಮುಂದಾಗಿದ್ದೇನೆ ಎಂದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಕುಗ್ರಾಮ ಅಥವಾ ಮೂಲೆಕಟ್ಟಿನ ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ “ನಮ್ಮ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಆಯೋಜಿಸುತ್ತಿದ್ದು ಇಡೀ ತಾಲೂಕು ಆಡಳಿತ ಕುಗ್ರಾಮದ ಸಮಸ್ಯೆಗಳನ್ನು ತಿಳಿಯಲು ಮತ್ತು ಈ ಹಳ್ಳಿಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಯಾವ ರೀತಿ ಯೋಜನೆ ತಯಾರಿಸಬೇಕು ಎಂಬುದು ತಿಳಿಯುತ್ತದೆ ಎಂದರು.

ತಾಪಂ ಇಒ ಮಂಜುನಾಥ್‌ ಮಾತನಾಡಿ, ತಾಲೂಕಿನ ಹಳ್ಳಿಗಾಡಿನ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು ಮೂಲೆಕಟ್ಟಿನ ಹಳ್ಳಿಗಳಲ್ಲಿ ಜನರಿಗೆ ಮೊದಲು ಅರಿವು ಮೂಡಿಸುವ ಕಾರ್ಯ ನಡೆಯಬೇಕು. ನಮ್ಮ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಇಲ್ಲಿನ ಜನರ ಸಮಸ್ಯೆಗಳನ್ನು ಕೇಳುವುದಲ್ಲದೇ, ಇಲ್ಲಿನ ಅನಕ್ಷರಸ್ಥರಿಗೆ ಸರ್ಕಾರದ ಯೋಜನೆಗಳ ಬಗ್ಗೆ ತಿಳುವಳಿಕೆ ಮೂಡಿಸಲಾಗುವುದು. ಜನಪ್ರತಿನಿಧಿಗಳ ಮೂಲಕ ತಮ್ಮೂರಿನ ಸಮಸ್ಯೆಗಳನ್ನು ಹೇಳಿಕೊಳ್ಳಲು ಈ ಕಾರ್ಯಕ್ರಮದ ಮೂಲಕ ಸಾಧ್ಯವಾಗುತ್ತದೆ ಎಂದರು.

ಗುಡೇಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯರೊಬಯ್ಯನಹಟ್ಟಿ ಹಾಗೂ ಲಿಂಗನಹಳ್ಳಿ ತಾಂಡಾ, ಶ್ರೀಕಂಠಾಪುರ ಮುಂತಾದ ಕಡೆಗಳಿಂದ ಹಳ್ಳಿಗಳ ಜನತೆ ಸಮಸ್ಯೆಗಳನ್ನು ತಂದು ಶಾಸಕರು ಹಾಗೂ ಜನಪ್ರತಿನಿಧಿ ಗಳ ಮುಂದಿಟ್ಟರು. ಹಳ್ಳಿಗಾಡಿನಲ್ಲಿ ವೃದ್ಧಾಪ್ಯ ವೇತನ, ಜಮೀನುಗಳಿಗೆ ದಾರಿಗಳ ಸಮಸ್ಯೆ, ಶೌಚಾಲಯ ಸಮಸ್ಯೆ ಸೇರಿದಂತೆ ಮೂಲ ಸೌಕರ್ಯ ಸಮಸ್ಯೆಗಳೇ ಬಹುತೇಕ ಇದ್ದವು. ಕೆಲವು ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಕೆಲವು ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಶಾಸಕರು ಹಾಗೂ ಅಧಿಕಾರಿಗಳು ಚರ್ಚೆ ಮಾಡಿ ಪರಿಹಾರ ನೀಡಿದರು.

ತಾಪಂ ಅಧ್ಯಕ್ಷ ವೆಂಕಟೇಶ್‌ನಾಯ್ಕ, ತಹಶೀಲ್ದಾರ್‌ ಎಲ್‌. ಕೃಷ್ಣಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಮಾಣಿಕ್ಯಚಾರ್‌,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೊತ್ಲಪ್ಪ, ಹಾಲು ಉತ್ಪಾದಕರ ಸಂಘದ ತಾಲೂಕು ಅಧಿಕಾರಿ ಮರುಳಸಿದ್ದಪ್ಪ, ಗುಡೇಕೋಟೆ ರಾಜಣ್ಣ, ರಾಮದುರ್ಗ ಸೂರ್ಯಪಾಪಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಪಿ.ಚಂದ್ರಮೌಳಿ, ಹುಡೇಂ ಜಿಪಂ ಸದಸ್ಯ ಎಚ್‌.ರೇವಣ್ಣ, ಗುಡೇಕೋಟೆ ನಾಗರಾಜ, ಜಯರಾಂ, ಲಿಂಗನಹಳ್ಳಿ ತಾಂಡಾದ ಅಂಬರೀಷ್‌ನಾಯ್ಕ, ಚಿಲುಮೆಹಳ್ಳಿ ವೆಂಕಟಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.