ತೆರಿಗೆ ಇಲಾಖೆ ರಚನಾ ದಿನೋತ್ಸವ
Team Udayavani, Jul 26, 2017, 9:15 AM IST
ಬೀದರ: ಆದಾಯ ತೆರಿಗೆ ಇಲಾಖೆಯ ರಚನಾ ದಿನೋತ್ಸವದ ಪ್ರಯುಕ್ತ ಜಿಲ್ಲಾ ಆದಾಯ ತೆರಿಗೆ ಇಲಾಖೆಯಿಂದ ವಿವಿಧ
ಕಾರ್ಯಕ್ರಮಗಳು ನಡೆದವು. ನಗರದ ಗಣೇಶ ಮೈದಾನದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಬಳಿಕ ಹೊಟೇಲ್ ಮಯೂರದಲ್ಲಿ ನಗರದ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 120ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ
ಚಿತ್ರಕಲಾ ಸ್ಪರ್ಧೆ ನಡೆಯಿತು. ತದನಂತರ ನಡೆದ ಸಭಾ ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್. ಸೆಲ್ವಮಣಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆಯ ರಚನೆ ಹಾಗೂ ಕಾರ್ಯಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿರುವುದು ಶ್ಲಾಘನೀಯ ಸಂಗತಿ. ಈ ನಿಟ್ಟಿನಲ್ಲಿಯೇ ಜಿಲ್ಲಾ ಆದಾಯ ತೆರಿಗೆ ಇಲಾಖೆ ಉತ್ತಮವಾಗಿ
ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ವರಮಾನ ತೆರಿಗೆ ಅಧಿಕಾರಿ ವಿ. ಶ್ರೀನಿವಾಸರಾವ್ ಮಾತನಾಡಿ, ರಾಷ್ಟ್ರದ ಉದ್ದೇಶಗಳು ಸಫಲವಾಗುವ ದಿಶೆಯಲ್ಲಿ ಹಾಗೂ ಆದಾಯ ಒಟ್ಟುಗೂಡಿಸುವ ನಿಟ್ಟಿನಲ್ಲಿ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ಜಿಎಸ್ಟಿ ಅಧೀಕ್ಷಕ ಎಚ್. ಮಾರುತಿ ಮಾತನಾಡಿದರು. ಆದಾಯ ತೆರಿಗೆ ಅಧಿಕಾರಿ ವಿ. ಶ್ರೀನಿವಾಸ, ಬೀದರ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಕೆ.ಕೆ.
ಅಟ್ಟಲ್ ಹಾಗೂ ಕಿರಾಣಿ, ಬಟ್ಟೆ, ಫಾರ್ಮಾ, ಹೊಟೇಲ್, ಜ್ಯುವೇಲರಿ ಸೇರಿದಂತೆ ವಿವಿಧ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು. ಅಂಚೆ ಇಲಾಖೆ ಸಿಬ್ಬಂದಿ ಮಂಗಲಾ ಭಾಗವತ ನಿರೂಪಿಸಿದರು.
ಇಲಾಖೆಯ ಸಿಬ್ಬಂದಿ ಉಮಾಕಾಂತ, ಅಂಬಾದಾಸ ಹಾಗೂ ಝಾನ್ಸನ್ ಸ್ವಾಗತ ಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ