ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಗೆ ಅಧಿಕಾರಿಗಳ ಭೇಟಿ


Team Udayavani, Aug 22, 2017, 12:14 PM IST

bid 4.jpg

ಹುಮನಾಬಾದ: ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಸೋಪ್‌, ಗ್ರೀಸ್‌, ರಸಗೊಬ್ಬರ ತಯಾರಿಕೆ ಹಾಗೂ ಎರಡು ರಾಸಾಯನಿಕ ಕಾರ್ಖಾನೆಗಳಿಗೆ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿ ದೀವಾಕರ್‌  ಕಾಟಾಚಾರಕ್ಕೆ ಎಂಬಂತೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮದ ಮುಖಂಡರು ಕೂಡ ಇದ್ದರು. ಅಧಿಕಾರಿಗಳು ಬಂದ ಸಂದರ್ಭದಲ್ಲಿ ಯಾವ ಕಾರ್ಖಾನೆಯಲ್ಲೂ ಮಾಲೀಕರು ಇರಲಿಲ್ಲ. ಅಧಿಕಾರಿಗಳು ಕಾರ್ಖಾನೆ ಒಳಗೆ ಹೋಗಿ ಒಂದು ಸುತ್ತು ತಿರುಗಿ ಹೊರಬಂದರು. ಈ ವೇಳೆ ಗ್ರಾಮಸ್ಥರು ಕೆಲ ಕಾರ್ಖಾನೆಗಳ ಬಾವಿಯ ನೀರನ್ನು ಕುಡಿಯುವಂತೆ ಕಾರ್ಖಾನೆಯವರಿಗೆ ಆಗ್ರಹಿಸಿದರು. ಆದರೆ ಕಾರ್ಖಾನೆಯವರು ಬಾವಿ ನೀರು ಕುಡಿಯಲು ಬಳಸುವುದಿಲ್ಲ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ವಾಗ್ವಾದ ಕೂಡ ನಡೆಯಿತು. ಗಡವಂತಿ ಗ್ರಾಮಕ್ಕೆ ತಟ್ಟಿದ ಶಾಪ ಇದೀಗ ಕಾರಂಜಾ ವ್ಯಾಪತಿಯ ಜನರಿಗೂ ತಟ್ಟಲಿದೆ. ಆದ್ದರಿಂ ಕಾರ್ಖಾನೆಯ ಮಾಲೀಕರು ಹಾಗೂ ಅಧಿಕಾರಿಗಳು ಮಾನವಿಯತೆ ಹೊಂದಬೇಕು. ನಮ್ಮ ಗ್ರಾಮದಲ್ಲಿ ನಿಮ್ಮ
ಮಕ್ಕಳು ಇದ್ದಿದ್ದರೆ ಹೇಗಿರುತ್ತಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸಿದರು. ಈ ಕಾರ್ಖಾನೆಗಳು ನಮ್ಮ ಗ್ರಾಮಸ್ಥರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿವೆ. ಅನೇಕರು ಚರ್ಮರೋಗದಿಂದ ಬಳಲುತ್ತಿದ್ದಾರೆ. ಇನ್ನಷ್ಟು ಜನರಿಗೆ ತುರಿಸುವಿಕೆ, ಮಲಬದ್ಧತೆ ಸೇರಿದಂತೆ ಅನೇಕ ಸಮಸ್ಯೆ ಕಾಡುತ್ತಿವೆ. ನಿಮ್ಮ ನಿರ್ಲಕ್ಷತನಕ್ಕೆ ನಾವೇಕೆ ಬಲಿಯಾಗಬೇಕು
ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಖಾನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಯಾವ ಕಾರ್ಖಾನೆಗಳ
ಮುಖ್ಯಸ್ಥರಿಗೂ ಪರಿಸರ ಮಾಲಿನ್ಯದ ಬಗ್ಗೆ ಸ್ಪಷ್ಟನೆ ಕೇಳಲಿಲ್ಲ. ಕೊಳಕು ತ್ಯಾಜ್ಯವನ್ನು ಯಾಕೆ ಹೊರಬಿಡಲಾಗುತ್ತಿದೆ ಎಂದು ಪ್ರಶ್ನಿಸಲಿಲ್ಲ. ಅಧಿಕಾರಿಗಳು ಬರುತ್ತಿದ್ದಾರೆಂದು ತಿಳಿದ ವಿವಿಧ ಕಂಪನಿಗಳು ಪೂರ್ವ ಸಿದ್ಧತೆ ಮಾಡಿಕೊಂಡಿದ್ದವು. ಕೊಳಕು ತ್ಯಾಜ್ಯ ಹರಿದು ಹೋಗುವ ಸ್ಥಳಲ್ಲಿ ಮಣ್ಣು ಹಾಕಿರುವುದು ಕೂಡ ಕಂಡುಬಂದಿತು. ಹಾಗಾಗಿ ಅಧಿಕಾರಿಗಳು ಕೇವಲ ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಈ ಕುರಿತು ಪರಿಸರ ಮಾಲಿನ್ಯ ಅಧಿಕಾರಿ ದೀವಾಕರ್‌ ಅವರನ್ನು ವಿಚಾರಿಸಿದ್ದಾಗ, ಮೇಲ್ನೊಟಕ್ಕೆ ವಿವಿಧ ಕಾರ್ಖಾನೆಗಳಿಂದ ತ್ಯಾಜ್ಯ ಹೊರಬರುತ್ತಿದೆ. ಕೆಲವು ಕಡೆಯಿಂದ ನೀರಿನ ಮಾದರಿ ಪಡೆಯಲಾಗಿದೆ. ತನಿಖೆ ನಡೆಸಿ ಕಾರ್ಖಾನೆಗಳಿಗೆ ನೋಟಿಸ್‌ ನೀಡಲಾಗುವುದು. ಪರಿಸರ ಮಾಲಿನ್ಯ ಆಗದಂತೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು. ಈಗಾಗಲೇ ತ್ಯಾಜ್ಯ ಹಳ್ಳಗಳ ಮೂಲಕ ಕಾರಂಜಾ ಜಲಾಶಯಕ್ಕೆ ಸೇರುತ್ತಿದ್ದು, ಅಂತಹ ಕಂಪನಿಗಳ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿ ಜಾರಿಕೊಂಡರು. ತಾಪಂ ಇಒ ಡಾ| ಗೊವಿಂದ, ಗ್ರಾಪಂ ಅಧ್ಯಕ್ಷ ಬಸವರಾಜ ಮಾಲಿಪಾಟೀಲ, ಓಂಕಾರ ತುಂಬಾ, ಗಜೇಂದ್ರ ಕನಕಟ್ಟಕರ್‌, ಪ್ರಕಾಶ ರೋಗನ, ರವಿ ಹೊಸಳ್ಳಿ ಸೇರಿದಂತೆ ಅನೇಕ ಗ್ರಾಮಸ್ಥರು ಇದ್ದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.