ವೀರಶೈವ-ಲಿಂಗಾಯತ ಗೊಂದಲ ಬೇಡ : ಪಾಟೀಲ


Team Udayavani, Aug 22, 2017, 12:45 PM IST

bid 9.jpg

ಬಸವಕಲ್ಯಾಣ: ವೀರಶೈವ ಹಾಗೂ ಲಿಂಗಾಯತ ಎನ್ನುವುದು ಬೇರೆ ಬೇರೆಯಲ್ಲ. ಈ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ಬಿಜೆಪಿ ಉಪಾಧ್ಯಕ್ಷ ಸುನೀಲ ಪಾಟೀಲ ಹೇಳಿದರು. ನಗರದ ಗವಿಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಗವಿಮಠ ಟ್ರಸ್ಟ್‌ ಹಾಗೂ ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆ ತಾಲೂಕು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸಿದ್ಧಾಂತ ಶಿಖಾಮಣಿ ನಿತ್ಯ ಪಠಣ ಹಾಗೂ
ಉಪನ್ಯಾಸ ಮಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಖೀಲ ಭಾರತ ವೀರಶೈವ ಮಹಾಸಭೆಗೆ ಶ್ರೀ ಭೀಮಣ್ಣ ಖಂಡ್ರೆ ಅವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವೀರಶೈವ, ಲಿಂಗಾಯತದ ಬಗ್ಗೆ ಸಮಾಜದಲ್ಲಿರುವ ಗೊಂದಲ ನಿವಾರಿಸುವ ಪ್ರಯತ್ನ ನಡೆದಿತ್ತು. ಅಂದು ಕೂಡಲ ಸಂಗಮದಲ್ಲಿ ಸಮಾವೇಶ ಆಯೋಜಿಸಿ ಪಂಚಾಚಾರ್ಯರ ಪರಂಪರೆ ಮತ್ತು ವಿರಕ್ತ ಪರಂಪರೆ ಮಠಾಧಿಧೀಶರನ್ನು ಒಂದೇ ವೇದಿಕೆಗೆ ಆಹ್ವಾನಿಸಿಸಲಾಗಿತ್ತು ಎಂದರು. ಡಾ| ಶಿವಲೀಲಾ ಶಾಂತಲಿಂಗ ಮಠಪತಿ ಮಾತನಾಡಿ, ವೀರಶೈವ ಲಿಂಗಾಯತ ಧರ್ಮ ಸಿಂಧೂ ನಾಗರಿಕತೆಯಷ್ಟೆ ಪ್ರಾಚೀನ. ಇತಿಹಾಸ ತಜ್ಞ ಸರ್‌ ಜಾನ್‌ ಮಾರ್ಷಲ್‌ ಅವರು ಈ ನಾಗರಿಕತೆಯ ನೆಲೆಗಳಲ್ಲಿ ಅನೇಕ ಚಿಕ್ಕ ಲಿಂಗಗಳನ್ನು ಶೋಧಿಸಿ ಪ್ರಪಂಚಕ್ಕೆ ಪರಿಚಯಿಸಿದ್ದು ಸಾಕ್ಷಿಯಾಗಿದೆ. ಶಿವಾಗಮಗಳು ವೀರಶೈವ ಲಿಂಗಾಯತ ಸಾಹಿತ್ಯವಾಗಿದ್ದು ಇವುಗಳ ಅಧ್ಯಯನದಿಂದ ಸತ್ಯ ಅರಿಯಲು ಸಾಧ್ಯವಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ಶ್ರೀ ಅಭೀನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರೌಢ ಶಾಲೆ ಮುಖ್ಯಗುರು ವಿಶ್ವನಾಥ ಬಿರಾದಾರ ಮಾತನಾಡಿದರು. ದಯಾನಂದ ಶೀಲವಂತ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಬಸವಂತಪ್ಪಾ ಲವಾರೆ ನಿರೂಪಿಸಿದರು. ರುದ್ರೇಶ್ವರ ಸ್ವಾಮಿ ಗೋರ್ಟಾ ವಂದಿಸಿದರು. ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ರಮೇಶ ಸ್ವಾಮಿ, ಸರಸ್ವತಿ ಬೆಂಬಳೆ, ಶೀಲಾದೇವಿ ಲವಾರೆ, ರೇಣುಕಾ ಮಠಪತಿ, ರೇವಣಸಿದ್ದಯ್ನಾ ಮಠಪತಿ, ವೀರಣ್ಣಾ ಶೀಲವಂತ, ಮಲ್ಲಿಕಾರ್ಜುನ ನಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.