ಸೇವೆ ಕಾಯಂಗೆ ಆಗ್ರಹಿಸಿ ಪ್ರತಿಭಟನೆ


Team Udayavani, Mar 25, 2017, 4:46 PM IST

555_1.jpg

ವಿಜಯಪುರ: ಸರ್ಕಾರ ತಮ್ಮ ಸೇವೆಯನ್ನು ಕಾಯಂ ಮಾಡಬೇಕು ಎಂಬುವುದು ಸೇರಿದತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಕ್ರವಾರ ನಗರದ ಸಿದ್ಧೇಶ್ವರ ದೇವಾಸ್ಥಾನದಿಂದ ಹಲಗೆ ಬಾರಿಸುತ್ತ ಕರ್ನಾಟಕ ರಾಜ್ಯ ಮುನ್ಸಿಪಲ್‌ ಕಾರ್ಮಿಕ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪೌರ ಕಾರ್ಮಿಕರು, ಸರ್ಕಾರ ತಮ್ಮ ಸೇವೆ ಕಾಯಂ ವಿಷಯದಲ್ಲಿ ಅನುಸರಿಸುತ್ತಿರುವ ವಿಳಂಬ ಧೋರಣೆ ವಿರುದ್ಧ ಘೋಷಣೆ ಕೂಗಿದರು.

ನಂತರ ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದರು. ಈ ವೇಳೆ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮಾತನಾಡಿ, ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್‌ ಕಾರ್ಮಿಕರ ವಿರೋಧಿಧಿ ನೀತಿ ಹೊಂದಿದೆ.

ರಾಜ್ಯದ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವ ನಿಟ್ಟಿನಲ್ಲಿ ಹಲವು ಸಲ ನೀಡಿದ ಭರವಸೆ ಈಡೇರಿಸಿಲ್ಲ. ಪ್ರಸಕ್ತ ಬಜೆಟ್‌ನಲ್ಲೂ ಭರವಸೆ ಹುಸಿ ಮಾಡಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿ ಪೌರ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತ-ಹಿಂದುಳಿದ, ಅಲ್ಪಸಂಖ್ಯಾತ (ಅಹಿಂದ) ಸಮುದಾಯದವರೇ ಹಚ್ಚಿನ ಸಂಖ್ಯೆಯಲ್ಲಿದ್ದು, ಸೇವೆ ಕಾಯಂ ಮಾಡುವ ವಿಷಯದಲ್ಲಿ ಅಹಿಂದ ಮಂತ್ರ ಜಪಿಸುತ್ತಲೇ ಅಧಿಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಪೌರ ಕಾರ್ಮಿಕರಿಗೆ ಅನ್ಯಾಯ ಎಸಗಿದ್ದಾರೆ ಎಂದು ಕಿಡಿ ಕಾರಿದರು. 

ರಾಜ್ಯ ಸರ್ಕಾರ ಅನುಸಿರುತ್ತಿರುವ ಪೌರ ಕಾರ್ಮಿಕ ವಿರೋಧ ನೀತಿಯನ್ನು ನಮ್ಮ ಸಂಘಟನೆ ಬಲವಾಗಿ ಖಂಡಿಸುವ ಜೊತೆಗೆ ಪರಿಷ್ಕೃತ ವೇತನ ಜಾರಿ ಜೊತೆಗೆ ಸೇವೆ ಕಾಯಂ ಮಾಡಬೇಕು. ನಗರಾಭಿವೃದ್ಧಿ- ಪೌರಾಡಳಿತ ನಿರ್ದೇಶನಾಲಯಗಳು ಹೊರಡಿಸುವ ಗೊಂದಲದ ಸುತ್ತೋಲೆಗಳಿಗೆ ಕಡಿವಾಣ ಹಾಕಬೇಕು.

ಬೆಳಗಿನ ಉಪಹಾರಕ್ಕೆ ಸಂಬಂಧಿಧಿಸಿ ಸರಕಾರ ಸುತ್ತೋಲೆ ಹೊರಡಿಸಿದ್ದು, ಅದಕ್ಕೆ ತಗಲುವ ಹಣಕಾಸು ಭರಿಸುವುದು ಹೇಗೆ ಎಂಬುವುದು ಸ್ಪಷ್ಟಪಡಿಸಲಿಲ್ಲ. ಸಂಪುಟದಲ್ಲಿ ಕೈಗೊಂಡ ಹಲವು ನಿರ್ಣಯಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಇದರಿಂದ ಸರ್ಕಾರ ಕೊಟ್ಟ ಮಾತು ತಪ್ಪಲು ಹುನ್ನಾರ ನಡೆಸಿದೆ ಎಂದು ಹರಿಹಾಯ್ದ ಕಾರ್ಮಿಕ ಮುಖಂಡರು, ರಾಜ್ಯದಲ್ಲಿ ಕೂಡ ಹರ್ಯಾಣ ಮಾದರಿಯಲ್ಲಿ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದುಪಡಿಸಿ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. 

ಸೋಮಪ್ಪ ಆಯಟ್ಟಿ ಮಾತನಾಡಿ, ಪರಿಷ್ಕೃತ ಕನಿಷ್ಠ ವೇತನದ ವಿಷಯದಲ್ಲಿ ಹೊರಡಿಸಿರುವ ಅಧಿಧಿಸೂಚನೆ ಅನುಷ್ಠಾನದಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಪೌರ ಕಾರ್ಮಿಕರಿಗೆ ಕಳೆದ 3 ತಿಂಗಳಿಂದ ವೇತನ ನೀಡಿಲ್ಲ. ಮನೆ-ಮನೆ ಕಸ ಸಂಗ್ರಹಿಸುವ ಟಂಟಂ ಚಾಲಕರಿಗೆ 4 ತಿಂಗಳ ವೇತನ ನೀಡದೇ ಗುತ್ತಿಗೆದಾರರು ಹಂಸೆ ನೀಡುತ್ತಿದ್ದು ಪಾಲಿಕೆ ಅಧಿಧಿಕಾರಿಗಳು ಕೂಡಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು. 

ನಂತರ ಅಪರ ಜಿಲ್ಲಾಧಿಕಾರಿ ಡಾ| ಎಚ್‌.ಬೂದೆಪ್ಪ ಅವರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ದಸ್ತಗೀರ್‌ ಸಾಲೋಟಗಿ, ದಯಾನಂದ ಅಲಿಯಾಬಾದ, ಭಾಸ್ಕರ್‌ ಬೋರಗಿ, ವಿಜಯಕುಮಾರ ಬೆಳ್ಳುಂಡಗಿ, ಗೋವಿಂದ ನಾಯಕ, ತಿಮ್ಮವ್ವ ಮುದ್ದೇಬಿಹಾಳ, ರುಕ್ಮವ್ವ ವಾಘೊರೆ, ದುರ್ಗವ್ವ ಗೊಲ್ಲರ, ಭಾರತಿ ಮಾದರ, ದೀಪಾ ಮಾದರ, ಸದಾಶಿವ ಚಂಚಲಕರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.