ದಲಿತ ಯುವಕನ ಜೊತೆ ವಿವಾಹ, ಗರ್ಭಿಣಿ ಮಗಳನ್ನೇ ಸುಟ್ಟು ಕೊಂದ ಪೋಷಕರು!


Team Udayavani, Jun 6, 2017, 3:36 PM IST

karnataka-marriage.jpg

ತಾಳಿಕೋಟೆ: ಗರ್ಭಿಣಿಯನ್ನು ಆಕೆಯ ಮನೆಯವರೇ ನಡು ರಸ್ತೆಯಲ್ಲಿ ಎಳೆದಾಡಿ ಬರ್ಬರವಾಗಿ ಕೊಲೆ ಮಾಡುವುದರೊಂದಿಗೆ ಸೀಮೆ ಎಣ್ಣೆ ಸುರಿದು ಸುಟ್ಟು ಹಾಕಿದ ಅಮಾನವೀಯ ಘಟನೆ ತಾಳಿಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗುಂಡಕನಾಳ ಗ್ರಾಮದಲ್ಲಿ ನಡೆದಿದೆ.

ಗುಂಡಕನಾಳ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾನುಬೇಗಂ ಅತ್ತಾರ (20) ಕೊಲೆಯಾದ ಮಹಿಳೆ. ಕೊಲೆಗೆ ಹಿಂದೂ ಧರ್ಮದ ಪರಿಶಿಷ್ಠ ಪಂಗಡದ ಯುವಕನೊಂದಿಗೆ ಪ್ರೀತಿಸಿ ಮದುವೆಯಾಗಿದ್ದೆ ಕಾರಣ ಎನ್ನಲಾಗುತ್ತಿದೆ.

ವಿವರ: ಸುಮಾರು 2 ವರ್ಷದಿಂದ ಗುಂಡಕನಾಳ ಗ್ರಾಮದ ಬೇಡರ ಸಮಾಜದ ಸಾಯಬಣ್ಣ (ಮುದಕಪ್ಪ) ಕೊಣ್ಣೂರ ಎಂಬ ಯುವಕನೊಂದಿಗೆ ಬಾನುಬೇಗಂ ಪ್ರೀತಿಸುತ್ತಿದ್ದಳು. ಇದು ಇಬ್ಬರ ಮನೆಯವರಿಗೆ ಗೊತ್ತಾಗಿದ್ದರಿಂದ ಯುವತಿ ಮನೆಯವರು ಬುದ್ಧಿವಾದ ಹೇಳಿದ್ದರೆನ್ನಲಾಗುತ್ತಿದೆ. ಕಳೆದ ಜನೇವರಿ ತಿಂಗಳಿನಲ್ಲಿ ಸಾಯಬಣ್ಣ ಹಾಗೂ ಬಾನುಬೇಗಂ ಗೋವಾಕ್ಕೆ ಫಲಾಯನಗೈದಿದ್ದರು.

ನಂತರ ಯುವತಿ ಪೋಷಕರು ಲೈಂಗಿಕ ದೌರ್ಜನ್ಯದ ದೂರನ್ನು ತಾಳಿಕೋಟೆ ಠಾಣೆಯಲ್ಲಿ ದಾಖಲಿಸಿದ್ದರು. ಬಾನುಬೇಗಂ ಗರ್ಬಿಣಿಯಾಗಿದ್ದರಿಂದ ಸಾಯಬಣ್ಣ ಮುದ್ದೇಬಿಹಾಳಕ್ಕೆ ಯುವತಿಯೊಂದಿಗೆ ಆಗಮಿಸಿ ಸಬ್‌ ರಜಿಸ್ಟರ್‌ ನೋಂದಣಿ ಕಚೇರಿಯಲ್ಲಿ ಕಾನುನೂ ಬದ್ಧ ಮದುವೆಯಾಗಿ ಗುಂಡಕನಾಳ ಗ್ರಾಮಕ್ಕೆ 4 ದಿನಗಳ ಹಿಂದೆ ಬಂದು ನೆಲೆಸಿದ್ದರು. ಇದನ್ನು ಅರಿತ ಪೋಷಕರು
ಸಮುದಾಯದ ಮರ್ಯಾದೆ ಹಾಳು ಮಾಡಿದ್ದಾರೆಂದು ಬಾನುಬೇಗಂ ಮನೆಯವರಾದ ಇಬ್ರಾಹಿಂ ಅತ್ತಾರ, ಅಕ್ಬರ್ ಮಹ್ಮದಸಾಬ ಅತ್ತಾರ, ಇಮಾಮಸಾಬ ಅತ್ತಾರ, ರಂಜಾನಬಿ ಅತ್ತಾರ, ದಾವಲಬಿಸಲ್ಮಾ ಜಮಾದಾರ, ಅಜಮಾ ಜಿಲಾನಿ ದಖನಿ, ಜಲಾನಿ
ದಖನಿ, ದಾವಲಬಿ ದನ್ನೂರ ಒಳಗೊಂಡು ಇನ್ನಿತರರು ಗುಂಪು ಯುವಕನ ಮನೆಗೆ ನುಗ್ಗಿ ಯುವಕನನ್ನು ಬಡಿಗೆ ಮತ್ತು ಚೂರಿಗಳಿಂದ ಇರಿದು ಕೊಲೆಮಾಡಲು ಯತ್ನಿಸಿದ್ದಾರೆ. ಇವರಿಂದ ತಪ್ಪಿಸಿಕೊಂಡು ಸಾಯಬಣ್ಣ ಪರಾರಿಯಾಗಿದ್ದಾನೆ. 

ಬಾನುಬೇಗಂಳನ್ನು ತಲೆ ಮತ್ತು ಕೈಕಾಲು ಮುರಿಯುವ ಹಾಗೆ ಹೊಡೆದು ನಡು ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾರೆ. ನಂತರ ಎಲ್ಲರೂ ಸೇರಿ ಮಹಿಳೆ ಮೈಮೇಲೆ ಸೀಮೆ ಎಣ್ಣೆ ಸುರುವಿ ಸುಟ್ಟುಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಬಾನುಬೇಗಂ ಪತಿ ಸಾಯಬಣ್ಣ ಕೊಣ್ಣೂರ ತಾಳಿಕೋಟೆ ಠಾಣೆಗೆ ದೂರು ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಪ್ರಭುಗೌಡ ಪಾಟೀಲ, ಸಿಪಿಐ ಶಿರಹಟ್ಟಿ, ಪಿಎಸ್‌ಐ ಎಂ.ಬಿ. ಬಿರಾದಾರ ಭೇಟಿ
ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.