ಬಡ ಕುಟುಂಬಕ್ಕೆ  ದೊರೆಯುತ್ತಿಲ್ಲ ಸವಲತ್ತು 


Team Udayavani, Sep 20, 2017, 6:03 PM IST

20-Vijayapura-1.jpg

ಇಂಡಿ: ಸರ್ಕಾರದ ಸವಲತ್ತುಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬುದಕ್ಕೆ ತಾಲೂಕಿನ ರೋಡಗಿ ಗ್ರಾಮದ ಕುಟುಂಬದ ಸ್ಥಿತಿ ತಕ್ಕ ನಿದರ್ಶನವಾಗಿದೆ.

ರೋಡಗಿ ಗ್ರಾಮದ ಭೀಮಶ್ಯಾ ಕಲ್ಲಪ್ಪ ಮೋಸಲಗಿ ಹಾಗೂ ಪತ್ನಿ ಗಂಗಾಬಾಯಿ ಭೀಮಶ್ಯಾ ಮೋಸಲಗಿ ಅವರು ಸರ್ಕಾರದ ಸೌಲಭ್ಯ ಪಡೆಯಲು ಹರಸಾಹಸ ಡುವಂತಾಗಿದೆ.ಸರ್ಕಾರ ಬಡ ಜನರಿಗಾಗಿ ಹಾಗೂ ಹಿಂದುಳಿದ ವರ್ಗದವರಿಗೆ ಸಾಕಷ್ಟು ಯೋಜನೆ ಜಾರಿ ಮಾಡಿದರೂ ಬಡವರಿಗೆ ಮುಟ್ಟುತ್ತಿಲ್ಲ.ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರ್ಯೋನ್ಮುಖವಾಗದೆ ಇರುವುದೇ ಇದಕ್ಕೆ ಕಾರಣವಾಗಿದೆ.

ನಮ್ಮದು ಕಡುಬಡತನದ ಕುಟುಂಬ. ಮನೆ-ಹೊಲ ಇಲ್ಲ. ಮೂವರು ಮಕ್ಕಳಿದ್ದಾರೆ. ಸರಕಾರ ಕಡುಬಡವರಿಗೆ ಕೊಡುವ ಮನೆಗಾಗಿ ಸಂಬಂಧಿಸಿದ ಜನಪ್ರತಿನಿಧಿ ಗಳಿಗೆ ಹಾಗೂ ಅ ಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ
ಪ್ರಯೋಜನವಾಗಿಲ್ಲ ಎನ್ನುತ್ತಾರೆ ಭೀಮಶ್ಯಾಕಲ್ಲಪ್ಪ ಮೋಸಲಗಿ.

ಮೂರು ತಲೆಮಾರಿನ ಹಿಂದೆ ನಮ್ಮ ಮುತ್ತಾತ ಹೊಟ್ಟೆ ತುಂಬಿಸಿಕೊಳ್ಳಲು ದುಡಿಮೆ ಅರಸಿ ರೋಡಗಿ ಗ್ರಾಮಕ್ಕೆ ವಲಸೆ ಬಂದಿದ್ದೇವೆ. ಆದರೆ, ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ.ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ಅವರ ಗೋಳು. ರೋಡಗಿ ಗ್ರಾಮದ ಸ್ವಾಮಿಗಳು ತಮ್ಮ ಹೊಲದಲ್ಲಿ ಜಾಗ ಕೊಟ್ಟಿದ್ದು, ಅಲ್ಲಿಯೇ ವಾಸವಾಗಿದ್ದೇವೆ. ಸ್ವಂತ ಮನೆಯಿಲ್ಲ. ಸೂರು ಕಲ್ಪಿಸಲು ಗ್ರಾಮ ಪಂಚಾಯತ್‌ ಮುಂದಾಗುತ್ತಿಲ್ಲ. ಪಿಡಿಒ ಹಾಗೂ ಗ್ರಾಪಂ ಸದಸ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ಕೃಷಿ ಕೂಲಿಯ ಮೇಲೆ ನಮ್ಮ ಉಪಜೀವನ. ಸರಕಾರ ಮನೆಯಿಲ್ಲದ ಕಡುಬಡವರಿಗೆ ಮನೆಗಳನ್ನು ನೀಡುವ ಯೋಜನೆಗಳನ್ನು ಜಾರಿಗೆ ತಂದಿದೆ. ಅವೆಲ್ಲ ಉಳ್ಳವರ ಪಾಲಾಗುತ್ತಿದ್ದು, ನಮಗೆ ಮಾತ್ರ ದೊರಕಿಲ್ಲ ಎಂದು ಕುಟುಂಬ
ಗೋಳು ತೋಡಿಕೊಂಡಿದೆ.

ಭೀಮಶ್ಯಾ ಮೋಸಲಗಿ, ಗಂಗಾಬಾಯಿ ಮೋಸಲಗಿ ಅವರಿಗೆ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ
ಸೇರ್ಪಡೆ ಮಾಡಲಾಗಿದ್ದು ಮೇಲಧಿಕಾರಿಗಳ ಒಪ್ಪಿಗೆ ದೊರೆತರೆ ಮನೆ ಮಂಜೂರಾಗಲಿದೆ.
ಅಶೋಕ, ಪಿಡಿಒ

ಬಡಕುಟುಂಬಕ್ಕೆ ಸೂರು ಕಲ್ಪಿಸಲಾಗುವುದು. ಗ್ರಾಪಂನ ಫಲಾನುಭವಿಗಳ ಪಟ್ಟಿಯಲ್ಲಿ ಕುಟುಂಬದ ಹೆಸರಿದೆ.
ಪ್ರಭು ಬಬಲೇಶ್ವರ,
ಗ್ರಾಪಂ ಸದಸ್ಯ

ಬಡಕುಟುಂಬಕ್ಕೆ ಸೂರು ಕಲ್ಪಿಸಲು ಪ್ರಯತ್ನಿಸುವೆ. ನಾನು ಪುಣೆ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಮರಳಿದ ಬಳಿಕ ಗ್ರಾಪಂ ಸದಸ್ಯರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವೆ.
ಶಿರಾಜ ಕೊರಬು,
ಲಾಳಸಂಗಿ ಗ್ರಾಪಂ ಅಧ್ಯಕ್ಷ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.